Just In
- 10 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 11 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 13 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 13 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಕ್ಸಿಜನ್ ಟ್ಯಾಂಕರ್ ಚಾಲಕರಿಗೆ ವಿಶೇಷ ಲಸಿಕೆ ಅಭಿಯಾನ ಆರಂಭಿಸಲು ಸೂಚಿಸಿದ ಸಾರಿಗೆ ಇಲಾಖೆ
ಕರೋನಾ ವೈರಸ್ ಎರಡನೇ ಅಲೆ ಭಾರತದಲ್ಲಿ ವೇಗವಾಗಿ ಹರಡುತ್ತಿದೆ. ಈ ಅಲೆ ಕೆಲವು ರಾಜ್ಯಗಳಲ್ಲಿ ಹೆಚ್ಚು ಹಾನಿಯನ್ನುಂಟು ಮಾಡಿದೆ. ಭಾರತದಲ್ಲಿ ಪ್ರತಿ ದಿನ 2 ಲಕ್ಷಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗುತ್ತಿವೆ.
ಈ ಎರಡನೇ ಅಲೆಯಲ್ಲಿ ಸೋಂಕಿತರು ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ. ಸೋಂಕಿತರ ಸಂಖ್ಯೆ ಹೆಚ್ಚಾದಂತೆ ದೇಶಾದ್ಯಂತ ಆಸ್ಪತ್ರೆಗಳಲ್ಲಿ ಐಸಿಯು ಹಾಗೂ ಆಕ್ಸಿಜನ್ ಕೊರತೆ ಎದುರಾಗಿದೆ. ಸಕಾಲಕ್ಕೆ ಆಕ್ಸಿಜನ್ ಸಿಗದ ಕಾರಣಕ್ಕೆ ಸಾವಿರಾರು ಜನ ಸಾವನ್ನಪ್ಪುತ್ತಿದ್ದಾರೆ.
ಕರೋನಾ ಮಹಾಮಾರಿಗೆ ಯಾವುದೇ ಲಸಿಕೆ ಕಂಡು ಹಿಡಿದಿಲ್ಲ. ಆದರೆ ಲಸಿಕೆ ಬಾರದಂತೆ ತಡೆಯಲು ಭಾರತದಲ್ಲಿ ಕರೋನಾ ವಾರಿಯರ್'ಗಳಿಗೆ ಆದ್ಯತೆ ಮೇರೆಗೆ ಕೊವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆಗಳನ್ನು ನೀಡಲಾಗುತ್ತಿದೆ.
MOST READ:ವಾಹನ ಖರೀದಿಸುವವರಿಗೆ, ಮಾರಾಟ ಮಾಡುವವರಿಗೆ ನೆರವಾಗುವ ಆರ್ಟಿಒ ಫಾರಂಗಳಿವು!
ಈಗ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯು ಆಕ್ಸಿಜನ್ ಟ್ಯಾಂಕರ್ಗಳನ್ನು ಚಾಲನೆ ಮಾಡುವ ಚಾಲಕರಿಗೆ ಲಸಿಕೆ ನೀಡುವಂತೆ ಹಾಗೂಈ ಚಾಲಕರಿಗೆ ಕರೋನಾ ವೈರಸ್ ಸೋಂಕು ತಗುಲಿದರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯಲ್ಲಿ ಆದ್ಯತೆ ನೀಡುವಂತೆ ಎಲ್ಲಾ ರಾಜ್ಯಗಳಿಗೆ ತಿಳಿಸಿದೆ.
ಮೆಡಿಕಲ್ ಆಕ್ಸಿಜನ್ ಹಾಗೂ ರಾಸಾಯನಿಕಗಳನ್ನು ಸಾಗಿಸುವ ಚಾಲಕರಿಗೆ ಸಣ್ಣ ಕಾರ್ಯಕ್ರಮಗಳ ಮೂಲಕ ತರಬೇತಿ ನೀಡುವಂತೆಯೂ ಸಹ ಕೇಂದ್ರ ಸಾರಿಗೆ ಇಲಾಖೆಯು ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.
MOST READ:ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು
ಈ ಬಗ್ಗೆ ಕಳೆದ ಶುಕ್ರವಾರ ಟ್ವೀಟ್ ಮಾಡಿರುವ ಕೇಂದ್ರ ಸಾರಿಗೆ ಇಲಾಖೆಯು ಆಕ್ಸಿಜನ್ ಟ್ಯಾಂಕರ್ ಚಾಲಕರಿಗೆ ವಿಶೇಷ ಕೋವಿಡ್ 19 ಲಸಿಕೆ ಅಭಿಯಾನವನ್ನು ನಡೆಸಬೇಕೆಂದು ಶಿಫಾರಸು ಮಾಡಲಾಗಿದೆ. ಈ ಚಾಲಕರಿಗೆ ಕರೋನಾ ವೈರಸ್ ಸೋಂಕು ತಗುಲಿದರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುವಾಗ ಆದ್ಯತೆ ನೀಡಬೇಕೆಂದು ಹೇಳಿದೆ.
ದೇಶಾದ್ಯಂತ ಆಕ್ಸಿಜನ್'ಗಳಿಗೆ ಬೇಡಿಕೆ ಹೆಚ್ಚಾಗಿರುವ ಕಾರಣ ಅಪಾಯಕಾರಿ ಸರಕು ಸಾಗಿಸಲು ತರಬೇತಿ ಪಡೆದ ಚಾಲಕರ ಗುಂಪನ್ನು ರಚಿಸುವಂತೆ ರಾಜ್ಯಗಳು ಹಾಗೂಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸಾರಿಗೆ ಇಲಾಖೆಯು ತಿಳಿಸಿದೆ.
MOST READ:10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್
ಮುಂದಿನ ಕೆಲವು ವಾರಗಳಲ್ಲಿ 500 ಚಾಲಕರನ್ನು ತಕ್ಷಣವೇ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಮುಂದಿನ ಎರಡು ತಿಂಗಳಲ್ಲಿ ಈ ಸಂಖ್ಯೆಯನ್ನು 2,500ಕ್ಕೆ ಹೆಚ್ಚಿಸಬೇಕು ಎಂದು ಇಲಾಖೆ ಹೇಳಿದೆ. ತರಬೇತಿ ಪಡೆದ ಚಾಲಕರ ಮಾಹಿತಿಯನ್ನು ಡಿಜಿಟಲ್ ಡೇಟಾಬೇಸ್'ನಲ್ಲಿ ಸಂಗ್ರಹಿಸುವ ಮೂಲಕ ಅವರ ಸೇವೆಗಳನ್ನು ಎಲ್ಲಿ ಬೇಕಾದರೂ ಪಡೆಯುವಂತೆ ಮಾಡಬೇಕೆಂದು ಇಲಾಖೆ ತಿಳಿಸಿದೆ.
ಇಲಾಖೆಯು ನೀಡಿರುವ ಮಾಹಿತಿಯ ಪ್ರಕಾರ, ಲಾಜಿಸ್ಟಿಕ್ಸ್ ಸೆಕ್ಟರ್ ಸ್ಕಿಲ್ ಕೌನ್ಸಿಲ್, ಇಂಡಿಯನ್ ಕೆಮಿಕಲ್ ಕೌನ್ಸಿಲ್, ನ್ಯಾಷನಲ್ ಸ್ಕಿಲ್ ಡೆವಲಪ್ಮೆಂಟ್ ಕಾರ್ಪೊರೇಶನ್ ಹಾಗೂ ಮೆಡಿಕಲ್ ಆಕ್ಸಿಜನ್ ಉತ್ಪಾದಕರ ಸಹಾಯದಿಂದ ತರಬೇತಿ ಕಾರ್ಯಕ್ರಮವನ್ನು ಸಿದ್ಧಪಡಿಸಲಾಗಿದೆ.