Just In
- 7 hrs ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 8 hrs ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 8 hrs ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 8 hrs ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Movies "ನಾವು ದಕ್ಷಿಣ ಭಾರತದವರಾಗಿದ್ರೂ ಭಾಷೆ ಬರುತ್ತೆ, ಸುಂದರವಾಗಿಯೂ ಇದ್ದೇವೆ"; ನಟಿ ಪ್ರಿಯಾಮಣಿ
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಸ್ತೆ ಗುಂಡಿಗಳನ್ನು ಮುಚ್ಚಿದ ಟ್ರಾಫಿಕ್ ಕಾನ್ಸ್ಟೆಬಲ್ಗಳು
ಭಾರತದಲ್ಲಿ ಸಂಭವಿಸುವ ರಸ್ತೆ ಅಪಘಾತಗಳಿಗೆ ರಸ್ತೆ ಗುಂಡಿಗಳು ಹಾಗೂ ಹದಗೆಟ್ಟ ರಸ್ತೆಗಳು ಸಹ ಕಾರಣವಾಗಿವೆ. ರಸ್ತೆ ಗುಂಡಿಗಳಿಂದ ಸಂಚಾರ ದಟ್ಟಣೆ ಸಹ ಉಂಟಾಗುತ್ತದೆ. ಅದರಲ್ಲೂ ಮುಂಬಯಿಯಂತಹ ಮಹಾ ನಗರಗಳಲ್ಲಿ ಹೆಚ್ಚು ದಟ್ಟಣೆ ಉಂಟಾಗುತ್ತದೆ.
ಮುಂಬೈನಲ್ಲಿ ಸಂಚಾರ ದಟ್ಟಣೆಯನ್ನು ತಪ್ಪಿಸಲು ಇಬ್ಬರು ಟ್ರಾಫಿಕ್ ಕಾನ್ಸ್ಟೆಬಲ್ಗಳು ರಸ್ತೆ ಗುಂಡಿಗಳನ್ನು ಮುಚ್ಚಿದ್ದಾರೆ. ರಸ್ತೆ ಗುಂಡಿಗಳನ್ನು ಮುಚ್ಚುವವರು ಸಕಾಲಕ್ಕೆ ಬಾರದ ಕಾರಣ ಈ ಇಬ್ಬರು ಕಾನ್ಸ್ಟೆಬಲ್ಗಳೇ ರಸ್ತೆ ಗುಂಡಿಗಳನ್ನು ಮುಚ್ಚಿದ್ದಾರೆ. ರಸ್ತೆ ಗುಂಡಿಗಳನ್ನು ಮುಚ್ಚುತ್ತಿರುವ ಟ್ರಾಫಿಕ್ ಕಾನ್ಸ್ಟೆಬಲ್ಗಳ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಈ ಘಟನೆ ಕಳೆದ ಮಂಗಳವಾರ ಮುಂಬೈನಲ್ಲಿ ನಡೆದಿದೆ. ಸಂಜಯ್ ವಹಾ ಹಾಗೂ ಸಾಹಿಬುರೊ ಸಾವನ್ ಎಂಬುವವರೇ ರಸ್ತೆ ಗುಂಡಿಗಳನ್ನು ಮುಚ್ಚಿದ ಸಂಚಾರ ವಿಭಾಗದ ಪೊಲೀಸ್ ಕಾನ್ಸ್ಟೆಬಲ್ಗಳು.
ಈ ಇಬ್ಬರು ಟ್ರಾಫಿಕ್ ಕಾನ್ಸ್ಟೆಬಲ್ಗಳು ರಸ್ತೆ ಮಧ್ಯದಲ್ಲಿದ್ದ ದೊಡ್ಡ ಗುಂಡಿಗಳಿಂದ ಸಂಚಾರ ದಟ್ಟಣೆ ಉಂಟಾಗುವುದನ್ನು ಗಮನಿಸಿದ್ದಾರೆ. ತಕ್ಷಣವೇ ಅವರು ಸಂಬಂಧಪಟ್ಟ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಆದರೆ ಘಟನಾ ಸ್ಥಳಕ್ಕೆ ಯಾರೂ ಬರಲಿಲ್ಲ. ಹತ್ತಿರದಲ್ಲೇ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಅಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಬೇಕಾದ ವಸ್ತುಗಳಿದ್ದವು. ಆವುಗಳ ಮೂಲಕ ಅವರು ರಸ್ತೆ ಗುಂಡಿಗಳನ್ನು ಮುಚ್ಚಿದ್ದಾರೆ.
ಈ ಬಗ್ಗೆ ದಿ ಫ್ರೀ ಪ್ರೆಸ್ ಜರ್ನಲ್ ವರದಿ ಮಾಡಿದೆ. ವಾಹನಗಳು ತೊಂದರೆಯಿಲ್ಲದೆ ಚಲಿಸಲು ಈ ಇಬ್ಬರು ಕಾನ್ಸ್ಟೆಬಲ್ಗಳು ರಸ್ತೆ ಗುಂಡಿಗಳನ್ನು ಮುಚ್ಚಿದ್ದಾರೆ. ಈ ಇಬ್ಬರು ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಎಲ್ಲೆಡೆಯಿಂದ ಅಭಿನಂದನೆಗಳು ವ್ಯಕ್ತವಾಗುತ್ತಿವೆ.
ಪ್ರತಿ ವರ್ಷ ಮುಂಬಯಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತದೆ. ಅದರಲ್ಲೂ ಕಳೆದ ಕೆಲವು ದಿನಗಳಿಂದ ಮುಂಬೈನಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದಾಗಿ ರಸ್ತೆಗಳು ಹಾನಿಗೊಳಗಾಗಿವೆ.
ಈ ಸಮಸ್ಯೆ ಮುಂಬೈನಲ್ಲಿ ಮಾತ್ರವಲ್ಲದೆ ಭಾರತದ ವಿವಿಧ ನಗರಗಳಲ್ಲಿಯೂ ಉಂಟಾಗಿದೆ. ರಸ್ತೆ ನಿರ್ಮಿಸುವವರು ಲಾಭ ಗಳಿಸುವ ಸಲುವಾಗಿ ಕಡಿಮೆ ವೆಚ್ಚದಲ್ಲಿ, ಗುಣಮಟ್ಟವಿಲ್ಲದ ರಸ್ತೆಗಳನ್ನು ನಿರ್ಮಿಸುತ್ತಿರುವುದೇ ಇದಕ್ಕೆ ಒಂದು ಪ್ರಮುಖ ಕಾರಣ.
ಭಾರತದಲ್ಲಿ ಪ್ರತಿ ವರ್ಷ ಸುಮಾರು 1.50 ಲಕ್ಷ ಜನರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದಾರೆ. ವಾಹನ ಸವಾರರು ಸಂಚಾರಿ ನಿಯಮಗಳನ್ನು ಸರಿಯಾಗಿ ಪಾಲಿಸದೇ ಇರುವುದು ರಸ್ತೆ ಅಪಘಾತಗಳಿಗೆ ಪ್ರಮುಖ ಕಾರಣ.
ಇದರ ಜೊತೆಗೆ ಹದಗೆಟ್ಟ ರಸ್ತೆಗಳು ಸಹ ಅಪಘಾತಗಳಿಗೆ ಕಾರಣವಾಗುತ್ತಿವೆ. ಕೇಂದ್ರ ಸರ್ಕಾರವು ರಸ್ತೆ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಲು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ.
ಇದರ ಭಾಗವಾಗಿ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರವು ಆದ್ಯತೆ ನೀಡುತ್ತಿದೆ. ಇದರಿಂದ ಮುಂಬರುವ ದಿನಗಳಲ್ಲಿ ಭಾರತದಲ್ಲಿ ಸಂಭವಿಸುವ ರಸ್ತೆ ಅಪಘಾತಗಳ ಸಂಖ್ಯೆ ಕಡಿಮೆಯಾಗುವ ಸಾಧ್ಯತೆಗಳಿವೆ.
ಗಮನಿಸಿ: ಕೆಲವು ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.