Just In
- 8 hrs ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 8 hrs ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 9 hrs ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 9 hrs ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Movies "ನಾವು ದಕ್ಷಿಣ ಭಾರತದವರಾಗಿದ್ರೂ ಭಾಷೆ ಬರುತ್ತೆ, ಸುಂದರವಾಗಿಯೂ ಇದ್ದೇವೆ"; ನಟಿ ಪ್ರಿಯಾಮಣಿ
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡ್ರಿಂಕ್ ಅಂಡ್ ಡ್ರೈವ್ ಮಾಡುವವರ ವಾಹನ ವಶಕ್ಕೆ ಪಡೆಯದಂತೆ ಆದೇಶ ಹೊರಡಿಸಿದ ಹೈಕೋರ್ಟ್
ಇನ್ನು ಮುಂದೆ ಕುಡಿದು ವಾಹನ ಚಲಾಯಿಸುವವರಿಂದ ವಾಹನಗಳನ್ನು ವಶಪಡಿಸಿಕೊಳ್ಳಲು ಪೊಲೀಸರಿಗೆ ಯಾವುದೇ ಅಧಿಕಾರವಿಲ್ಲ. ಬದಲಿಗೆ ವಾಹನ ಸವಾರರ ಜೊತೆಗಿರುವ ಮದ್ಯ ಸೇವಿಸದ ವ್ಯಕ್ತಿ ವಾಹನ ಚಲಾಯಿಸಲು ಅವಕಾಶ ನೀಡಬಹುದು ಎಂದು ತೆಲಂಗಾಣ ಹೈಕೋರ್ಟ್ ಹೇಳಿದೆ. ಜಪ್ತಿ ಮಾಡಲಾದ ವಾಹನಗಳನ್ನು ವಾಪಸ್ ಪಡೆಯಲು ದೀರ್ಘ ಕಾಲ ಕಾಯುತ್ತಿರುವುದನ್ನು ಪ್ರಶ್ನಿಸಿ ವಾಹನ ಮಾಲೀಕರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಹೈ ಕೋರ್ಟ್ ಈ ತೀರ್ಪು ನೀಡಿದೆ.
ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಲಕ್ಷ್ಮಣ್ ಅವರು, ಕುಡಿದು ವಾಹನ ಚಲಾಯಿಸುವವರ ಜೊತೆಯಲ್ಲಿ ಯಾರೂ ಇಲ್ಲದಿದ್ದಲ್ಲಿ ಸಂಬಂಧಿಕರಿಗೆ ಮಾಹಿತಿ ನೀಡಬೇಕು. ಅಥವಾ ಮದ್ಯಪಾನ ಮಾಡಿದ ವ್ಯಕ್ತಿಯ ಸ್ನೇಹಿತರು ವಾಹನವನ್ನು ವಶಕ್ಕೆ ತೆಗೆದುಕೊಳ್ಳಬೇಕು.
ಆ ವಾಹನವನ್ನು ಸಂಗ್ರಹಿಸಲು ಯಾರೂ ಮುಂದೆ ಬರದಿದ್ದರೆ ಮಾತ್ರ ಪೊಲೀಸರು ವಾಹನವನ್ನು ತೆಗೆದುಕೊಂಡು ಹೋಗಬಹುದು ಎಂದೂ ಆದೇಶದಲ್ಲಿ ತಿಳಿಸಲಾಗಿದೆ. ಪೊಲೀಸರು ವಾಹನವನ್ನು ಸುರಕ್ಷಿತ ಸ್ಥಳಕ್ಕೆ ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಕೊಂಡೊಯ್ಯಬಹುದು. ಮಾಲೀಕರು ಅಥವಾ ಯಾವುದೇ ಅಧಿಕೃತ ವ್ಯಕ್ತಿ ಅದನ್ನು ತೆಗೆದುಕೊಳ್ಳಲು ಬಂದರೆ ಅವರು ವಾಹನವನ್ನು ಬಿಡಬೇಕಾಗುತ್ತದೆ ಎಂದು ಹೈಕೋರ್ಟ್ ತಿಳಿಸಿದೆ.
ಇದೇ ವೇಳೆ ನ್ಯಾಯಮೂರ್ತಿ ಕೆ.ಲಕ್ಷ್ಮಣ್ ಅವರು ಮದ್ಯಪಾನ ಮಾಡಿದ ಚಾಲಕರಿಗೆ ವಾಹನ ಚಲಾಯಿಸಲು ಅವಕಾಶ ನೀಡಬಾರದು ಎಂದು ಹೇಳಿದ್ದಾರೆ. ಯಾವುದೇ ಪೊಲೀಸ್ ಅಧಿಕಾರಿಯು ಚಾಲಕ ಅಥವಾ ಮಾಲೀಕರನ್ನು ಅಥವಾ ಇಬ್ಬರನ್ನೂ ವಿಚಾರಣೆಗೆ ಒಳಪಡಿಸುವುದು ಅವಶ್ಯಕ ಎಂಬ ತೀರ್ಮಾನಕ್ಕೆ ಬಂದರೆ, ಅವರು ವಾಹನವನ್ನು ವಶಪಡಿಸಿಕೊಂಡ ದಿನದಿಂದ ಮೂರು ದಿನಗಳಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ಅವರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಬೇಕು ಎಂದು ಅವರು ಹೇಳಿದ್ದಾರೆ.
ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಾಸಿಕ್ಯೂಷನ್ ಮುಗಿದ ನಂತರ ವಾಹನವನ್ನು ವಶಕ್ಕೆ ಪಡೆದ ಅಧಿಕಾರಿಯಿಂದ ಬಿಡುಗಡೆ ಮಾಡಲಾಗುತ್ತದೆ. ಚಾರ್ಜ್ಶೀಟ್ ಸರಿಯಾಗಿದ್ದರೆ ವಶಪಡಿಸಿಕೊಂಡ ದಿನದಿಂದ ಮೂರು ದಿನಗಳೊಳಗೆ ಆರೋಪಪಟ್ಟಿಗಳನ್ನು ಸ್ವೀಕರಿಸುವಂತೆ ಆದೇಶವು ಮ್ಯಾಜಿಸ್ಟ್ರೇಟ್ಗಳಿಗೆ ನಿರ್ದೇಶಿಸಿದೆ. ಯಾರೂ ವಾಹನದ ಕಸ್ಟಡಿಯ ಹಕ್ಕು ಪಡೆಯದಿದ್ದರೆ, ಪೊಲೀಸರು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂದು ಆದೇಶದಲ್ಲಿ ಹೇಳಲಾಗಿದೆ.
ಈ ನಿರ್ದೇಶನಗಳನ್ನು ಉಲ್ಲಂಘಿಸುವವರ ವಿರುದ್ಧ ನ್ಯಾಯಂಗ ನಿಂದನೆ ಪ್ರಕರಣ ದಾಖಲಿಸಲಾಗುತ್ತದೆ ಎಂದು ನ್ಯಾಯಾಧೀಶರು ಎಚ್ಚರಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ತೆಲಂಗಾಣದಲ್ಲಿ ಹೊಸ ನಿಯಮವನ್ನು ಜಾರಿಗೆ ತರಲಾಗಿತ್ತು. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿ ಸಿಕ್ಕಿಬಿದ್ದರೆ ಪೊಲೀಸರು ಸ್ಥಳದಲ್ಲೇ ಲೈಸನ್ಸ್ ರದ್ದುಪಡಿಸಿ ಜೈಲು ಶಿಕ್ಷೆಗೆ ಗುರಿಪಡಿಸಬಹುದು ಎಂದು ಹೊಸ ನಿಯಮ ಹೇಳುತ್ತದೆ.
ಕುಡಿದು ವಾಹನ ಚಲಾಯಿಸುವ ಪ್ರಕರಣಗಳು ಕಡಿಮೆಯಾಗುತ್ತಿಲ್ಲ. ಅದಕ್ಕಾಗಿಯೇ ಈ ಕ್ರಮ ಕೈಗೊಳ್ಳಲಾಗಿದೆ. ಟೈಮ್ಸ್ ಆಫ್ ಇಂಡಿಯಾ ಮಾಹಿತಿಯ ಪ್ರಕಾರ, 2021 ರಲ್ಲಿ ಹೈದರಾಬಾದ್ನಲ್ಲಿ 16,500 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಂದರೆ ದಿನಕ್ಕೆ 45 ಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು 7,269 ಪ್ರಕರಣಗಳಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ಆದೇಶದ ನಂತರ ಹೈದರಾಬಾದ್ ಹಾಗೂ ಸೈಬರಾಬಾದ್ ಪೊಲೀಸರು ವಾಹನಗಳನ್ನು ಹಿಂತಿರುಗಿಸುತ್ತಿದ್ದಾರೆ.
ವಾಹನ ಸವಾರರ ಸುರಕ್ಷತೆಗಾಗಿ ಹಾಗೂ ರಸ್ತೆ ಅಪಘಾತಗಳಾಗುವುದನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಹೊಸ ಹೊಸ ನಿಯಮಗಳನ್ನು ಜಾರಿಗೊಳಿಸುತ್ತಿವೆ. ಅದರಲ್ಲೂ ದ್ವಿಚಕ್ರ ವಾಹನಗಳ ಬಗ್ಗೆ ಸರ್ಕಾರಗಳು ಹೆಚ್ಚು ನಿಯಮಗಳನ್ನು ರೂಪಿಸುತ್ತವೆ. ಅಪಘಾತದಿಂದ ಪ್ರಯಾಣಿಕರನ್ನು ಸಂಪೂರ್ಣವಾಗಿ ರಕ್ಷಿಸುವ ಯಾವುದೇ ದ್ವಿಚಕ್ರ ವಾಹನಗಳು ಸದ್ಯಕ್ಕೆ ಮಾರಾಟವಾಗುತ್ತಿಲ್ಲ.
ನಾಲ್ಕು ಚಕ್ರದ ವಾಹನಗಳಿಗಿಂತ ದ್ವಿಚಕ್ರ ವಾಹನಗಳು ಹೆಚ್ಚು ಕಳ್ಳತನವಾಗುತ್ತವೆ. ಕಳ್ಳತನವಾಗಿರುವ ದ್ವಿಚಕ್ರ ವಾಹನಗಳನ್ನು ಹೆಚ್ಚಾಗಿ ಅಪರಾಧ ಕೃತ್ಯಗಳಿಗೆಬಳಸಲಾಗುತ್ತದೆ. ಪ್ರತಿಯೊಂದು ವಾಹನವನ್ನು ಅದರ ಮಾಲೀಕರೊಂದಿಗೆ ಗುರುತಿಸುವುದು ಮುಖ್ಯವಾಗಿದೆ. ವಾಹನದ ಮುಂಭಾಗ ಹಾಗೂ ಹಿಂಭಾಗದಲ್ಲಿ ಅಳವಡಿಸಿರುವ ನಂಬರ್ ಪ್ಲೇಟ್ಗಳು ಈ ನಿಟ್ಟಿನಲ್ಲಿ ಪ್ರಮುಖ ಪಾತ್ರವಹಿಸುತ್ತವೆ.
ನಂಬರ್ ಪ್ಲೇಟ್ಗಳು ವಾಹನದ ಮಾಲೀಕರನ್ನು ಹೊರತುಪಡಿಸಿ ಬೇರೆ ಯಾರಾದರೂ ಅಪರಾಧದಲ್ಲಿ ಭಾಗಿಯಾಗಿದ್ದರೆ ಅಂತಹವರನ್ನು ಪತ್ತೆ ಹಚ್ಚಲು ನೆರವಾಗುತ್ತವೆ. ಆದರೆ ಬಹುತೇಕ ವಾಹನ ಸವಾರರು ತಮ್ಮ ವಾಹನಗಳಲ್ಲಿ ಸರಿಯಾಗಿ ನಂಬರ್ ಪ್ಲೇಟ್ಗಳನ್ನು ಅಳವಡಿಸಿಕೊಳ್ಳುವುದಿಲ್ಲ. ಸರಿಯಾಗಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳದೇ ಇರುವುದನ್ನು ಸಹ ಸಂಚಾರಿ ನಿಯಮ ಉಲ್ಲಂಘನೆ ಎಂದು ಪರಿಗಣಿಸಲಾಗುತ್ತದೆ.
ಈ ನಿಯಮವನ್ನು ಸರಿಯಾಗಿ ಪಾಲಿಸದವರ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸುತ್ತಲೇ ಇರುತ್ತಾರೆ. ಇತ್ತೀಚಿಗೆ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ವಾಹನಗಳಲ್ಲಿ ಸರಿಯಾದ ನಂಬರ್ ಪ್ಲೇಟ್ ಹೊಂದಿಲ್ಲದ ಸುಮಾರು 2,343 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ 2,343 ಮಂದಿಯಲ್ಲಿ ಹಲವರು ಮೋಟಾರು ವಾಹನ ಕಾಯ್ದೆಯಡಿ ಸರಿಯಾದ ನಂಬರ್ ಪ್ಲೇಟ್ ಹೊಂದಿರಲಿಲ್ಲ.
ಕೇಂದ್ರ ಸಾರಿಗೆ ಇಲಾಖೆಯು ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುವ ಮಕ್ಕಳ ಸುರಕ್ಷತೆಗಾಗಿ ಹೊಸ ಪ್ರಸ್ತಾವನೆಯನ್ನು ಮುಂದಿಟ್ಟಿದೆ. 4 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗು ದ್ವಿಚಕ್ರ ವಾಹನಗಳಲ್ಲಿ ಕುಳಿತಿದ್ದರೆ ಅಂತಹ ವಾಹನಗಳ ಗರಿಷ್ಠ ವೇಗ ಗಂಟೆಗೆ 40 ಕಿ.ಮೀ ಮೀರಬಾರದು ಎಂದು ಈ ಪ್ರಸ್ತಾವನೆಯಲ್ಲಿ ಹೇಳಲಾಗಿದೆ. ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುವ ಮಕ್ಕಳ ಸುರಕ್ಷತೆಗಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಮಗು ಹೆಲ್ಮೆಟ್ ಧರಿಸಿರುವುದನ್ನು ದ್ವಿಚಕ್ರ ವಾಹನ ಸವಾರ ಖಚಿತಪಡಿಸಿಕೊಳ್ಳಬೇಕು ಎಂದು ಇಲಾಖೆಯ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ಅಧಿಸೂಚನೆಯಲ್ಲಿ ಉಲ್ಲೇಖಿಸಲಾದ ಇನ್ನೊಂದು ಮಾರ್ಗಸೂಚಿಯ ಅನ್ವಯ ದ್ವಿಚಕ್ರ ವಾಹನ ಸವಾರ ಮಗುವಿನ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಾಲ್ಕು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಸಾಕಷ್ಟು ರಕ್ಷಣಾತ್ಮಕ ಗೇರ್ಗಳನ್ನು ಧರಿಸಿರುವುದನ್ನು ಖಚಿತಪಡಿಸಿಕೊಳ್ಳಬೇಕು.
ಮಕ್ಕಳಿಗೆ ಸುರಕ್ಷತಾ ಕವರ್ ವೆಸ್ಟ್ನಂತಿದ್ದು, ಅದನ್ನು ದ್ವಿಚಕ್ರ ಸವಾರರು ಪಟ್ಟಿಗಳ ಸಹಾಯದಿಂದ ಸೊಂಟಕ್ಕೆ ಕಟ್ಟಿ ಕೊಳ್ಳಬಹುದು. ಈ ಸುರಕ್ಷತಾ ಕವರ್ ಅಪಘಾತದ ಸಮಯದಲ್ಲಿ ಮಗುವನ್ನು ದ್ವಿಚಕ್ರ ವಾಹನದಿಂದ ಕೆಳಗೆ ಬೀಳದಂತೆ ರಕ್ಷಿಸುತ್ತದೆ. ಸುರಕ್ಷತಾ ಸರಂಜಾಮು ಕುರಿತು ವಿವರಿಸಿರುವ ಸಾರಿಗೆ ಇಲಾಖೆಯು ಈ ಸರಂಜಾಮು ದ್ವಿಚಕ್ರ ವಾಹನದಲ್ಲಿರುವ ಮಗು ಸವಾರನಿಗೆ ಸುರಕ್ಷಿತವಾಗಿ ಜೋಡಿಸಲ್ಪಟ್ಟಿರುವುದನ್ನು ಖಚಿತಪಡಿಸುತ್ತದೆ ಎಂದು ಹೇಳಿದೆ. ರಸ್ತೆ ಸಾರಿಗೆ ಇಲಾಖೆಯು ತನ್ನ ಪ್ರಸ್ತಾವನೆಗೆ ಸಾರ್ವಜನಿಕರಿಂದ ಆಕ್ಷೇಪಣೆಗಳು ಆಹ್ವಾನಿಸಿ, ಸಲಹೆಗಳನ್ನು ಕೇಳಿದೆ. ಮೋಟಾರು ವಾಹನ ಕಾಯಿದೆ 1989 ರ ಅಡಿಯಲ್ಲಿ, ಬೈಕ್ ಸವಾರ ಹಾಗೂ ಹಿಂಬದಿ ಸವಾರರಿಗೆ ಹೆಲ್ಮೆಟ್ ಬಳಕೆ ಕಡ್ಡಾಯವಾಗಿದೆ.
ಇದು ಮಾತ್ರವಲ್ಲದೇ ಐಎಸ್ಐ ಮಾರ್ಕ್ ಇಲ್ಲದ ಹೆಲ್ಮೆಟ್ಗಳನ್ನು ಮಾರಾಟ ಮಾಡುವುದನ್ನು ಅಪರಾಧವೆಂದು ಪರಿಗಣಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, 2016 ರಲ್ಲಿ ಭಾರತದಲ್ಲಿ 3,00,000 ಜನರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದ್ದಾರೆ. ಅದರಲ್ಲಿ 40% ನಷ್ಟು ಜನರು ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಚಾಲಕರು. ಅದೇ ರೀತಿ 2018 ರಲ್ಲಿ ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸಿದ್ದ 43,614 ಮಂದಿ ಸಾವನ್ನಪ್ಪಿದ್ದಾರೆ. ಇತ್ತೀಚೆಗಷ್ಟೇ ಕೇರಳ ಸರ್ಕಾರವು ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುವಾಗ ಕೊಡೆಗಳನ್ನು ಬಳಸದಂತೆ ಹೊಸ ನಿಯಮವನ್ನು ಜಾರಿಗೊಳಿಸಿದೆ.
ಗಮನಿಸಿ: ಈ ಲೇಖನದಲ್ಲಿರುವ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.