ರಸ್ತೆ ಅಪಘಾತಗಳಲ್ಲಿ ಗಾಯಗೊಳ್ಳುವವರಿಗೆ ತಕ್ಷಣವೇ ಚಿಕಿತ್ಸೆ ಸಿಗುವಂತೆ ಮಾಡಲಿದೆ ಈ ಹೊಸ ಯೋಜನೆ

ದೇಶಾದ್ಯಂತವಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ಅಪಘಾತದಲ್ಲಿ ಗಾಯಗೊಳ್ಳುವವರಿಗೆ ತಕ್ಷಣವೇ ವೈದ್ಯಕೀಯ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯು ಹೊಸ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ.

ರಸ್ತೆ ಅಪಘಾತಗಳಲ್ಲಿ ಗಾಯಗೊಳ್ಳುವವರಿಗೆ ತಕ್ಷಣವೇ ಚಿಕಿತ್ಸೆ ಸಿಗುವಂತೆ ಮಾಡಲಿದೆ ಈ ಹೊಸ ಯೋಜನೆ

ಈ ಹಿನ್ನೆಲೆಯಲ್ಲಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯು ಅಪಘಾತದ ಸಂದರ್ಭದಲ್ಲಿ ಪೊಲೀಸರಿಗೆ ಹಾಗೂ ಆಂಬುಲೆನ್ಸ್‌ಗಳಿಗೆ ತಕ್ಷಣವೇ ಮಾಹಿತಿ ಲಭ್ಯವಾಗುವಂತೆ ಮಾಡಲು ಸುಧಾರಿತ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿದೆ. ಈ ಹೊಸ ಅತ್ಯಾಧುನಿಕ ಯೋಜನೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಹೇಳಲಾಗಿದೆ.

ರಸ್ತೆ ಅಪಘಾತಗಳಲ್ಲಿ ಗಾಯಗೊಳ್ಳುವವರಿಗೆ ತಕ್ಷಣವೇ ಚಿಕಿತ್ಸೆ ಸಿಗುವಂತೆ ಮಾಡಲಿದೆ ಈ ಹೊಸ ಯೋಜನೆ

ಈ ಹೊಸ ಯೋಜನೆಯಡಿ ಗಾಯಾಳುಗಳನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲು ಜಿಪಿಎಸ್ ಸೌಲಭ್ಯ ಹೊಂದಿರುವ ಆಂಬ್ಯುಲೆನ್ಸ್ ಸಿದ್ಧವಾಗಲಿದೆ. ರಸ್ತೆ ಸುರಕ್ಷತೆಯನ್ನು ಸುಧಾರಿಸಲು ಹೊಸ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯ ಕಾರ್ಯದರ್ಶಿ ಗಿರಿಧರ್ ಅರಮನೆ ಹೇಳಿದ್ದಾರೆ.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ರಸ್ತೆ ಅಪಘಾತಗಳಲ್ಲಿ ಗಾಯಗೊಳ್ಳುವವರಿಗೆ ತಕ್ಷಣವೇ ಚಿಕಿತ್ಸೆ ಸಿಗುವಂತೆ ಮಾಡಲಿದೆ ಈ ಹೊಸ ಯೋಜನೆ

ಪೊಲೀಸರನ್ನು, ಆಂಬ್ಯುಲೆನ್ಸ್‌ಗಳನ್ನು ಹಾಗೂ ಆಸ್ಪತ್ರೆಗಳನ್ನು ಒಂದೇ ನೆಟ್‌ವರ್ಕ್ ಅಡಿಯಲ್ಲಿ ತರುವುದರಿಂದ ರಸ್ತೆ ಅಪಘಾತಕ್ಕೆ ಒಳಗಾದವರಿಗೆ ತಕ್ಷಣವೇ ಚಿಕಿತ್ಸೆ ನೀಡಬಹುದು ಎಂದು ಅವರು ಹೇಳಿದರು.

ರಸ್ತೆ ಅಪಘಾತಗಳಲ್ಲಿ ಗಾಯಗೊಳ್ಳುವವರಿಗೆ ತಕ್ಷಣವೇ ಚಿಕಿತ್ಸೆ ಸಿಗುವಂತೆ ಮಾಡಲಿದೆ ಈ ಹೊಸ ಯೋಜನೆ

ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಜೊತೆಗೆ ಮಾತುಕತೆ ನಡೆಸಲಾಗುತ್ತಿದೆ. ಭಾರತವು ಪ್ರತಿವರ್ಷ ಹೆಚ್ಚು ಅಪಘಾತಗಳನ್ನು ದಾಖಲಿಸುವ ದೇಶಗಳಲ್ಲಿ ಒಂದಾಗಿದೆ. ಭಾರತದಲ್ಲಿ ಸರಿ ಸುಮಾರು 1.50 ಲಕ್ಷ ಜನರು ರಸ್ತೆ ಅಪಘಾತಗಳಿಂದ ಸಾವನ್ನಪ್ಪುತ್ತಿದ್ದಾರೆ.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ರಸ್ತೆ ಅಪಘಾತಗಳಲ್ಲಿ ಗಾಯಗೊಳ್ಳುವವರಿಗೆ ತಕ್ಷಣವೇ ಚಿಕಿತ್ಸೆ ಸಿಗುವಂತೆ ಮಾಡಲಿದೆ ಈ ಹೊಸ ಯೋಜನೆ

ಅಪಘಾತಗಳಲ್ಲಿ ಗಾಯಗೊಳ್ಳುವವರಿಗೆ ಸಕಾಲದಲ್ಲಿ ವೈದ್ಯಕೀಯ ಚಿಕಿತ್ಸೆ ನೀಡಲು ಸಾಧ್ಯವಾಗದೇ ಇರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ಈ ಕಾರಣಕ್ಕೆ ರಸ್ತೆಅಪಘಾತಗಳಲ್ಲಿ ಸಾವನ್ನಪ್ಪುವವರ ಸಂಖ್ಯೆಯನ್ನು ಕಡಿಮೆ ಮಾಡುವ ಸಲುವಾಗಿ ಈ ಹೊಸ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.

ರಸ್ತೆ ಅಪಘಾತಗಳಲ್ಲಿ ಗಾಯಗೊಳ್ಳುವವರಿಗೆ ತಕ್ಷಣವೇ ಚಿಕಿತ್ಸೆ ಸಿಗುವಂತೆ ಮಾಡಲಿದೆ ಈ ಹೊಸ ಯೋಜನೆ

ಇದರ ಜೊತೆಗೆ ರಸ್ತೆ ಅಪಘಾತಗಳ ಸಂಖ್ಯೆಯನ್ನು ಕಡಿಮೆಗೊಳಿಸಲು ಕೇಂದ್ರ ಸರ್ಕಾರವು ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಜನರ ಪ್ರತಿಭಟನೆಯ ನಡುವೆಯೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಸಂಚಾರ ಉಲ್ಲಂಘನೆಗಾಗಿ ಭಾರೀ ಪ್ರಮಾಣದ ದಂಡ ವಿಧಿಸುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ರಸ್ತೆ ಅಪಘಾತಗಳಲ್ಲಿ ಗಾಯಗೊಳ್ಳುವವರಿಗೆ ತಕ್ಷಣವೇ ಚಿಕಿತ್ಸೆ ಸಿಗುವಂತೆ ಮಾಡಲಿದೆ ಈ ಹೊಸ ಯೋಜನೆ

ಹೊಸ ಮೋಟಾರು ವಾಹನ ಕಾಯ್ದೆಯನ್ನು 2019ರ ಸೆಪ್ಟೆಂಬರ್‌ನಲ್ಲಿ ಜಾರಿಗೊಳಿಸಲಾಯಿತು. ಹೊಸ ಕಾಯ್ದೆಯು ಜಾರಿಯಾದ ನಂತರ ಭಾರತದಾದ್ಯಂತ ರಸ್ತೆ ಅಪಘಾತಗಳ ಸಂಖ್ಯೆಯಲ್ಲಿ 3.86%ನಷ್ಟು ಇಳಿಕೆಯಾಗಿದೆ.

ರಸ್ತೆ ಅಪಘಾತಗಳಲ್ಲಿ ಗಾಯಗೊಳ್ಳುವವರಿಗೆ ತಕ್ಷಣವೇ ಚಿಕಿತ್ಸೆ ಸಿಗುವಂತೆ ಮಾಡಲಿದೆ ಈ ಹೊಸ ಯೋಜನೆ

ಕೇಂದ್ರ ಸರ್ಕಾರವು ಹೊಸ ಮೋಟಾರು ವಾಹನ ಕಾಯ್ದೆಯ ಜೊತೆಗೆ ಇನ್ನೂ ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ವಾಹನಗಳಲ್ಲಿ ವಿವಿಧ ಸುರಕ್ಷತಾ ಸಾಧನಗಳಾದ ಏರ್‌ಬ್ಯಾಗ್ ಹಾಗೂ ಎಬಿಎಸ್ ಅನ್ನು ಕಡ್ಡಾಯಗೊಳಿಸಿರುವುದು ಇದಕ್ಕೆ ಉದಾಹರಣೆಯಾಗಿದೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ರಸ್ತೆ ಅಪಘಾತಗಳಲ್ಲಿ ಗಾಯಗೊಳ್ಳುವವರಿಗೆ ತಕ್ಷಣವೇ ಚಿಕಿತ್ಸೆ ಸಿಗುವಂತೆ ಮಾಡಲಿದೆ ಈ ಹೊಸ ಯೋಜನೆ

ಈ ಸುರಕ್ಷತಾ ಸಾಧನಗಳು ವಾಹನಗಳ ಸುರಕ್ಷತೆಯನ್ನು ಹೆಚ್ಚಿಸುತ್ತವೆ. ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಸಂಚಾರ ನಿಯಮಗಳನ್ನು ವಾಹನ ಸವಾರರುಸರಿಯಾಗಿ ಪಾಲಿಸಿದರೆ ಭಾರತದಲ್ಲಿ ರಸ್ತೆ ಅಪಘಾತಗಳ ಸಾಕಷ್ಟು ಸಂಖ್ಯೆಯಲ್ಲಿ ಕಡಿಮೆಯಾಗಲಿದೆ.

Article Published On: Tuesday, February 9, 2021, 14:34 [IST]
English summary
Union transport ministry new scheme to provide immediate treatment to road accident victims. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+