Just In
- 38 min ago ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- 49 min ago TVS iQube: ಲಕ್ಷಾಂತರ ಭಾರತೀಯರ ನೆಚ್ಚಿನ ಸ್ಕೂಟರ್ನ ಡೌನ್ಪೇಮೆಂಟ್, ಇಎಂಐ, ಲೋನ್ ವಿವರ!
- 54 min ago viral video: ಬೆಂಗಳೂರಿನಲ್ಲಿ ಮಾತ್ರ ಸಾಧ್ಯ: ಹೆಣ್ಮಗು.. ಹೆಣ್ಮಗು ಓಹ್.. ಎಂದ ನೆಟ್ಟಿಗರು!
- 1 hr ago ಯುಗಾದಿ ಜಾತ್ರೆ: ಶ್ರೀಶೈಲ ಮಲ್ಲಿಕಾರ್ಜುನನ ಭಕ್ತರಿಗೆ ಸಿಹಿಸುದ್ದಿ.. NWKRTCಯಿಂದ ವಿಶೇಷ ಬಸ್ ಸೇವೆ
Don't Miss!
- Technology ಮತ್ತೊಂದು ಅಗ್ಗದ 5G ಫೋನ್ ಲಾಂಚ್ ಮಾಡಲು ಸಜ್ಜಾದ ರಿಯಲ್ಮಿ!..ಫೀಚರ್ಸ್ ಏನು?
- Movies 'ರಾಮಾಯಣ'ದಲ್ಲಿ 'ಯಶ್' ಗೆ 'ಸಾಕ್ಷಿ ತನ್ವರ್' ನಾಯಕಿ ; 'ಬೇಡವೇ ಬೇಡ' ಎಂದ ಅಭಿಮಾನಿಗಳು..!
- News ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ & ನೆಲಮಂಗಲ ಹೊಸ ಉಪನಗರ: ಡಾ. ಕೆ. ಸುಧಾಕರ್ ಭರವಸೆ!
- Finance ಜಗತ್ತಿನಾದ್ಯಂತ 6,000 ಉದ್ಯೋಗಿಗಳನ್ನು ವಜಾ ಮಾಡಿದ ಡೆಲ್
- Sports IPL 2024 RR vs DC: ರಾಯಲ್ಸ್ ವಿರುದ್ಧ ಗೆಲುವಿನೊಂದಿಗೆ ಪುಟಿದೇಳುವುದೇ ಕ್ಯಾಪಿಟಲ್ಸ್?; ಸಂಭಾವ್ಯ ಆಡುವ 11ರ ಬಳಗ
- Lifestyle ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಂಡೋನೇಷ್ಯಾದಲ್ಲಿ 3 ದಿನಗಳ ಟ್ರಾಫಿಕ್ ಸಂಕಟಕ್ಕೆ 12 ಮರಣ
ಮುಸ್ಲಿಂ ಧರ್ಮದ ಪವಿತ್ರ ಹಬ್ಬ ರಂಜಾನ್ ಪ್ರಯುಕ್ತ ಇಂಡೋನೇಷ್ಯಾದಲ್ಲಿ ಮೂರು ದಿನಗಳ ಪರ್ಯಂತ (2016 ಜುಲೈ 03ರಿಂದ 05) ಉಂಟಾಗಿರುವ ನಿರಂತರ ಟ್ರಾಫಿಕ್ ಜಾಮ್ ನಿಂದಾಗಿ ಕನಿಷ್ಠ 12 ಮಂದಿ ಮೃತಪಟ್ಟಿರುವ ಘಟನೆಯು ತಡವಾಗಿ ಬೆಳಕಿಗೆ ಬಂದಿದೆ.
ರಂಜಾನ್
ಹಬ್ಬದ
ಪ್ರಯುಕ್ತ
ಸಾವಿರಾರು
ಮಂದಿ
ತಮ್ಮ
ತಮ್ಮ
ಊರುಗಳಿಗೆ
ಹೊರಡುವ
ತವಕದಲ್ಲಿದ್ದರು.
ಇದರ
ಬೆನ್ನಲ್ಲೇ
ಬ್ರೆಕ್ಸಿಟ್
ನಲ್ಲಿ
ಉಂಟಾಗಿರುವ
ಭಾರಿ
ವಾಹನ
ದಟ್ಟಣೆಗೆ
ಅನೇಕ
ಬಡ
ಜೀವಗಳು
ಬಲಿಯಾಗಿವೆ.
ಇಂಡೋನೇಷ್ಯಾದ ಪ್ರಮುಖ ಮಾರ್ಗವಾಗಿರುವ ಬ್ರೆಕ್ಸಿಟ್ ನಲ್ಲಿ ಪದೇ ಪದೇ ಟ್ರಾಫಿಕ್ ಜಾಮ್ ಸೃಷ್ಟಿಯಾಗುತ್ತಿರುವ ಪ್ರಸಂಗ ಸಾಮಾನ್ಯವಾಗಿಬಿಟ್ಟಿದೆ.
ಈ ಬಾರಿ ಸರಿ ಸುಮಾರು 21 ಕೀ.ಮೀ. ಗಳಷ್ಟು ದೂರ ಮೂರು ದಿನಗಳಷ್ಟು ಕಾಲ ನಿರಂತರ ವಾಹನ ದಟ್ಟಣೆ ಸೃಷ್ಟಿಯಾಗಿತ್ತು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಟ್ರಾಫಿಕ್ ಜಾಮ್ ನಿಂದಾಗಿ 12 ಮಂದಿ ಜೀವ ತೆತ್ತಿದ್ದಾರೆ. ಇದಕ್ಕಿರುವ ಕಾರಣವನ್ನು ಪರಿಶೀಲಿಸಿದಾಗ ಅತಿಯಾದ ದಣಿವಿನಿಂದಾಗಿ ಉಂಟಾಗಿರುವ ಆರೋಗ್ಯ ಸಮಸ್ಯೆಯಿಂದಾಗಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ವಯಸ್ಸಾದವರು ಸೇರಿದ್ದಾರೆ.
ಇಂಡೋನೇಷ್ಯಾ ಸಾರಿಗೆ ಸಚಿವಾಲಯದ ವರದಿಗಳ ಪ್ರಕಾರ ಪ್ರಸಕ್ತ ಸಾಲಿನಲ್ಲಿ 10,000ದಷ್ಟು ವಾಹನಗಳು ಟ್ರಾಫಿಕ್ ಜಂಜಾಟಕ್ಕೆ ಸಿಕ್ಕಿ ಹಾಕಿಕೊಂಡಿದ್ದವು.
ಒಟ್ಟಾರೆಯಾಗಿ ಹಬ್ಬದ ಸಂಭ್ರಮಾಚರಣೆಯ ದಿನಗಳಲ್ಲಿ ನಡೆದಿರುವ ವಿವಿಧ ಅಪಘಾತ ಪ್ರಕರಣಗಳಲ್ಲಾಗಿ 400ರಷ್ಟು ವಾಹನ ಸಂಚಾರಿಗಳು ಮೃತಪಟ್ಟಿದ್ದಾರೆ.
ಬ್ರೆಬೆಸ್, ಜಾವಾ ದ್ವೀಪದ ಪ್ರಮುಖ ನಗರವಾಗಿದ್ದು, ವರ್ಷಂಪ್ರತಿ ಲಕ್ಷಾಂತರ ಮಂದಿ ಈದ್ ಉಲ್ ಫಿತ್ರ್ ಹಬ್ಬವನ್ನು ಆಚರಿಸುವ ಸಲುವಾಗಿ ತಮ್ಮ ತಮ್ಮ ಮನೆಗಳಿಗೆ ಹಿಂತಿರುಗಲು ಇದೇ ಹಾದಿಯನ್ನು ಆಶ್ರಯಿಸಿಕೊಂಡಿರುತ್ತಾರೆ.
ಒಟ್ಟಿನಲ್ಲಿ ಇಂಡೋನೇಷ್ಯಾ ವಾಹನ ದಟ್ಟಣೆ ರದ್ಧಾಂತವು ಅಧಿಕೃತರನ್ನು ಎಚ್ಚೆತ್ತುಕೊಳ್ಳುವಂತೆ ಮಾಡಿದ್ದು, ಮುಂದೆಯಾದರೂ ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.