Just In
- 21 min ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 1 hr ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 1 hr ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 1 hr ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
Don't Miss!
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Movies ಅರ್ಜುನ್ ಮಹಾಕ್ಷಯ್ ಅಡ್ಡಾದಲ್ಲೂ ಆಯುಧ ಪೂಜೆ; 'ಮ್ಯಾಕ್ಸ್' ಕ್ರೇಜಿ ಅಪ್ಡೇಟ್
- News ಮಂಡ್ಯದ ‘ಹಲವು ಸುಮಲತಾ’ ತಂತ್ರ ಬೆಂಗಳೂರು ಗ್ರಾಮಾಂತದಲ್ಲೂ ಬಂತಾ? ಮತ್ತೊಬ್ಬ ಡಾ ಸಿಎನ್ ಮಂಜುನಾಥ್ ಕಣಕ್ಕೆ!
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಾಹನ ಸವಾರರ ಜೀವಕ್ಕೆ ಕುತ್ತು ತರುತಂತೆ ಟೈರ್ ಕಿಲ್ಲರ್ ಹಂಪ್?
ಕಳೆದ ವಾರವಷ್ಟೇ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಟೈರ್ ಕಿಲ್ಲರ್ ಎಂಬ ತಂತ್ರಜ್ಞಾನದ ಕುರಿತು ಇದೀಗ ಅಪಸ್ವರಗಳು ಕೇಳಿಬಂದಿದ್ದು, ಮಹತ್ವದ ಯೋಜನೆಗೆ ಆರಂಭದಲ್ಲೇ ಹಿನ್ನೆಡೆಯಾಗಿದೆ.
ಕಳೆದ ವಾರವಷ್ಟೇ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಟೈರ್ ಕಿಲ್ಲರ್ ಎಂಬ ತಂತ್ರಜ್ಞಾನದ ಕುರಿತು ಇದೀಗ ಅಪಸ್ವರಗಳು ಕೇಳಿಬಂದಿದ್ದು, ಮಹತ್ವದ ಯೋಜನೆಗೆ ಆರಂಭದಲ್ಲೇ ಹಿನ್ನೆಡೆಯಾಗಿದೆ.
ರಸ್ತೆ ನಿಯಮಗಳನ್ನು ಪಾಲಿಸದೆ ಒನ್ ವೇ ಮತ್ತು ಮುಖ್ಯ ರಸ್ತೆಗಳಲ್ಲಿ ಅಡ್ಡಲಾಗಿ ಬರುವ ವಾಹನ ಸವಾರರಿಗೆ ಬುದ್ದಿಕಲಿಸಲು ಮುಂದಾಗಿದ್ದ ಪುಣೆ ಮೂಲದ ಟೌನ್ ಪ್ಲ್ಯಾನಿಂಗ್ ಅಮಾನೊರಾ ಎನ್ನುವ ಸಂಸ್ಥೆಯೊಂದು ಆಯ್ದ ಕೆಲ ರಸ್ತೆಗಳಲ್ಲಿ ಟೈರ್ ಕಿಲ್ಲರ್ ಹಂಪ್ಗಳನ್ನು ಅಳವಡಿಕೆ ಮಾಡಿತ್ತು.
ಅಮಾನೊರಾ ಸಂಸ್ಥೆಯ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಬೆಂಬಲ ವ್ಯಕ್ತವಾಗುತ್ತಿದಂತೆ ಟ್ರಾಫಿಕ್ ಪೊಲೀಸರಿಂದಲೂ ಸಹ ಈ ನಿಟ್ಟಿನಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿತ್ತು.
ಜೊತೆಗೆ ಕಾನೂನು ಉಲ್ಲಂಘನೆಗೆ ಇಲ್ಲಿ ಯಾವುದೇ ಅವಕಾಶವೇ ಇಲ್ಲದಿರವುದು ಪೊಲೀಸರ ಆಕರ್ಷಣೆಗೂ ಕಾರಣವಾಗಿತ್ತು. ಆದ್ರೆ ಹೊಸ ಮಾದರಿಯ ಟೈರ್ ಕಿಲ್ಲರ್ ಹಂಪ್ ಕುರಿತು ಸಾಧಕ ಬಾಧಕಗಳನ್ನು ಕುರಿತು ಚರ್ಚೆ ನಡೆಸಿದಾಗ ಟೈರ್ ಕಿಲ್ಲರ್ನಿಂದ ಲಾಭಕ್ಕಿಂತ ಅನಾಹುತವೇ ಹೆಚ್ಚು ಎಂಬ ವಾದಗಳು ಕೇಳಿಬರುತ್ತಿವೆ.
ಹೀಗಾಗಿ ಅಮಾನೊರಾ ಸಂಸ್ಥೆಗೆ ನೋಟಿಸ್ ಜಾರಿ ಮಾಡಿರುವ ಪುಣೆ ಪೊಲೀಸರು ಈ ಕೂಡಲೇ ಟೈರ್ ಕಿಲ್ಲರ್ ಹಂಪ್ಗಳನ್ನು ತೆಗೆದುಹಾಕುವಂತೆ ಸೂಚನೆ ನೀಡಿದ್ದಾರೆ. ನೋಟಿಸ್ನಲ್ಲಿರುವ ಹೇಳಿಕೆಯಂತೆ ಜೀವಹಾನಿ ಮಾಡಬಲ್ಲ ಟೈರ್ ಕಿಲ್ಲರ್ ಅಳವಡಿಕೆಗೆ ಅವಕಾಶವೇ ಇಲ್ಲ ಎಂದು ಹೇಳಲಾಗಿದೆ.
ವಿಶೇಷವಾಗಿ ರಚನೆಗೊಂಡಿರುವ ಈ ಟೈರ್ ಕಿಲ್ಲರ್ ಸೌಲಭ್ಯವು ರಾಂಗ್ ರೂಟ್ನಲ್ಲಿ ಬರುವ ವಾಹನ ಸವಾರರಿಗೆ ಕಂಟಕವಾಗಲಿದ್ದು, ಒಂದು ವೇಳೆ ಟೈರ್ ಕಿಲ್ಲರ್ನ ವಿರುದ್ದ ದಿಕ್ಕಿನಲ್ಲಿ ಹೋಗಿದ್ದೆ ಆದಲ್ಲಿ ಟೈರ್ ಪಂಚರ್ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ.
ಯಾಕೇಂದ್ರೆ ಟೈರ್ ಕಿಲ್ಲರ್ನಲ್ಲಿ ಬಳಸಲಾಗಿರುವ ಹರಿತವಾದ ಮೊಳೆಗಳು ವಿರುದ್ಧ ದಿಕ್ಕಿನಲ್ಲಿ ಬರುವ ವಾಹನಗಳ ಟೈರ್ಗಳಲ್ಲಿ ಸಿಕ್ಕಿಕೊಳ್ಳುವುದಲ್ಲದೇ ದುರಂತಕ್ಕೆ ಎಡೆ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ. ಇದೇ ಕಾರಣಕ್ಕೆ ನೋಟಿಸ್ ಜಾರಿ ಮಾಡಿರುವ ಪೊಲೀಸರು, ಟೈರ್ ಕಿಲ್ಲರ್ ಹಂಪ್ಗಳು ತೆರವುಗೊಳಿಸಲು ಮುಂದಾಗಿದ್ದಾರೆ.
ಸದ್ಯ ಪ್ರಾಯೋಗಿಕವಾಗಿ ಪುಣೆಯ ಪ್ರಮುಖ ರಸ್ತೆಗಳಲ್ಲಿ ಟೈರ್ ಕಿಲ್ಲರ್ಗಳನ್ನು ಅಳವಡಿಸಲಾಗುತ್ತಿದ್ದು, ಇದರಿಂದ ಬಹುತೇಕ ವಾಹನ ಸವಾರರು ರಾಂಗ್ ರೂಟ್ ಹವ್ಯಾಸಕ್ಕೆ ಗುಡ್ ಬೈ ಹೇಳಿ ಸರಿಯಾದ ರಸ್ತೆ ನಿಯಮಗಳನ್ನು ಪಾಲನೆ ಮಾಡುತ್ತಿದ್ದಾರೆ.
ಇದರ ಹೊರತಾಗಿಯೂ ಟೈರ್ ಕಿಲ್ಲರ್ ಹಂಪ್ ದಾಟುವ ವೇಳೆ ಯಾವುದೇ ರೀತಿ ಅಪಘಾತ ಸಂಭವಿಸಿದ್ದಲ್ಲಿ ವಾಹನ ಸವಾರರ ಜೀವಕ್ಕೆ ಹಾನಿ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನಲಾಗುತ್ತಿದ್ದು, ಹೊಸ ಯೋಜನೆಗೆ ಇಂಡಿಯನ್ ರೋಡ್ ಕಾಂಗ್ರೆಸ್(ಸಮಿತಿ) ಕೂಡಾ ಒಪ್ಪಿಗೆ ಸೂಚಿಸಿಲ್ಲವಂತೆ.
ಈ ಬಗ್ಗೆ ಮಾತನಾಡಿರುವ ಅಮಾನೊರಾ ಸಂಸ್ಥೆಯ ಮುಖ್ಯಸ್ಥ ಸುನೀಲ್ ಕಠಾರೆ, ಟೈರ್ ಕಿಲ್ಲರ್ ಅಳವಡಿಕೆಯಿಂದಾಗಿ ಈಗಾಗಲೇ ಸಾಕಷ್ಟು ಜನ ವಾಹನ ಸವಾರರು ಸರಿಯಾದ ರೀತಿಯಲ್ಲಿ ರಸ್ತೆ ನಿಯಮ ಪಾಲನೆ ಮಾಡುತ್ತಿದ್ದು, ಇದರಿಂದಾಗಿ ಅಪಘಾತ ಪ್ರಕರಣಗಳು ಸಹ ಹತೋಟಿ ಬಂದಿವೆ ಎಂದಿದ್ದಾರೆ.
ಆದ್ರೆ ಟ್ರಾಫಿಕ್ ಪೊಲೀಸರು ಹೊಸ ಯೋಜನೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಟೈರ್ ಕಿಲ್ಲರ್ಗಳಿಂದಾಗಿ ವಾಹನ ಸವಾರರ ಜೀವಕ್ಕೆ ಆಪತ್ತು ಎಂದು ಹೇಳಿದ ಕಾರಣಕ್ಕೆ ಟೈರ್ ಕಿಲ್ಲರ್ಗಳನ್ನು ಸದ್ಯದಲ್ಲೇ ತೆಗೆದುಹಾಕಲಿದ್ದೇವೆ ಎಂದು ಸುನೀಲ್ ಕಠಾರೆ ಅವರು ಸುದ್ದಿವಾಹಿನಿಯೊಂದರ ಜೊತೆ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಇನ್ನು ರಸ್ತೆ ನಿಯಮ ಉಲ್ಲಂಘನೆ ಮಾಡುವ ವಾಹನ ಸವಾರರಿಗೆ ಟೈರ್ ಕಿಲ್ಲರ್ ಹಂಪ್ಗಳು ಸರಿಯಾದ ಪರಿಹಾರ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದ ಸಾರ್ವಜನಿಕರಿಗೆ ಪುಣೆ ಪೊಲೀಸರು ನಿರಾಸೆ ಮೂಡಿಸಿದ್ದು, ಈ ಕೂಡಲೇ ಡೇಂಜರ್ ಟೈರ್ ಕಿಲ್ಲರ್ಗಳನ್ನು ಕಿತ್ತು ಹಾಕಲು ಸೂಚನೆ ನೀಡಿದೆ.
ಡ್ರೈವ್ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟಾಪ್ ಸ್ಟೋರಿಗಳು:
01. ಬಾಲಕಿಗೆ ಗುದ್ದಿದ ಕೆಟಿಎಂ ಬೈಕ್- ಬೈಕ್ರ್ಗಳಿಗೆ ನಡು ರಸ್ತೆಯಲ್ಲೇ ಹಿಗ್ಗಾಮುಗ್ಗ ಥಳಿತ..!!
02.
30
ಕೋಟಿಗೂ
ಹೆಚ್ಚು
ಬೆಲೆಬಾಳುವ
ಈ
ಐಷಾರಾಮಿ
ಎಸ್ಯುವಿ
ಕಾರಿನ
ವಿಶೇಷತೆ
ಏನು?
03. ಕಾರಿನ ಗೇರ್ ಸ್ಕಿಪ್ ಮಾಡುವುದರಿಂದ ಗೇರ್ಬಾಕ್ಸ್ ಹಾಳಾಗುತ್ತಾ ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
04.ಉಡುಪಿಯಲ್ಲಿ ಭೀಕರ ಅಪಘಾತ- ಇನೋವಾ ಗುದ್ದಿದ ರಭಸಕ್ಕೆ ಗಾಳಿಯಲ್ಲಿ ತೂರಿ ಹೋದ ಪಲ್ಸರ್ ಬೈಕ್...