Just In
- 7 hrs ago
ಭಾರತದಲ್ಲಿ ಅಬ್ಬರಿಸಲು ಬಿಡುಗಡೆಯಾಯ್ತು ಹೀರೋ Xoom 110 ಸ್ಕೂಟರ್: ಬೆಲೆ ರೂ.68,599...!
- 9 hrs ago
130 km ರೇಂಜ್ ನೀಡುವ 'ecoDryft' ಬೈಕ್ ಬಿಡುಗಡೆ... .ರೂ.99,999ಕ್ಕೆ ಸಿಗುತ್ತೆ!
- 12 hrs ago
ಶೀಘ್ರವೇ ಕಡಿಮೆ ಬೆಲೆಯಲ್ಲಿ ಸಿಗಲಿದೆ ಮಾರುತಿ ಸುಜುಕಿ ಆಲ್ಟೊ ಕೆ10 ಎಕ್ಸ್ಟ್ರಾ ಎಡಿಷನ್
- 14 hrs ago
ಬಹುನೀರಿಕ್ಷಿತ 'ಅಲ್ಟ್ರಾವೈಲೆಟ್ F77' ಬೈಕ್ ಹೇಗಿದೆ ಗೋತ್ತಾ.. ಇಲ್ಲಿದೆ ವಿಮರ್ಶೆ
Don't Miss!
- Sports
ಕಿರಿಯ ಮಹಿಳಾ ತಂಡದ ಟಿ20 ವಿಶ್ವಕಪ್ ಗೆಲುವು ನಮಗೆ ದೊಡ್ಡ ಸ್ಫೂರ್ತಿ ನೀಡಿದೆ; ಹರ್ಮನ್ಪ್ರೀತ್ ಕೌರ್
- Movies
Bettada Hoo: 'ಬೆಟ್ಟದ ಹೂ' ಮಾಲಿನಿ ಅಮ್ಮ ಮಂದ್ರಾ ಮದುವೆ ಆದ್ಮೇಲೆ ಫುಲ್ ಮಿಂಚಿಂಗ್..!
- News
ಆರ್ಥಿಕ ಸಂಕಷ್ಟದ ನಡುವೆಯೇ ಪಾಕಿಸ್ತಾನದಲ್ಲಿ ಮತ್ತೊಂದು ದುರಂತ: ಮಸೀದಿಯಲ್ಲಿ ಆತ್ಮಹುತಿ ದಾಳಿ- 46 ಸಾವು, 150 ಮಂದಿಗೆ ಗಾಯ
- Lifestyle
ಜನವರಿ 30ಕ್ಕೆ ಶನಿ ಅಸ್ತ: 35 ದಿನದವರೆಗೆ ಈ 6 ರಾಶಿಯವರು ಹೆಚ್ಚು ಜಾಗ್ರತೆವಹಿಸಬೇಕು
- Finance
ಫೆಬ್ರವರಿ 1ರಿಂದ ಯಾವೆಲ್ಲ ಹಣಕಾಸು ನಿಯಮ ಬದಲಾವಣೆಯಾಗಲಿದೆ?
- Technology
ವಿದ್ಯಾರ್ಥಿಗಳೇ ಇಲ್ಲಿ ಗಮನಿಸಿ, ನೀವು Rank ಪಡೆಯಲು ಈ ಆಪ್ಗಳನ್ನು ಬಳಕೆ ಮಾಡಿ!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಅಪಘಾತಗಳಿಗೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ ಕೇಂದ್ರ ಸಾರಿಗೆ ಇಲಾಖೆ
ವಿಶ್ವದ ಅತಿಹೆಚ್ಚು ಅಪಘಾತಗಳು ಸಂಭವಿಸುವ ದೇಶಗಳಲ್ಲಿ ಭಾರತವು ಇದ್ದು, ಇದಕ್ಕೆ ಉತ್ತಮ ಉದಾಹರಣೆಯೆಂಬಂತೆ ಇತ್ತೀಚಿನ ವರದಿಯೊಂದು ಪುಷ್ಠಿ ನೀಡಿದೆ. ಕಳೆದ ಕೆಲವು ವರ್ಷಗಳಿಂದ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿರುವ ದ್ವಿಚಕ್ರ ವಾಹನ ಸವಾರರು ಮತ್ತು ಪಾದಚಾರಿಗಳ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಬಹಿರಂಗಪಡಿಸಿದೆ.
ಉದಾಹರಣೆಗೆ 2021 ರಲ್ಲಿ ಒಟ್ಟು ರಸ್ತೆ ಅಪಘಾತಗಳಲ್ಲಿ ದ್ವಿಚಕ್ರ ವಾಹನ ಸವಾರರ ಸಾವಿನ ಪಾಲು ಶೇಕಡಾ 45.1 ರಷ್ಟಿತ್ತು, ಈ ಅಂಕಿ ಅಂಶಗಳು ಸರ್ಕಾರವು ಈ ವಿಷಯದ ಬಗ್ಗೆ ವಾರ್ಷಿಕ ವರದಿಯನ್ನು ಪ್ರಕಟಿಸಲು ಪ್ರಾರಂಭಿಸಿದ ನಂತರ ಅತ್ಯಧಿಕವಾಗಿದೆ. ದ್ವಿಚಕ್ರ ವಾಹನ ಅಪಘಾತಗಳು 2019 ರಲ್ಲಿ ಶೇ 37.1 ರಷ್ಟಿದ್ದು, 56,136 ಸಾವುಗಳು ಸಂಭವಿಸಿವೆ. 2021 ರಲ್ಲಿ ಈ ಅಂಕಿ ಅಂಶವು 69,635 ರಷ್ಟಕ್ಕೆ ಏರಿದೆ.
ಅಂದರೆ ಒಟ್ಟು ರಸ್ತೆ ಅಪಘಾತಗಳು ಶೇ 45.1% ರಷ್ಟು ಹೆಚ್ಚಾಗಿವೆ. ಇನ್ನು ಪಾದಚಾರಿಗಳ ಸಾವಿನ ಸಂಖ್ಯೆಯು 2019 ರಲ್ಲಿ 25,858 (ರಸ್ತೆಯಲ್ಲಿನ ಒಟ್ಟು ಸಾವುಗಳು ಶೇ 17.1) ನಿಂದ ಕಳೆದ ವರ್ಷ 29,124 ಸಾವುಗಳಿಗೆ ಏರಿದೆ. ಕಳೆದ ವರ್ಷ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದ ಒಟ್ಟು 69,385 ದ್ವಿಚಕ್ರ ವಾಹನ ಸವಾರರ ಪೈಕಿ ಸುಮಾರು 47,000 ಜನರು ಹೆಲ್ಮೆಟ್ ಧರಿಸಿರಲಿಲ್ಲ ಎಂದು ವರದಿ ತಿಳಿಸಿದೆ.
ಅಪಘಾತದಲ್ಲಿ ಸಾವನ್ನಪ್ಪಿದ ಸವಾರರ ಪಾಲು ಪಿಲಿಯನ್ ಸವಾರರಿಗಿಂತ ಸುಮಾರು ಎರಡೂವರೆ ಪಟ್ಟು ಹೆಚ್ಚು, ಕಳೆದ ವರ್ಷ 13,716 ಪಿಲಿಯನ್ ಸವಾರರು ಸಾವನ್ನಪ್ಪಿದರೆ 32,877 ದ್ವಿಚಕ್ರ ವಾಹನ ಸವಾರರು ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ. ಹೆಲ್ಮೆಟ್ ಧರಿಸದ ಕಾರಣ ಉತ್ತರ ಪ್ರದೇಶದಲ್ಲಿ ದ್ವಿಚಕ್ರ ವಾಹನ ಅಪಘಾತಗಳಲ್ಲಿ 6,445 ಸಾವುಗಳಾಗಿವೆ ಎಂದು ವರಿದಿ ತಿಳಿಸಿದೆ. ತಮಿಳುನಾಡಿನಲ್ಲಿ ಇಂತಹ 5,888 ಸಾವುಗಳು ದಾಖಲಾಗಿದ್ದರೆ, ಮಹಾರಾಷ್ಟ್ರದಲ್ಲಿ 4,966 ಸಾವುಗಳು ದಾಖಲಾಗಿವೆ.
ಇಂತಹ ಮಾರಣಾಂತಿಕ ಅಪಘಾತಗಳ ಹಿಂದೆ ಅತಿವೇಗವು ಹೆಚ್ಚು ವ್ಯಾಪಕವಾದ ಕಾರಣವಾಗಿದ್ದು, ತಪ್ಪಾದ ಲೇನ್ / ಸೈಡ್ ಡ್ರೈವಿಂಗ್, ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಕೆ, ಕುಡಿದು ವಾಹನ ಚಲಾಯಿಸುವುದು ಮತ್ತು ಟ್ರಾಫಿಕ್ ಸಿಗ್ನಲ್ಗಳನ್ನು ಜಂಪ್ ಮಾಡುವುದಾಗಿದೆ ಎಂದು ವರದಿ ಹೇಳಿದೆ. ಒಂದು ಅಂದಾಜಿನ ಪ್ರಕಾರ, ದೇಶದಲ್ಲಿ ಪ್ರತಿ ಗಂಟೆಗೆ 53 ರಸ್ತೆ ಅಪಘಾತಗಳು ಸಂಭವಿಸುತ್ತಿವೆ ಮತ್ತು ಪ್ರತಿ ನಾಲ್ಕು ನಿಮಿಷಗಳಿಗೊಮ್ಮೆ ಒಬ್ಬ ವ್ಯಕ್ತಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿದ್ದಾನೆ.
ಭಾರತದಲ್ಲಿ ಅತಿ ಹೆಚ್ಚು ರಸ್ತೆ ಅಪಘಾತಗಳು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಭವಿಸುತ್ತಿವೆ. ಅಂಕಿಅಂಶಗಳ ಪ್ರಕಾರ ದ್ವಿಚಕ್ರ ವಾಹನ ಚಾಲಕರೇ ರಸ್ತೆ ಅಪಘಾತಗಳಲ್ಲಿ ಹೆಚ್ಚಾಗಿ ಸಾವನ್ನಪ್ಪುತ್ತಿದ್ದಾರೆ. ರಸ್ತೆಯಲ್ಲಿ ದ್ವಿಚಕ್ರ ವಾಹನ ಚಾಲಕರ ಸುರಕ್ಷತೆಯನ್ನು ಹೆಚ್ಚಿಸಲು ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಂಡಿದೆ. ಈಗ 150 ಸಿಸಿ ಅಥವಾ ಅದಕ್ಕಿಂತ ಹೆಚ್ಚಿನ ಎಂಜಿನ್ ಸಾಮರ್ಥ್ಯದ ದ್ವಿಚಕ್ರ ವಾಹನಗಳಿಗೆ ಸ್ಟ್ಯಾಂಡರ್ಡ್ ಫಿಟ್ಮೆಂಟ್ ಆಗಿ ಎಬಿಎಸ್ ಬ್ರೇಕಿಂಗ್ ಕಡ್ಡಾಯ ಮಾಡಲಾಗಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.
ಇನ್ನು 125 ಸಿಸಿ ಅಥವಾ ಅದಕ್ಕಿಂತ ಕಡಿಮೆ ಸಾಮರ್ಥ್ಯದ ದ್ವಿಚಕ್ರ ವಾಹನಗಳಲ್ಲಿ ಕಾಂಬಿ ಬ್ರೇಕ್ ಸಿಸ್ಟಮ್ (ಸಿಬಿಎಸ್) ಅನ್ನು ಒದಗಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಇದಲ್ಲದೆ, ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ದಂಡವನ್ನು ಹೆಚ್ಚಿಸಿದೆ. ರಸ್ತೆ ಮತ್ತು ವಾಹನ ಶಿಕ್ಷಣ, ಎಂಜಿನಿಯರಿಂಗ್, ಕಾನೂನು ಮತ್ತು ತುರ್ತು ಆರೈಕೆಯ ಆಧಾರದ ಮೇಲೆ ರಸ್ತೆ ಸುರಕ್ಷತೆಯ ಸಮಸ್ಯೆಯನ್ನು ಪರಿಹರಿಸಲು ಸಾರಿಗೆ ಸಚಿವಾಲಯವು ಬಹು ಆಯಾಮದ ಕಾರ್ಯತಂತ್ರವನ್ನು ರೂಪಿಸಿದೆ ಎಂದು ಈ ಹಿಂದೆಯೇ ಗಡ್ಕರಿ ಹೇಳಿದ್ದರು.
ಎಲ್ಲಾ ಕಾರುಗಳಲ್ಲಿ ಆರು ಏರ್ಬ್ಯಾಗ್ ಕಡ್ಡಾಯ
ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರು ಎಲ್ಲಾ ಕಾರು ತಯಾರಕ ಕಂಪನಿಗಳು ತಮ್ಮ ಕಾರುಗಳಲ್ಲಿ ಕನಿಷ್ಠ 6 ಏರ್ಬ್ಯಾಗ್ಗಳನ್ನು ಒಳಗೊಂಡಿರುವಂತೆ ಆದೇಶ ನೀಡಿದ್ದಾರೆ. ಎಂಟು ಪ್ರಯಾಣಿಕರನ್ನು ಹೊತ್ತೊಯ್ಯುವ ವಾಹನಗಳಲ್ಲಿ ಆರು ಏರ್ಬ್ಯಾಗ್ಗಳನ್ನು ಕಡ್ಡಾಯಗೊಳಿಸುವ ಕರಡು ಅಧಿಸೂಚನೆಯನ್ನು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಅನುಮೋದಿಸಿತ್ತು. ಸಂಸತ್ತಿನಲ್ಲಿ ಇತ್ತೀಚಿನ ಪ್ರಕಟಣೆಯು ಟೈಮ್ಲೈನ್ ಅನ್ನು ನೀಡದಿದ್ದರೂ, ಹೊಸ ಕಾರುಗಳನ್ನು (ಅಕ್ಟೋಬರ್ 1, 2022 ರಿಂದ ತಯಾರಿಸಿದರೆ) ಹೊಸ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕಾಗುತ್ತದೆ ಎಂದು ಕರಡು ಅಧಿಸೂಚನೆಯಲ್ಲಿ ಹೇಳಲಾಗಿದೆ.