Just In
- 44 min ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 1 hr ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 3 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 4 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News ಕ್ವಿಟ್ ಎನ್ಡಿಎ ಮತ್ತು ಸೇವ್ ಇಂಡಿಯಾ: ಪ್ರೊ. ಮಹೇಶ್ಚಂದ್ರಗುರು
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Movies 3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಡವರ ಕಷ್ಟಕ್ಕೆ ಮಿಡಿಯುವ ತಲಾ ಅಜಿತ್ರವರ ಮತ್ತೊಂದು ಮುಖ..!
ತಮಿಳು ಚಿತ್ರರಂಗದ ಪ್ರಮುಖ ನಟರಲ್ಲಿ ಒಬ್ಬರಾದ ತಲಾ ಅಜಿತ್ ರೇಸರ್ ಸಹ ಹೌದು. ಈ ಕಾರಣಕ್ಕೆ ಅವರ ಚಿತ್ರಗಳಲ್ಲಿ ಬೈಕ್ ಚೇಸಿಂಗ್ ದೃಶ್ಯಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ಇದರಿಂದಾಗಿಯೇ ಅಜಿತ್ರವರಿಗೆ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳಿದ್ದಾರೆ.
ಸಿನಿಮಾಗಳ ಹೊರತಾಗಿ ನಿಜ ಜೀವನದಲ್ಲಿಯೂ ಅಜಿತ್ರವರು ಬೈಕ್ಗಳ ಕ್ರೇಜ್ ಹೊಂದಿದ್ದಾರೆ. ಬೈಕ್ಗಳಲ್ಲಿ ಲಾಂಗ್ ರೈಡ್ ಹೋಗುವುದು ಅಜಿತ್ ಅವರ ನೆಚ್ಚಿನ ಹವ್ಯಾಸಗಳಲ್ಲಿ ಒಂದು. ಇದನ್ನು ಸಾಬೀತುಪಡಿಸುವ ಘಟನೆಯೊಂದು ಇತ್ತೀಚೆಗೆ ನಡೆದಿದೆ. ತಲಾ ಅಜಿತ್ರವರ ಹೊಸ ಚಿತ್ರದ ಶೂಟಿಂಗ್ ಅನ್ನು ಹೈದರಾಬಾದ್ನಲ್ಲಿ ನಡೆಸಲಾಗಿತ್ತು.
ಶೂಟಿಂಗ್ ಮುಗಿದ ನಂತರ ತಲಾ ಅಜಿತ್ ಚೆನ್ನೈಗೆ ಮರಳಲು ಸಿದ್ಧರಾಗಿದ್ದರು. ಆದರೆ ಲಾಕ್ಡೌನ್ ಕಾರಣಕ್ಕೆ ವಿಮಾನಯಾನ ಸೇವೆಗಳನ್ನು ರದ್ದುಪಡಿಸಲಾಯಿತು. ಇದರಿಂದಾಗಿ ಅಜಿತ್ರವರು ಹೈದರಾಬಾದ್ನಿಂದ ಚೆನ್ನೈಗೆ ಸ್ಪೋರ್ಟ್ಸ್ ಬೈಕ್ನಲ್ಲಿಯೇ ಪ್ರಯಾಣಿಸಿದರು ಎಂದು ವರದಿಯಾಗಿದೆ.
MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ
ಅಜಿತ್ರವರು ಈ ಹಿಂದೆ ತಮ್ಮ ಬೈಕಿನಲ್ಲಿ ಲಾಂಗ್ ರೈಡ್ ಹೋಗಿದ್ದರು. ಈ ಮಾಹಿತಿಯನ್ನು ಅಜಿತ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಅವರ ಆಪ್ತ ಸ್ನೇಹಿತರೊಬ್ಬರು ಬಿಡುಗಡೆಗೊಳಿಸಿದ್ದಾರೆ.ಅಜಿತ್ ಅವರ ಜನ್ಮದಿನವನ್ನು ಕಳೆದ ಮೇ 1ರಂದು ಆಚರಿಸಲಾಯಿತು.
ಕರೋನಾ ವೈರಸ್ ಹಿನ್ನೆಲೆಯಲ್ಲಿ ಅಜಿತ್ರವರು ತಮ್ಮ ಹುಟ್ಟುಹಬ್ಬವನ್ನು ಆಚರಿಸದೇ ಇರಲು ನಿರ್ಧರಿಸಿದ್ದರು. ಆದರೆ ಅವರ ಅಭಿಮಾನಿಗಳು ಅಜಿತ್ ಅವರ ಜನ್ಮದಿನವನ್ನು ಸೋಷಿಯಲ್ ಮೀಡಿಯಾದಲ್ಲಿ ಆಚರಿಸಲು ನಿರ್ಧರಿಸಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಅಜಿತ್ ಅವರ ಫೋಟೋಗಳು ಶುಭಾಶಯಗಳಿಂದ ತುಂಬಿದ್ದವು.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಅಭಿಮಾನಿಗಳು ಮಾತ್ರವಲ್ಲದೆ ಚಿತ್ರರಂಗದ ಗಣ್ಯರು ಸಹ ಅಜಿತ್ರವರಿಗೆ ಶುಭ ಕೋರಿದರು. ಅಜಿತ್ ಅವರ ಹಳೆಯ ಘಟನೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾಗಿತ್ತು. ನಟ ಮತ್ತು ನಿರೂಪಕ ಸುಹೇಲ್ ಚಂದೋಕ್ ಸಹ ಕೆಲವು ಘಟನೆಗಳನ್ನು ಪೋಸ್ಟ್ ಮಾಡಿದ್ದರು.
ಇವರು ವೀರಂ ಚಿತ್ರದಲ್ಲಿ ಅಜಿತ್ ಸಹೋದರನಾಗಿ ನಟಿಸಿದ್ದರು. ಅಜಿತ್ ಅವರ ಜನ್ಮದಿನದಂದು ಆಸಕ್ತಿದಾಯಕ ಘಟನೆಯನ್ನು ಪೋಸ್ಟ್ ಮಾಡಿದ್ದಾರೆ. ಅಜಿತ್ ಹಾಗೂ ಸುಹೇಲ್ ಚಂದೋಕ್ ಒಮ್ಮೆ ಬೈಕ್ನಲ್ಲಿ ಸುದೀರ್ಘ ಪ್ರವಾಸಕ್ಕೆ ಹೋಗಿದ್ದರು. ಇಬ್ಬರು ಸ್ನೇಹಿತರು ಎಂಬುದು ಗಮನಿಸಬೇಕಾದ ಸಂಗತಿ. ಪ್ರವಾಸದ ವೇಳೆ ಚಹಾ ಕುಡಿಯಲು ತಮ್ಮ ಬೈಕ್ಗಳನ್ನು ನಿಲ್ಲಿಸಿದರು.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ಆ ಪ್ರದೇಶದಲ್ಲಿ ಗುಡಿಸಲಿನಲ್ಲಿ ವಾಸಿಸುತ್ತಿದ್ದ ಕುಟುಂಬವೊಂದು ತಮ್ಮ ಗುಡಿಸಲಿಗೆ ಬಂದು ಚಹಾ ಕುಡಿಯುವಂತೆ ಕೇಳಿಕೊಂಡಿದೆ. ಅಜಿತ್ರವರು ಹೋಗಿ ಚಹಾ ಕುಡಿದಿದ್ದಾರೆ. ಆ ಕುಟುಂಬದವರು ಅಜಿತ್ ಅವರೊಂದಿಗೆ ಫೋಟೋ ತೆಗೆದುಕೊಳ್ಳಲು ಬಯಸಿದ್ದಾರೆ. ಆದರೆ ಕೇಳಲು ಹಿಂಜರಿದಿದ್ದಾರೆ.
ಇದನ್ನು ಅರಿತ ತಲಾ ಅಜಿತ್ ಅವರೊಂದಿಗೆ ಫೋಟೋ ತೆಗೆಸಿಕೊಂಡಿದ್ದಾರೆ. ಜೊತೆಗೆ ಆ ಫೋಟೋಗಳನ್ನು ಪ್ರಿಂಟ್ ಮಾಡಿಸಿ ಅವರಿಗೆ ಕಳುಹಿಸಿದ್ದಾರೆ. ಈ ಮಾಹಿತಿಯನ್ನು ಸುಹೇಲ್ ಚಂದೋಕ್ ತಮ್ಮ ಟ್ವಿಟ್ಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ. 2013ರಲ್ಲಿ ವೀರಂ ಚಿತ್ರೀಕರಣದ ವೇಳೆ ಈ ಘಟನೆ ನಡೆದಿತ್ತು ಎನ್ನಲಾಗಿದೆ.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!
ಅಜಿತ್ ತಮ್ಮ ಜನಪರ ಕಾರ್ಯಗಳಿಂದ ಹೆಸರಾದವರು. ಅಜಿತ್ ಕೂಡ ತಮ್ಮ ಚಿತ್ರಗಳಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುತ್ತಿರುತ್ತಾರೆ. ಭಾರತದಲ್ಲಿ ವಿಶ್ವದಲ್ಲೇ ಅತಿ ಹೆಚ್ಚು ಸಂಖ್ಯೆಯ ರಸ್ತೆ ಅಪಘಾತಗಳಾಗುತ್ತವೆ.
ವಾಹನ ಚಾಲಕರು ಸಂಚಾರ ನಿಯಮಗಳನ್ನು ಉಲ್ಲಂಘಿಸುವುದೇ ಇದಕ್ಕೆ ಮುಖ್ಯ ಕಾರಣ. ಈ ಕಾರಣಕ್ಕೆ ಅಜಿತ್ರವರು ತಮ್ಮ ಚಿತ್ರಗಳಲ್ಲಿ ಹೆಲ್ಮೆಟ್ ಧರಿಸಿ ಬೈಕ್ ಚಾಲನೆ ಮಾಡುವ ಮೂಲಕ ಸಂಚಾರ ಜಾಗೃತಿ ಮೂಡಿಸುತ್ತಿದ್ದಾರೆ. ಅಜಿತ್ರವರಂತಹ ಸೂಪರ್ಸ್ಟಾರ್ರವರನ್ನು ನೋಡಿ ಅವರ ಅಭಿಮಾನಿಗಳು ಸಹ ಸಂಚಾರ ನಿಯಮಗಳನ್ನು ಪಾಲಿಸುತ್ತಾರೆ.