Just In
- 1 hr ago Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
- 1 hr ago ಬೈಕಿನಂತೆ ಮೈಲೇಜ್ ಕೊಡೋದ್ರಿಂದ ಈ ಹ್ಯುಂಡೈ ಕಾರಿನ ಮಾಲೀಕರು ಫುಲ್ ಖುಷ್
- 1 hr ago ಮಹೀಂದ್ರಾ ಪ್ರೀಯರಿಗೆ ಭಾರೀ ಸಿಹಿಸುದ್ದಿ: ಗಲ್ಲಿಗಲ್ಲಿಯಲ್ಲಿ ಶುರುವಾಗುತ್ತಾ ಸ್ಕಾರ್ಪಿಯೋ ಹವಾ!
- 2 hrs ago ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಬೆಸ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡುತ್ತವೆ!
Don't Miss!
- News ವೃದ್ಧರ ಗೌಪ್ಯ ಮತದಾನ ವೇಳೆ ಅಕ್ರಮ: ಸಿಪಿಎಂ ಏಜೆಂಟ್ ಹಸ್ತಕ್ಷೇಪ: Video Viral
- Technology Vivo: ಶೀಘ್ರದಲ್ಲೇ ವಿವೋ Y38 5G ಸ್ಮಾರ್ಟ್ಫೋನ್; ವಿನ್ಯಾಸ ಮತ್ತು ಫೀಚರ್ಸ್ ಲೀಕ್
- Sports DC vs SRH: ಹೈದರಾಬಾದ್ ಬ್ಯಾಟರ್ಗಳನ್ನು ಕಟ್ಟಿಹಾಕಲಿದ್ದಾರಾ ಡೆಲ್ಲಿ ಬೌಲರ್ಸ್?; ಸಂಭಾವ್ಯ ಆಡುವ 11ರ ಬಳಗ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Movies ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಕಷ್ಟದ ಸಂದರ್ಭದಲ್ಲೂ ಅಧಿಕಾರಿಗಳಿಗೆ ಐಷಾರಾಮಿ ಕಾರು ನೀಡಿದ ಸರ್ಕಾರ
ಇಡೀ ದೇಶವೇ ಕರೋನಾ ಮಹಾಮಾರಿಯ ಸಂಕಷ್ಟದಿಂದ ಹೊರಬರಲು ಸರ್ಕಾರ ಮತ್ತು ವೈದ್ಯರು ಹರಸಾಹಸ ಪಡುತ್ತಿದ್ದಾರೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ತೆಲಂಗಾಣ ಸರ್ಕಾರ ಹೆಚ್ಚುವರಿ ಜಿಲ್ಲಾಧಿಕಾರಿಗಳಿಗೆ ಬಳಸಲು 32 ಐಷಾರಾಮಿ ಕಾರುಗಳನ್ನು ಖರೀದಿಸಿದೆ.
ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರ ಸರ್ಕಾರ ಹೆಚ್ಚುವರಿ ಜಿಲ್ಲಾಧಿಕಾರಿಗಳಿಗಾಗಿ 32 ಕಿಯಾ ಕಾರ್ನಿವಲ್ ಕಾರುಗಳನ್ನು ಖರೀದಿಸಿ ಹಸ್ತಾಂತರಿಸಲಾಗಿದೆ. ಸದ್ಯ ಈ ವಿಚಾರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ತೆಲಂಗಾಣ ಸರ್ಕಾರದ ಈ ನಿರ್ಧಾರವನ್ನು ಪ್ರತಿಪಕ್ಷಗಳು ತೀವ್ರವಾಗಿ ವಿರೋಧಿಸಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ ಐಷಾರಾಮಿ ಕಾರುಗಳ ಶೋಕಿ ಬೇಕಿತ್ತಾ ಎಂದು ಪ್ರಶ್ನಿಸಿದ್ದಾರೆ.
ಭಾನುವಾರದಂದು ಹೈದರಾಬಾದ್ನಲ್ಲಿರುವ ಮುಖ್ಯಮಂತ್ರಿ ನಿವಾಸದಿಂದ ಈ ಐಷಾರಾಮಿ ಕಾರುಗಳಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ ಸೇರಿ ಅನೇಕ ಅಧಿಕಾರಿಗಳು ಹಾಜರಿದ್ದರು.
ಬಿಜೆಪಿ ನಾಯಕ ವಿದ್ಯಾಸಾಗರ್ ರಾವ್ ಅವರು, ಮುಖ್ಯಮಂತ್ರಿ ಅಧಿಕಾರಿಗಳನ್ನು ಮೆಚ್ಚಿಸುವ ಕಾರ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇನ್ನು 32 ಐಷಾರಾಮಿ ಕಾರುಗಳನ್ನು ಖರೀದಿಸಲು ಸುಮಾರು ರೂ.11 ಕೋಟಿ ಗಿಂತ ಹೆಚ್ಚಿನ ಹಣವನ್ನು ಖರ್ಚು ಮಾಡುವುದನ್ನು ಮುಖ್ಯಮಂತ್ರಿ ಹೇಗೆ ಸಮರ್ಥಿಸಿಕೊಳ್ಳುತ್ತಾರೆ ಎಂದು ಪ್ರಶ್ನಿಸಿದ್ದಾರೆ.
ರಾಜ್ಯವು ಕರೋನಾ ಎಂಬ ಮಹಾಮಾರಿಯ ಸಂಕಷ್ಟ ಎದುರಿಸುತ್ತಿದೆ, ಚಿಕಿತ್ಸೆಯಿಂದಾಗಿ ಬಡ ಜನರು ಭಾರಿ ಸಾಲದಲ್ಲಿದ್ದಾರೆ. ಹೀಗಿರುವಾಗ ರಾಜ್ಯ ನಾಯಕರು ಸಾರ್ವಜನಿಕ ಹಣವನ್ನು ವ್ಯರ್ಥ ಮಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಇನ್ನು ಸರ್ಕಾರದ ಈ ನಿರ್ಧಾರವನ್ನು ಕಾಂಗ್ರೆಸ್ ಪಕ್ಷ ಕೂಡ ಟೀಕಿಸಿದೆ,
ಸದ್ಯ ಕಿಯಾ ಕಾರ್ನಿವಲ್ ಕಾರಿನ ಬೆಲೆಯು ತೆಲಂಗಾಣ ಎಕ್ಸ್ ಶೋರೂಂ ಪ್ರಕಾರ ರೂ.24.95 ಲಕ್ಷದಿಂದ ರೂ.33.95 ಲಕ್ಷಗಳಾಗಿದೆ. ಕಿಯಾ ಕಾರ್ನಿವಲ್ ಪ್ರೀಮಿಯಂ ಎಂಪಿವಿಯನ್ನು ಈ ವರ್ಷದ ಆರಂಭದಲ್ಲಿ 2020ರ ಆಟೋ ಎಕ್ಸ್ಪೋದಲ್ಲಿ ಅಧಿಕೃತವಾಗಿ ದೇಶದಲ್ಲಿ ಬಿಡುಗಡೆ ಮಾಡಲಾಯಿತು.
ಈ ಕಿಯಾ ಕಾರ್ನಿವಲ್ ಪ್ರೀಮಿಯಂ ಎಂಪಿವಿಯಲ್ಲಿ 2.2-ಲೀಟರ್ ವಿಜಿಟಿ ಡೀಸೆಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 197 ಬಿಹೆಚ್ಪಿ ಮತ್ತು 440 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
ಈ ಎಂಜಿನ್ ಅನ್ನು 8-ಸ್ಪೀಡ್ ಸ್ಪೋರ್ಟ್ಮ್ಯಾಟಿಕ್ ಟ್ರಾನ್ಸ್ಮಿಷನ್ನೊಂದಿಗೆ ಸಂಯೋಜಿಸಲಾಗಿದೆ. ಇದು ಮುಂಭಾಗದ ಚಕ್ರಗಳಿಗೆ ಪವರ್ ಅನ್ನು ಕಳುಹಿಸುತ್ತದೆ. ಈ ಕಿಯಾ ಕಾರ್ನಿವಲ್ ಭಾರತೀಯ ಮಾರುಕಟ್ಟೆಯಲ್ಲಿ ಪ್ರೀಮಿಯಂ ಎಂಪಿವಿಯಾಗಿದೆ.
ಕಿಯಾ ಕಾರ್ನಿವಲ್ ಪ್ರೀಮಿಯಂ ಎಂಪಿವಿಯಲ್ಲಿ ಎಲೆಕ್ಟ್ರಿಕ್ ಸ್ಲೈಡಿಂಗ್ ಹಿಂಭಾಗದ ಡೋರುಗಳು, ಪವರ್-ಫೋಲ್ಡಿಂಗ್ ಒಆರ್ವಿಎಂಗಳು, ಎಲ್ಇಡಿ ಪ್ರೊಜೆಕ್ಟರ್ ಹೆಡ್ ಲ್ಯಾಂಪ್ ಗಳು, ಪವರ್-ಚಾಲಿತ ಟೈಲ್ ಗೇಟ್ ಮತ್ತು ಇತರ ಹೆಚ್ಚಿನ ಫೀಚರ್ ಗಳನ್ನು ಹೊಂದಿದೆ. ಇನ್ನು ರೇಡಿಯೇಟರ್ ಗ್ರಿಲ್ ಮತ್ತು ಟಾಪ್-ಸ್ಪೆಕ್ ಟ್ರಿಮ್ಗಳಲ್ಲಿ 18 ಇಂಚಿನ ಅಲಾಯ್ ವ್ಹೀಲ್ಗಳನ್ನು ಕೂಡ ಒಳಗೊಂಡಿದೆ.
ಕಿಯಾ ಕಾರ್ನಿವಾಲ್ ಎಂಪಿವಿಯು 2,200 ಕೆಜಿ ತೂಕ ಹೊಂದಿದೆ. ಈ ಕಿಯಾ ಎಂಪಿವಿಯು ಎಆರ್ಎಐ ಸಂಸ್ಥೆಯು ಪ್ರಮಾಣಿಕರಿಸಿದಂತೆ ಪ್ರತಿ ಲೀಟರ್ ಡೀಸೆಲ್ಗೆ ಗರಿಷ್ಠ 13.9 ಕಿ.ಮೀ ಮೈಲೇಜ್ ಅನ್ನು ನೀಡಲಿದೆ.
ಇನ್ನು ಒಟ್ಟಾರೆಯಾಗಿ ಸಂಕಷ್ಟದ ಸಂದರ್ಭದಲ್ಲಿ ತೆಲಂಗಾಣ 32 ಐಷಾರಾಮಿ ಕಾರುಗಳನ್ನು ಖರೀದಿಸಿರುವುದು ಅನಗತ್ಯವಾಗಿತ್ತು. ಈ ಹಣವನ್ನು ಬಡವರಿಗೆ ನೆರವಾಗುವ ರೀತಿಯಲ್ಲಿ ಸರ್ಕಾರ ಬಳಬಹುದಾಗಿತ್ತು ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ