Just In
- 18 min ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 52 min ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- 1 hr ago ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
- 1 hr ago ರೈತರ ವಿಶ್ವಾಸದೊಂದಿಗೆ 40 ಲಕ್ಷ ಟ್ರ್ಯಾಕ್ಟರ್ ಮಾರಾಟ ಮೈಲಿಗಲ್ಲು ಸಾಧಿಸಿದ ಮಹೀಂದ್ರಾ
Don't Miss!
- News Lok Sabha Election 2024: ಈ 6 ಜಿಲ್ಲೆಗಳಲ್ಲಿ 0% ಮತದಾನ-ಎಲ್ಲಿ ಹಾಗೂ ಕಾರಣ ಏನು?
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Movies ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟ್ರಾಫಿಕ್ ಜಾಮ್ ಬಗ್ಗೆ ದೂರಿದವನಿಗೆ ಏನಾಯ್ತು ಗೊತ್ತಾ?
ಸಾಮಾನ್ಯವಾಗಿ ಯಾವುದಾದರೂ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾದರೆ ವಾಹನ ಸವಾರರು ಆ ರಸ್ತೆಯಲ್ಲಿ ತೆವಳುತ್ತಾ ಸಾಗುತ್ತಾರೆ. ಯಾರೊಬ್ಬರೂ ಮುಂದೆ ಬಂದು ಟ್ರಾಫಿಕ್ ಜಾಮ್ ಅನ್ನು ನಿಯಂತ್ರಿಸಿ ಎಂದು ಟ್ರಾಫಿಕ್ ಪೊಲೀಸರನ್ನು ಕೇಳುವುದಿಲ್ಲ.
ಟ್ರಾಫಿಕ್ ಜಾಮ್ ನಿಯಂತ್ರಿಸಿ ಎಂದು ಕೇಳಿಕೊಂಡ ಯುವಕನನ್ನು ಟ್ರಾಫಿಕ್ ಪೊಲೀಸರು ನೀನೇ ಟ್ರಾಫಿಕ್ ನಿಯಂತ್ರಿಸು ಎಂದು ಹೇಳಿರುವ ಘಟನೆ ನಡೆದಿದೆ. ಈ ರೀತಿಯ ಘಟನೆಗಳು ಭಾರತದಲ್ಲಿ ಮಾತ್ರವೇ ನಡೆಯಲು ಸಾಧ್ಯ. ಭಾರತದಲ್ಲಿ ಬಿಟ್ಟು ಬೇರೆ ಯಾವುದೇ ದೇಶಗಳಲ್ಲಿ ನಡೆಯಲು ಸಾಧ್ಯವೇ ಇಲ್ಲ. ಅಂದ ಹಾಗೆ ಈ ಘಟನೆ ನಡೆದಿರುವುದು ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ.
ಕೆಲವು ಯುವಕರು ಟ್ರಾಫಿಕ್ ಜಾಮ್ ಹೆಚ್ಚಿರುವ ಬೆಳಿಗ್ಗೆ ಹಾಗೂ ಸಂಜೆಯ ವೇಳೆ ಸ್ವಯಂ ಪ್ರೇರಿತರಾಗಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಮುಂದಾಗುತ್ತಾರೆ. ಆದರೆ ಇದೇ ಮೊದಲ ಬಾರಿಗೆ ಟ್ರಾಫಿಕ್ ಬಗ್ಗೆ ದೂರಿದ ಯುವಕನನ್ನೇ ಟ್ರಾಫಿಕ್ ಜಾಮ್ ನಿಯಂತ್ರಿಸುವ ಕೆಲಸಕ್ಕೆ ದೂಡಲಾಗಿತ್ತು.
ದೂರು ನೀಡಿ ಟ್ರಾಫಿಕ್ ಕೆಲಸಕ್ಕೆ ನಿಯೋಜನೆಗೊಂಡ ಯುವಕನ ಹೆಸರು ಸೋನು ಸೌಗಾನ್. ಆತ ಸುಮಾರು ಎರಡು ಗಂಟೆಗಳಿಗೂ ಹೆಚ್ಚು ಕಾಲ ಹಿರಿಯ ಪೊಲೀಸ್ ಅಧಿಕಾರಿಯಾದ ಸಚೀಂದ್ರ ಪಟೇಲ್ರವರಿಗೆ ಸಂಚಾರ ನಿಯಂತ್ರಿಸಲು ನೆರವಾಗಿದ್ದಾನೆ.
ಈ ಕಾರ್ಯ ನಿರ್ವಹಿಸಲು ಪೊಲೀಸರು ಆತನಿಗೆ ವಿಶೇಷ ಜಾಕೆಟ್ ಅನ್ನು ನೀಡಿದ್ದಾರೆ. ಇದರಿಂದ ವಾಹನ ಸವಾರರಿಗೆ ಆತನು ಕಾಣುವಂತಾಗಲಿ ಎಂಬುದು ಇದರ ಹಿಂದಿರುವ ಉದ್ದೇಶವಾಗಿದೆ. ಸೋನು ಸೌಗಾನ್ ಒಂದೇ ಸ್ಥಳದಲ್ಲಿರದೇ ನಗರದ ವಿವಿಧ ಸ್ಥಳಗಳಿಗೆ ತೆರಳಿ ಕಾರ್ಯನಿರ್ವಹಿಸಿದ್ದಾನೆ.
ವಾಹನ ನಿಯಂತ್ರಿಸುವುದನ್ನು ಮಾತ್ರ ಮಾಡದೇ ನಿಯಮಗಳನ್ನು ಉಲ್ಲಂಘಿಸಿದ ವಾಹನ ಸವಾರರಿಗೆ ದಂಡವನ್ನೂ ವಿಧಿಸಿದ್ದಾನೆ. ರಾಂಗ್ ಸೈಡಿನಲ್ಲಿ ವಾಹನ ಚಾಲನೆ ಮಾಡಿದವರಿಗೆ, ಹೆಲ್ಮೆಟ್ ಧರಿಸದೇ ವಾಹನ ಚಲಾಯಿಸಿದವರಿಗೆ ದಂಡವನ್ನು ವಿಧಿಸಿದ್ದಾನೆ.
ಎರಡು ಗಂಟೆಗಳ ತನ್ನ ಕೆಲಸದ ಅವಧಿಯಲ್ಲಿ ರೂ.1,600 ದಂಡ ವಿಧಿಸಿದ್ದಾನೆ. ಸೋನು ತನ್ನ ಕಾರ್ಯವನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾನೆ ಎಂದು ತಿಳಿಸಿರುವ ಪೊಲೀಸರು ಇದೇ ರೀತಿ ಬೇರೆ ಯುವಕರನ್ನೂ ಸಹ ಪ್ರತಿದಿನ ಎರಡು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ನಿಯಂತ್ರಿಸುವ ಕೆಲಸಕ್ಕೆ ಬಳಸಿಕೊಳ್ಳುವುದಾಗಿ ತಿಳಿಸಿದ್ದಾರೆ.
ಎರಡು ಗಂಟೆಗಳ ಕಾಲ ಕಾರ್ಯ ನಿರ್ವಹಿಸಿದ ನಂತರ ಸೋನು ತನ್ನ ಅನುಭವವನ್ನು ಬಿಚ್ಚಿಟ್ಟಿದ್ದಾನೆ. ಪೊಲೀಸರೊಂದಿಗೆ ಕಾರ್ಯನಿರ್ವಹಿಸಿದ ಈ ಎರಡು ತಾಸು ಹೊಸ ಅನುಭವವನ್ನು ನೀಡಿದೆ. ಸಂಚಾರಿ ನಿಯಮಗಳನ್ನು ಉಲ್ಲಂಘಿಸುತ್ತಿರುವುದೇ ಟ್ರಾಫಿಕ್ ಜಾಮ್ಗೆ ಮೂಲ ಕಾರಣವಾಗಿದೆ.
ಒಂದು ವಾಹನವು ಮಾಡುವ ತಪ್ಪಿನಿಂದಾಗಿ ಅನೇಕ ವಾಹನಗಳು ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ವಾಹನ ಸವಾರರು ಜವಾಬ್ದಾರಿಯನ್ನು ಅರಿತು ವಾಹನ ಚಾಲನೆ ಮಾಡಬೇಕಾಗುತ್ತದೆ. ಈ ಕೆಲಸ ನಿರ್ವಹಿಸಿದ ನಂತರ ನಾನು ಹೆಚ್ಚು ಜವಾಬ್ದಾರಿಯಿರುವ ನಾಗರೀಕನಾಗಿದ್ದೇನೆ ಎಂದು ತಿಳಿಸಿದ್ದಾನೆ.