Just In
- 49 min ago ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಬೆಸ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡುತ್ತವೆ!
- 2 hrs ago Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- 15 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 15 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
Don't Miss!
- News ಅಚ್ಚೇದಿನಗಳಲ್ಲ-ದೌರ್ಭಾಗ್ಯದ ದಿನಗಳು: ಕಾಂಗ್ರೆಸ್ ಜಾಹೀರಾತು
- Finance bangalore royal challengers ತಂಡದಿಂದ ನಗರದ ಎರಡು ಕೆರೆಗಳ ಪುನರುಜ್ಜೀವನ
- Movies ಪಶ್ಚಾತಾಪದ ಅಗ್ನಿಕುಂಡದಲ್ಲಿ ಪರಿಣಿತಿ ಚೋಪ್ರಾ ; ನನ್ನೆಲ್ಲ ಸೋಲುಗಳಿಗೆ ಆ ವ್ಯಕ್ತಿಗಳೇ ಕಾರಣ ಎಂದ ನಟಿ..!
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೆಲ್ಮೆಟ್ ಹಾಕಿಲ್ಲವೆಂದು ಹೆಣ ಉರುಳಿಸೋ ಪೊಲೀಸರನ್ನು ನೋಡಿದ್ದೀರಾ?
ಭಾರತದಲ್ಲಿ, ಸಾಕಷ್ಟು ಮಂದಿ ಸಂಚಾರಿ ನಿಯಮಗಳನ್ನು ಪಾಲನೆ ಮಾಡುವುದಿಲ್ಲ ಎಂಬುದು ನಮಗೆಲ್ಲರಿಗೂ ತಿಳಿದಿರುವ ಸಂಗತಿಯಾಗಿದೆ. ಮತ್ತೊಂದೆಡೆ, ಜಾಗೃತಿ ಮೂಡಿಸುವ ತರಗತಿಗಳೂ ಸಹ ಹೆಚ್ಚಿಗೆಯಾಗಿವೆ.
ಭಾರತದಲ್ಲಿ, ಸಾಕಷ್ಟು ಮಂದಿ ಸಂಚಾರಿ ನಿಯಮಗಳನ್ನು ಪಾಲನೆ ಮಾಡುವುದಿಲ್ಲ ಎಂಬುದು ನಮಗೆಲ್ಲರಿಗೂ ತಿಳಿದಿರುವ ಸಂಗತಿಯಾಗಿದೆ. ಮತ್ತೊಂದೆಡೆ, ಜಾಗೃತಿ ಮೂಡಿಸುವ ತರಗತಿಗಳೂ ಸಹ ಹೆಚ್ಚಿಗೆಯಾಗಿವೆ.
ಆದಾಗ್ಯೂ ಸಹ, ರಸ್ತೆ ನಿಯಮ ಉಲ್ಲಂಘನೆ ಹೆಚ್ಚಾಗುತ್ತಿರುವುದು ಕಳವಳ ತರಿಸದೆ ಇರಲಾರದು. ಈ ನಿಟ್ಟಿನಲ್ಲಿ ಸಂಚಾರ ಪೊಲೀಸ್ ಇಲಾಖೆಯೂ ಸಹ ಕಟ್ಟುನಿಟ್ಟಾದ ನಿಯಮಗಳನ್ನು ತರುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಉದ್ದೇಶ ಹೊಂದಿದೆ.
ಈ ಇಲಾಖೆಯ ಪೊಲೀಸರಿಗೆ ರಸ್ತೆ ಕಾನೂನನ್ನು ಉಲ್ಲಂಘಿಸುವ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಲು ಶಕ್ತಿಯನ್ನು ನೀಡಲಾಗಿದೆ. ಈ ಬಗ್ಗೆ, ಯಾರಿಗೂ ಸಹ ಯಾವುದೇ ರೀತಿಯ ಸಂದೇಹವಿಲ್ಲ.
ಆದ್ರೆ, ಕೊಟ್ಟಿರುವ ಅಧಿಕಾರವನ್ನು ಸಮಪರ್ಕವಾಗಿ ಬಳಕೆ ಮಾಡುವ ಪೊಲೀಸರನ್ನು ಇತ್ತೀಚಿಗೆ ನಾವು ನೋಡ್ತಾ ಇಲ್ಲ ಎಂಬುದು ಸದ್ಯದ ದುಃಖದ ವಿಚಾರವಾಗಿದೆ. ಹೌದು, ಇದಕ್ಕೆ ಪುಷ್ಟಿ ನೀಡುವಂತ ಘಟನೆಯೊಂದು ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ನೆಡೆದಿದೆ.
ಹೌದು, ವಾರದ ಕೊನೆ ಎನ್ನಲಾಗುವ ಶುಕ್ರವಾರದಂದು ಕನ್ಯಾಕುಮಾರಿಯಲ್ಲಿ ಈ ಬೆಚ್ಚಿ ಬೀಳಿಸುವ ಘಟನೆಯ ನೆಡೆದಿದ್ದು, ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ಪೊಲೀಸರು ಲಾಠಿ ಹಿಡಿದು ಯುದ್ಧಕ್ಕೆ ನಿಂತು ಮನ ಬಂದಂತೆ ವಾಹನ ಸವಾರರಿಗೆ ಥಳಿಸಿದ್ದಾರೆ.
ಈ ಘಟನೆ ಕನ್ಯಾಕುಮಾರಿಯ ಕಲ್ಲುಪಾಲದಲ್ಲಿ ನವೆಂಬರ್ ತಿಂಗಳ 23ರಂದು ಸಂಜೆ 5 ಗಂಟೆ ಸುಮಾರಿಗೆ ನೆಡೆದಿದೆ. ಚಾಲಕನ ಹಣೆಗೆ ಬಲವಾಗಿ ಪೆಟ್ಟು ಬಿದ್ದಿದ್ದು, ಹತ್ತಿರದ ಆಸ್ಪತ್ರೆಯಲ್ಲಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಪ್ಪದೇ ಓದಿ-ಉಬರ್ ಚಾಲಕನ ದುರ್ವರ್ತನೆಯಿಂದ ಬಯಲಾಯ್ತು ಮತ್ತೊಂದು ಸ್ಪೋಟಕ ಮಾಹಿತಿ..!!
ಈ ಭೀಕರ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೆಲ್ಮೆಟ್ ಧರಿಸದ ಕಾರಣ ಚಾಲಕ ಬೈಕ್ ನಿಲ್ಲಿಸದೆ ವೇಗವಾಗಿ ಚಲಿಸಲು ಮುಂದಾಗುವ ವೇಳೆಯಲ್ಲಿ ಪೊಲೀಸನೊಬ್ಬ ಲಾಠಿ ಹಿಡಿದ್ದು ಜೋರಾಗಿ ಚಾಲಕ ಕಡೆ ಬೀಸಿದ್ದಾನೆ.
ಪ್ರಯಾಣಿಕ ತೀವ್ರವಾಗಿ ಗಾಯಗೊಂಡಿರುವುದನ್ನು ಕಂಡ ಸಾರ್ವಜನಿಕರ ಸಂಯಮದ ಕಟ್ಟೆ ಹೊಡೆದಿದ್ದು, ಪೊಲೀಸರ ಈ ದುರ್ವರ್ತನೆಯನ್ನು ಖಂಡಿಸಿ ವಾಗ್ವಾದಕ್ಕೆ ಇಳಿದಿದ್ದಾರೆ. ಕೊನೆಗೂ ತಮ್ಮ ತಪ್ಪನ್ನು ಒಪ್ಪಿಕೊಂಡ ಪೊಲೀಸ್ ಅಧಿಕಾರಿಗಳು, ಈ ಕೃತ್ಯದಲ್ಲಿ ತೊಡಗಿರುವ ಪೊಲೀಸ್ ಸಿಬ್ಬಂದಿಯನ್ನು ಅಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.