Just In
- 16 min ago ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- 1 hr ago ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- 1 hr ago Mahindra Thar: ಸುಲಭವಾಗಿ ಆಫ್ರೋಡ್ ಕಿಂಗ್ ಖರೀದಿಸಬೇಕೆ?: ಆನ್ರೊಡ್ ಬೆಲೆ, EMI ಸಂಪೂರ್ಣ ಮಾಹಿತಿ!
- 1 hr ago Mahindra: ಫ್ಯಾಮಿಲಿ ಕಾರು ಮಹೀಂದ್ರಾ ಎಕ್ಸ್ಯುವಿ700 ಖರೀದಿಸುವವರಿಗೆ ಸಿಹಿಸುದ್ದಿ.. ಇನ್ನೂ ತಿಂಗಳೇ ಸಾಕು!
Don't Miss!
- News Kalaburagi Rain: ಸೂರ್ಯನಗರಿ ಕಲಬುರಗಿಯಲ್ಲಿ ಭಾರೀ ಗಾಳಿ, ಆಲಿಕಲ್ಲು ಸಮೇತ ದಾರಾಕಾರ ಮಳೆ
- Movies ನಿತೇಶ್ ತಿವಾರಿ 'ರಾಮಾಯಣ' ಚಿತ್ರದಲ್ಲಿ ರಣ್ಬೀರ್ ಅಲ್ಲ, ಯಶ್ ಹೀರೋ? ಏನಿದು ಟ್ವಿಸ್ಟ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾರ್ವಜನಿಕ ರಸ್ತೆಯಲ್ಲಿ ಪರಸ್ಪರ ಹೊಡೆದಾಡಿ ಕೊಂಡ ಪೊಲೀಸರು
ಸಾರ್ವಜನಿಕ ರಸ್ತೆಯಲ್ಲಿ ಟ್ರಾಫಿಕ್ ಪೊಲೀಸ್ ಹಾಗೂ ಕ್ರೈಂ ಪೊಲೀಸರು ಪರಸ್ಪರ ಹೊಡೆದಾಡಿ ಕೊಂಡ ಘಟನೆ ವರದಿಯಾಗಿದೆ. ಈ ಇಬ್ಬರು ಪೊಲೀಸರ ಹೊಡೆದಾಟವನ್ನು ಸಾರ್ವಜನಿಕರು ಮಧ್ಯ ಪ್ರವೇಶಿಸಿ ಬಿಡಿಸಿದ್ದಾರೆ.
ಜಾರ್ಖಂಡ್ ರಾಜ್ಯದ ರಾಜಧಾನಿ ರಾಂಚಿಯಲ್ಲಿ ನಡೆದ ಈ ಘಟನೆ ಸಾರ್ವಜನಿಕರಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಇಬ್ಬರು ಪೊಲೀಸರು ಯಾವ ಕಾರಣಕ್ಕೆ ಪರಸ್ಪರ ಹೊಡೆದಾಟಕ್ಕೆ ಇಳಿದರು. ಅವರ ಮಧ್ಯೆ ನಡೆದಿದಾದ್ದರೂ ಏನು ಈ ವಿವರಗಳನ್ನು ಈ ಲೇಖನದಲ್ಲಿ ನೋಡೋಣ.
ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಇಬ್ಬರು ಪೊಲೀಸರ ಪೈಕಿ ಒಬ್ಬ ಪೊಲೀಸ್ ಹೆಲ್ಮೆಟ್ ಇಲ್ಲದೆ ಬಂದಾಗ ಈ ಘಟನೆ ಸಂಭವಿಸಿದೆ. ಇದಕ್ಕೆ ಪುಷ್ಟಿ ನೀಡುವಂತೆ ವೀಡಿಯೊದಲ್ಲಿರುವ ಒಬ್ಬ ಪೊಲೀಸ್ ಮಾತ್ರ ಹೆಲ್ಮೆಟ್ ಧರಿಸಿರುವುದನ್ನು ಕಾಣಬಹುದು.
MOST READ:ವಾಹನ ಖರೀದಿಸುವವರಿಗೆ, ಮಾರಾಟ ಮಾಡುವವರಿಗೆ ನೆರವಾಗುವ ಆರ್ಟಿಒ ಫಾರಂಗಳಿವು!
ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಇಲ್ಲದೇ ಬಂದಿದ್ದ ಪೊಲೀಸರನ್ನು ಟ್ರಾಫಿಕ್ ಕಾನ್ಸ್ಟೆಬಲ್ ತಡೆದಿದ್ದಾರೆ. ನಮ್ಮನ್ನು ತಡೆಯಲು ನಿನಗೆ ಅಧಿಕಾರವಿಲ್ಲವೆಂದು ದ್ವಿಚಕ್ರ ವಾಹನದಲ್ಲಿದ್ದವರು ಟ್ರಾಫಿಕ್ ಕಾನ್ಸ್ಟೆಬಲ್ ಜೊತೆಗೆ ವಾಗ್ವಾದ ನಡೆಸಿದ್ದಾರೆ.
ಹೆಲ್ಮೆಟ್ ಧರಿಸದ ಕಾರಣಕ್ಕೆ ದಂಡ ಪಾವತಿಸುವಂತೆ ಹೇಳಲಾಗಿದೆ. ಈ ಕಾರಣಕ್ಕೆ ಇಬ್ಬರು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಘಟನಾ ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳ ಪ್ರಕಾರ ದ್ವಿಚಕ್ರ ವಾಹನದಲ್ಲಿ ಬಂದ ಪೊಲೀಸರೇ ಈ ಘಟನೆಗೆ ಕಾರಣವೆಂದು ಹೇಳಲಾಗಿದೆ.
MOST READ:ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು
ಪೊಲೀಸರ ಈ ವರ್ತನೆಗೆ ಜಾರ್ಖಂಡ್ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅಸಮಾಧಾನ ಏರ್ಪಟ್ಟಿದೆ. ಇಬ್ಬರು ಪೊಲೀಸರು ಪರಸ್ಪರ ಹೊಡೆದಾಡಿ ಕೊಂಡ ಘಟನೆಯ ಬಗ್ಗೆ ತನಿಖೆಗೆ ರಾಂಚಿಯ ಸಂಚಾರ ಎಸ್ಪಿ ಅಜಿತ್ ಪೀಟರ್ ಆದೇಶಿಸಿದ್ದಾರೆ.
ತನಿಖೆಯಲ್ಲಿ ಯಾರು ತಪ್ಪಿತಸ್ಥರು ಎಂದು ಕಂಡು ಬರುವುದೋ ಅವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಆದೇಶಿಸಲಾಗಿದೆ. ಎಲ್ಲಾ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂಬುದಾಗಿ ಭಾರತೀಯ ಮೋಟಾರು ವಾಹನ ಕಾಯ್ದೆ ಹೇಳುತ್ತದೆ.
MOST READ:10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್
ಈ ಕಾಯ್ದೆಯ ಪ್ರಕಾರ ದ್ವಿಚಕ್ರ ವಾಹನ ಸವಾರರು ಮಾತ್ರವಲ್ಲದೇ ಹಿಂಬದಿಯ ಸವಾರರು ಸಹ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಆದರೆ ಬಹುತೇಕ ದ್ವಿಚಕ್ರ ವಾಹನ ಸವಾರರು ಈ ನಿಯಮವನ್ನು ಪಾಲಿಸುತ್ತಿಲ್ಲ.
ನಿಯಮವನ್ನು ಪಾಲಿಸದವರಿಗೆ ಪೊಲೀಸರು ದಂಡ ವಿಧಿಸುತ್ತಾರೆ. ಈ ಸನ್ನಿವೇಶದಲ್ಲಿ ಸಾರ್ವಜನಿಕರಿಗೆ ಮಾದರಿಯಾಗಿರಬೇಕಾದ ಪೊಲೀಸರೇ ನಿರ್ಲಕ್ಷ್ಯ ತೋರಿ ಸಾರ್ವಜನಿಕ ರಸ್ತೆಯಲ್ಲಿ ಹೊಡೆದಾಟಕ್ಕೆ ಇಳಿದಿರುವುದು ನಿಜಕ್ಕೂ ಖೇದದ ಸಂಗತಿ.
MOST READ:ವರ್ಷಗಳ ಕಾಲ ಉಪ್ಪು ನೀರಿನಲ್ಲಿದ್ದರೂ ಹಡಗುಗಳ ಆಂಕರ್ಗಳಿಗೆ ತುಕ್ಕು ಹಿಡಿಯದಿರಲು ಕಾರಣಗಳಿವು
ಯೂಟ್ಯೂಬ್'ನಲ್ಲಿ ಅಪ್ ಲೋಡ್ ಮಾಡಲಾಗಿರುವ ಈ ವೀಡಿಯೊ ವೈರಲ್ ಆಗಿದ್ದು, ಈ ವೀಡಿಯೊ ವೀಕ್ಷಿಸಿದವರು ಸಾರ್ವಜನಿಕ ರಸ್ತೆಯಲ್ಲಿ ಹೊಡೆದಾಟಕ್ಕಿಳಿದ ಪೊಲೀಸರ ವರ್ತನೆಯನ್ನು ಖಂಡಿಸಿದ್ದಾರೆ.
ಸರ್ಕಾರದ ಪ್ರಮುಖ ಹುದ್ದೆಗಳಲ್ಲಿರುವ ಪೊಲೀಸರು ಹಾಗೂ ಅಧಿಕಾರಿಗಳು ಈ ರೀತಿ ವರ್ತಿಸುತ್ತಿರುವುದು ಇದೇ ಮೊದಲ ಸಲವಲ್ಲ. ಈ ಕೃತ್ಯಗಳಲ್ಲಿ ಭಾಗಿಯಾಗಿದ್ದವರು ಸೂಕ್ತ ಕ್ರಮವನ್ನು ಎದುರಿಸಿದ್ದಾರೆ ಎಂಬುದು ಗಮನಾರ್ಹ.
ಚಿತ್ರಕೃಪೆ: ದಿ ಫಾಲೋ ಅಪ್