Just In
- 41 min ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 2 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 3 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- 3 hrs ago ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
Don't Miss!
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Movies 3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿ ಕ್ರೌರ್ಯ ಮೆರೆದ ಪೊಲೀಸರು
ಇತ್ತೀಚಿನ ದಿನಗಳಲ್ಲಿ ಉತ್ತರ ಪ್ರದೇಶ ಪೊಲೀಸರು ದೇಶಾದ್ಯಂತ ಸುದ್ದಿಯಾಗುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ವಿಕಾಸ್ ದುಬೆ ಎನ್ ಕೌಂಟರ್ ಪ್ರಕರಣದಿಂದ ಸುದ್ದಿಯಾಗಿದ್ದರು. ಕಾನ್ಪುರದಲ್ಲಿ ನಡೆದ ಅಪಹರಣ ಹಾಗೂ ಕೊಲೆ ಪ್ರಕರಣದ ಬಗ್ಗೆ ವರದಿಯಾಗಿದೆ.
ಇದಲ್ಲದೆ ಗೋರಖ್ಪುರ ಗ್ರಾಮಾಂತರ ಪ್ರದೇಶದಲ್ಲಿಯೂ ಅಪಹರಣ ಹಾಗೂ ಸುಲಿಗೆ ಪ್ರಕರಣಗಳು ವರದಿಯಾಗಿವೆ. ಈ ಘಟನೆಗಳಿಂದ ಉತ್ತರ ಪ್ರದೇಶಪೊಲೀಸರ ಮೇಲೆ ಒತ್ತಾಡವುಂಟಾಗಿದೆ. ಆದರೆ ಉತ್ತರಾಖಂಡ ಪೊಲೀಸರ ವರ್ತನೆ ಈ ಘಟನೆಗಳಿಗೆ ವ್ಯತಿರಿಕ್ತವಾಗಿದೆ. ಉತ್ತರಾಖಂಡ ಪೊಲೀಸರು ಮಾನವೀಯತೆಯನ್ನು ಮರೆತಂತೆ ವರ್ತಿಸಿದ್ದಾರೆ.
ಪೊಲೀಸರ ಕ್ರೌರ್ಯವನ್ನು ಎತ್ತಿ ತೋರಿಸುವ ಈ ಘಟನೆ ಉತ್ತರಾಖಂಡದ ಉಧಮ್ ಸಿಂಗ್ ನಗರ ಜಿಲ್ಲೆಯ ರುದ್ರಪುರ ನಗರದಲ್ಲಿ ನಡೆದಿದೆ. ಈ ಘಟನೆಯಲ್ಲಿ ಉತ್ತರಾಖಂಡ ಪೊಲೀಸ್ ಸಿಟಿ ಪ್ಯಾಟ್ರೋಲ್ ಘಟಕದವರು ಬೈಕ್ ಸವಾರಿ ಮಾಡುವಾಗ ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬನಿಗೆ ಥಳಿಸಿದ್ದಾರೆ.
MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು
ಇಷ್ಟು ಸಾಲದೆಂಬಂತೆ ಪೊಲೀಸ್ ಸಿಬ್ಬಂದಿ ಯುವಕನ ಹಣೆಗೆ ಕೀಲಿಗಳಿಂದ ಹಲ್ಲೆ ಮಾಡಿದ್ದು, ಯುವಕನಿಗೆ ರಕ್ತಸ್ರಾವವಾಗಿದೆ. ನಂತರ ಯುವಕನನ್ನು ಚಿಕಿತ್ಸೆಗಾಗಿಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ರುದ್ರಾಪುರ ಪ್ರದೇಶದಲ್ಲಿದ್ದ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಈ ಯುವಕನನ್ನು ತಡೆದು ನಿಲ್ಲಿಸಿದ್ದಾರೆ. ಈ ಯುವಕ ಸಂಚಾರ ನಿಯಮಗಳನ್ನು ಪಾಲಿಸುತ್ತಿರಲಿಲ್ಲ.
MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ
ಈ ಕಾರಣಕ್ಕೆ ಪೊಲೀಸ್ ಸಿಬ್ಬಂದಿ ಹಾಗೂ ಯುವಕನ ನಡುವೆ ವಾಗ್ವಾದ ನಡೆದಿದೆ. ಅಲ್ಲಿಯೇ ಇದ್ದ ಪೊಲೀಸರೊಬ್ಬರು ಯುವಕನ ಬೈಕ್ನಿಂದ ಕೀಯನ್ನು ತೆಗೆದುಕೊಂಡು ಯುವಕನ ಹಣೆಯ ಮೇಲೆ ಹಲ್ಲೆ ನಡೆಸಿದ್ದಾರೆ.
ಕೀಯಿಂದ ಹಲ್ಲೆ ನಡೆಸಿದ ಕಾರಣಕ್ಕೆ ಯುವಕ ಗಾಯಗೊಂಡಿದ್ದು, ಆತನನ್ನು ಪ್ರಥಮ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೀಡಿಯೊದಲ್ಲಿ ಯುವಕನ ಹಣೆಯ ಮೇಲೆ ಕೀಯಿಂದ ಗಾಯಗಳಾಗಿರುವುದನ್ನು ಕಾಣಬಹುದು.
MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ
ಈ ಗಾಯದಿಂದಾಗಿ ರಕ್ತಸ್ರಾವವಾಗುತ್ತಿರುವುದನ್ನು ಸಹ ಕಾಣಬಹುದು. ಈ ಘಟನೆಯ ನಂತರ ಅಲ್ಲಿನ ಶಾಸಕರು ಸ್ಥಳಕ್ಕೆ ಧಾವಿಸಿ ಆ ಪ್ರದೇಶದಿಂದ ಸಿಟಿ ಪ್ಯಾಟ್ರೋಲ್ ಘಟಕವನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿದ್ದಾರೆ. ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದೆಂದು ಪೊಲೀಸರು ತಿಳಿಸಿದ್ದಾರೆ.