Just In
- 31 min ago ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- 39 min ago Mahindra Thar: ಸುಲಭವಾಗಿ ಆಫ್ರೋಡ್ ಕಿಂಗ್ ಖರೀದಿಸಬೇಕೆ?: ಆನ್ರೊಡ್ ಬೆಲೆ, EMI ಸಂಪೂರ್ಣ ಮಾಹಿತಿ!
- 51 min ago Mahindra: ಫ್ಯಾಮಿಲಿ ಕಾರು ಮಹೀಂದ್ರಾ ಎಕ್ಸ್ಯುವಿ700 ಖರೀದಿಸುವವರಿಗೆ ಸಿಹಿಸುದ್ದಿ.. ಇನ್ನೂ ತಿಂಗಳೇ ಸಾಕು!
- 2 hrs ago Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
Don't Miss!
- News Lok Sabha Election: ರಾಜಕೀಯ ಅಖಾಡದಲ್ಲಿ ನಕಲಿ ಅಭ್ಯರ್ಥಿಗಳ ಸೌಂಡ್ ಜೋರು: ಅಖಾಡದಲ್ಲಿ ನಕಲಿ ರಾಹುಲ್ ಗಾಂಧಿ, ಪಿಎಸ್ ಯಡಿಯೂರಪ್ಪ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Movies Sathya ; ಸತ್ಯಾ ತವರು ಮನೆಗೆ ಅವಮಾನ ಮಾಡಿದ ಕೀರ್ತನ..!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪೆಟ್ರೋಲ್ನಲ್ಲಿ ಎಥೆನಾಲ್ ಮಿಶ್ರಣ ಪ್ರಮಾಣ ಹೆಚ್ಚಿಸಲು ಮುಂದಾದ ಕೇಂದ್ರ ಸರ್ಕಾರ
2023-24ರ ವೇಳೆಗೆ ಭಾರತವು 20% ನಷ್ಟು ಎಥೆನಾಲ್ ಅನ್ನು ಪೆಟ್ರೋಲ್ನೊಂದಿಗೆ ಬೆರೆಸುವ ಗುರಿಯನ್ನು ಹೊಂದಿದೆ ಎಂದು ಕೇಂದ್ರ ಸಚಿವರಾದ ಪಿಯೂಷ್ ಗೋಯಲ್'ರವರು ತಿಳಿಸಿದ್ದಾರೆ.
ಇದೇ ವೇಳೆ ಸರ್ಕಾರದ ಅಂತಿಮ ಗುರಿ ವಾಹನಗಳು 100% ನಷ್ಟು ಎಥೆನಾಲ್'ನಲ್ಲಿ ಚಲಿಸುವಂತೆ ಮಾಡುವುದು ಎಂದು ಪಿಯೂಷ್ ಗೋಯಲ್ ಹೇಳಿದ್ದಾರೆ. ಪೆಟ್ರೋಲ್ಗೆ ಬೆರೆಸುವ ಎಥೆನಾಲ್ ಪ್ರಮಾಣವನ್ನು ಹಂತ ಹಂತವಾಗಿ ಹೆಚ್ಚಿಸಲು ಕೇಂದ್ರ ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ.
ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆಯಿಂದ ಭಾರತಕ್ಕೆ ವಿವಿಧ ರೀತಿಯ ಪ್ರಯೋಜನಗಳಾಗಲಿವೆ. ಮೊದಲ ಪ್ರಯೋಜನವೆಂದರೆ ಭಾರತವು ಆಮದು ಮಾಡಿಕೊಳ್ಳುವ ಕಚ್ಚಾ ತೈಲದ ಪ್ರಮಾಣವು ಕಡಿಮೆಯಾಗಲಿದೆ.
ವಿದೇಶದಿಂದ ಹೆಚ್ಚಿನ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತಿರುವುದರಿಂದ ಭಾರತದ ಆರ್ಥಿಕತೆ ಮೇಲೆ ಹೆಚ್ಚು ಹೊರೆ ಬೀಳುತ್ತಿದೆ. ಭಾರತದ ಒಟ್ಟು ಕಚ್ಚಾ ತೈಲ ಬೇಡಿಕೆಯ 85% ರಷ್ಟು ಪ್ರಮಾಣವು ವಿದೇಶದಿಂದ ಆಮದಾಗುತ್ತಿದೆ ಎಂಬುದು ಗಮನಾರ್ಹ.
ಈ ಹಿನ್ನೆಲೆಯಲ್ಲಿ ಕಚ್ಚಾ ತೈಲ ಆಮದನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರವು ಮೊದಲಿನಿಂದಲೂ ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇವುಗಳಲ್ಲಿ ಎಥೆನಾಲ್ ಅನ್ನು ಪೆಟ್ರೋಲ್ನೊಂದಿಗೆ ಬೆರೆಸುವುದು ಸಹ ಸೇರಿದೆ.
ಎರಡನೆಯ ಪ್ರಯೋಜನವೆಂದರೆ ಪೆಟ್ರೋಲ್ನೊಂದಿಗೆ ಎಥೆನಾಲ್ ಅನ್ನು ಹೆಚ್ಚು ಮಿಶ್ರಣ ಮಾಡುವುದರಿಂದ ಭಾರತೀಯ ರೈತರಿಗೆ ಹಲವು ರೀತಿಯಲ್ಲಿ ಲಾಭಗಳಾಗುತ್ತವೆ. ಕೃಷಿ ಬೆಳೆಗಳಾದ ಕಬ್ಬು, ಮೆಕ್ಕೆಜೋಳ ಹಾಗೂ ಆಲೂಗಡ್ಡೆಗಳಿಂದ ಎಥೆನಾಲ್ ಉತ್ಪಾದಿಸಲಾಗುತ್ತದೆ ಎಂಬುದು ಇದಕ್ಕೆ ಪ್ರಮುಖ ಕಾರಣ.
ಮೂರನೆಯ ಪ್ರಯೋಜನವೆಂದರೆ ಎಥೆನಾಲ್ ಅನ್ನು ಪೆಟ್ರೋಲ್ನೊಂದಿಗೆ ಬೆರೆಸಿ ಅದನ್ನು ವಾಹನಗಳಲ್ಲಿ ಉಪಯೋಗಿಸುವುದರಿಂದ ವಾಯುಮಾಲಿನ್ಯ ಕಡಿಮೆಯಾಗುತ್ತದೆ. ಪ್ರಪಂಚದ ಅತ್ಯಂತ ಕಲುಷಿತ ದೇಶಗಳಲ್ಲಿ ಒಂದಾದ ಭಾರತಕ್ಕೆ ಎಥೆನಾಲ್ ಬಳಕೆಯು ವರದಾನವಾಗಲಿದೆ.
ಅಮೆರಿಕಾ ಹಾಗೂ ಬ್ರೆಜಿಲ್'ನಂತಹ ದೇಶಗಳಲ್ಲಿ ಈಗಾಗಲೇ ಎಥೆನಾಲ್ ಬಳಕೆ ಪ್ರಮಾಣವು ಹೆಚ್ಚಾಗಿದೆ. ಆದರೆ ಭಾರತವು ಎಥೆನಾಲ್ ಬಳಕೆಯಲ್ಲಿ ಇನ್ನೂ ಶೈಶವಾವಸ್ಥೆಯಲ್ಲಿದೆ.
ಭಾರತದಲ್ಲಿ ಎಥೆನಾಲ್ ಬಳಸುವ ಪ್ರಯತ್ನಗಳು ಹಲವು ವರ್ಷಗಳ ಹಿಂದೆಯೇ ಆರಂಭವಾದವು. ಆದರೆ ಈಗ ಅದರ ಬಳಕೆಯ ಪ್ರಮಾಣವು ಹೆಚ್ಚಾಗುತ್ತಿದೆ. ಭಾರತದ ಕಚ್ಚಾ ತೈಲ ಆಮದು ಪ್ರಮಾಣವನ್ನು ಕಡಿಮೆ ಮಾಡಬೇಕೆಂಬ ಕೇಂದ್ರ ಸರ್ಕಾರದ ದೃಢ ನಿರ್ಧಾರವೇ ಇದಕ್ಕೆ ಕಾರಣ.
ಇದರ ಜೊತೆಗೆ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವ ಮೂಲಕ ಕಚ್ಚಾ ತೈಲ ಆಮದು ಪ್ರಮಾಣವನ್ನು ಕಡಿಮೆ ಮಾಡಲು ಹಾಗೂ ವಾಯುಮಾಲಿನ್ಯ ಸಮಸ್ಯೆಗೆ ಪರಿಹಾರ ನೀಡಲು ಕೇಂದ್ರ ಸರ್ಕಾರವು ಮುಂದಾಗಿದೆ.
ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.