Just In
- 1 hr ago ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- 1 hr ago TVS iQube: ಲಕ್ಷಾಂತರ ಭಾರತೀಯರ ನೆಚ್ಚಿನ ಸ್ಕೂಟರ್ನ ಡೌನ್ಪೇಮೆಂಟ್, ಇಎಂಐ, ಲೋನ್ ವಿವರ!
- 1 hr ago viral video: ಬೆಂಗಳೂರಿನಲ್ಲಿ ಮಾತ್ರ ಸಾಧ್ಯ: ಹೆಣ್ಮಗು.. ಹೆಣ್ಮಗು ಓಹ್.. ಎಂದ ನೆಟ್ಟಿಗರು!
- 2 hrs ago ಯುಗಾದಿ ಜಾತ್ರೆ: ಶ್ರೀಶೈಲ ಮಲ್ಲಿಕಾರ್ಜುನನ ಭಕ್ತರಿಗೆ ಸಿಹಿಸುದ್ದಿ.. NWKRTCಯಿಂದ ವಿಶೇಷ ಬಸ್ ಸೇವೆ
Don't Miss!
- News ಎನ್ಕೌಂಟರ್ ಮಾಡುವುದಾಗಿ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Movies 'ಉಳಿದವರು ಕಂಡಂತೆ' ದಶಕದ ಸಂಭ್ರಮ; ಟ್ವೀಟ್ ಮಾಡಿ 'ರಿಚರ್ಡ್ ಆಂಟನಿ' ಬಗ್ಗೆ ಮೌನ ಮುರಿದ ರಕ್ಷಿತ್
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವಲಿಂಗ ಪತ್ತೆಹಚ್ಚಲು ಹೆದ್ದಾರಿಯಲ್ಲೇ ಗುಂಡಿ ತೋಡಿದ ಭೂಪ !!
ವ್ಯಕ್ತಿಯೊಬ್ಬ ಶಿವಲಿಂಗವನ್ನು ಪತ್ತೆ ಹಚ್ಚುವ ಸಲುವಾಗಿ ರಾಷ್ಟ್ರೀಯ ಹೆದ್ದಾರಿಯನ್ನು ಅಗೆದ ಘಟನೆ ತೆಲಂಗಾಣ ರಾಜ್ಯದಲ್ಲಿ ನೆಡೆದಿದ್ದು, ಎಲ್ಲರನ್ನು ಉಬ್ಬೇರಿಸುವಂತೆ ಮಾಡಿದೆ.
ಧರ್ಮದಲ್ಲಿ ಹೆಸರಿನಲ್ಲಿ ನೆಡೆದುಕೊಂಡು ಬಂದಿರುವ ಮೂಡ ನಂಬಿಕೆ ಮಾನವನನ್ನು ಎಷ್ಟರ ಮಟ್ಟಿಗೆ ಮೂರ್ಖಗೊಳಿಸುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿ ಎನ್ನಬಹುದು.
ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಇತ್ತೀಚೆಗೆ ಭಾರತ ಹೆಚ್ಚು ಬೆಳವಣಿಗೆಯಾಗುತ್ತಿದ್ದು, ದೇಶದ ನಾಗರಿಕರು ಹೆಚ್ಚು ಪ್ರಜ್ಞಾವಂತರಾಗುತ್ತಿದ್ದಾರೆ. ಆದರೆ ನಂಬಿದರೆ ನಂಬಿ ಬಿಟ್ಟರೆ ಬಿಡಿ, ಭಾರತ ಉನ್ನತ ಮಟ್ಟಕ್ಕೆ ಏರಲು ಬಹಳಷ್ಟು ವರ್ಷಗಳೇ ಬೇಕು.
ಯಾಕ್ ಹೇಗೆ ಹೇಳ್ತಿದಾರೆ, ಅನ್ಕೊಂಡ್ರಾ ? ಹೌದು, ಈ ಮೂಢನಂಬಿಕೆ ಭಾರತದಲ್ಲಿ ಇರುವ ವರೆಗೂ ಖಂಡಿತ ನಮ್ಮ ದೇಶಕ್ಕೆ ಒಳಿತಾಗುವ ಯಾವುದೇ ಲಕ್ಷಣಗಳು ಕಂಡುಬರುವುದಿಲ್ಲ.
ತೆಲಂಗಾಣ ಈ ಮಹಾನ್ ವ್ಯಕ್ತಿ ಮಾಡಿರುವ ಘನಕಾರ್ಯ ಖಂಡಿತ ನಿಮಗೆ ನಗಬೇಕೋ ಇಲ್ಲ ಅಳಬೇಕೊ ಎನ್ನುವ ಪರಿಸ್ಥಿತಿಗೆ ದೂಡುವುದಂತೂ ಖಂಡಿತ.
ವ್ಯಕ್ತಿಯೊಬ್ಬ ಶಿವಲಿಂಗವನ್ನು ಪತ್ತೆ ಹಚ್ಚುವ ಸಲುವಾಗಿ ರಾಷ್ಟ್ರೀಯ ಹೆದ್ದಾರಿಯನ್ನು ಅಗೆದ ಘಟನೆ ತೆಲಂಗಾಣ ರಾಜ್ಯದಲ್ಲಿ ನೆಡೆದಿದ್ದು, ಎಲ್ಲರನ್ನು ಉಬ್ಬೇರಿಸುವಂತೆ ಮಾಡಿದೆ.
"ವಾರಾಂಗಲ್- ಹೈದರಬಾದ್ ರಾಷ್ಟ್ರೀಯ ಹೆದ್ದಾರಿಯಡಿಯಲ್ಲಿ ಶಿವಲಿಂಗವೊಂದು ಇದೆ" ಎಂದು ಸ್ವಯಂ ಘೋಷಿತ ದೇವಮಾನವ ಲಖನ್ ಮನೋಜ್ ನಂಬಿಸಿದ್ದ ಕಾರಣ ಈ ವ್ಯಕ್ತಿ ಈ ಕೃತ್ಯಕ್ಕೆ ಕೈಹಾಕಿದ್ದಾನೆ ಎನ್ನಲಾಗಿದೆ.
ಸೋಮವಾರ ವಿಶೇಷ ಪ್ರಾರ್ಥನೆ ಸಲ್ಲಿಸಿದ ನಂತರ ಶಿವಲಿಂಗ ಶೋಧ ಕಾರ್ಯಕ್ರಮ ಆರಂಭವಾಗಿದ್ದು, ಈತನೊಂದಿಗೆ ಗ್ರಾಮಸ್ಥರು ಕೂಡಾ ಶೋಧ ಕಾರ್ಯದಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.
ಶಿವಲಿಂಗ ಇರುವ ಜಾಗ ಮನೋಜ್ ಅವರು ಪ್ರತೀ ಸೋಮವಾರ ಶಿವಲಿಂಗ ಇದೆ ಎಂದು ಹೇಳಲಾಗುತ್ತಿರುವ ಜಾಗಕ್ಕೆ ಪೂಜೆ ಸಲ್ಲಿಸುತ್ತಿದ್ದರು.
ಆದರೆ ರಾಷ್ಟ್ರೀಯ ಹೆದ್ದಾರಿ ಮಧ್ಯೆ ಅಗೆಯಲು ಆರಂಭಿಸಿದಾಗ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ವಿಷಯ ತಿಳಿದು ತೆಲಂಗಾಣ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ, ಸ್ವಯಂಘೋಷಿತ ದೇವಮಾನವ ಮನೋಜ್ ,ಗ್ರಾಮದ ಮುಖ್ಯಸ್ಥ ಹಾಗೂ ಉಳಿದ ಐದು ಮಂದಿಯನ್ನು ಬಂಧಿಸಿದ್ದರು.