Just In
- 2 min ago ಕ್ರ್ಯಾಶ್ಟೆಸ್ಟ್ನಲ್ಲಿ ಈ ಹೋಂಡಾ ಕಾರಿಗೆ ಕೇವಲ 2 ಸ್ಟಾರ್: ಆದರೂ ಭಾರತೀಯರಿಗೆ ಈ ಕಾರು ಅಚ್ಚುಮೆಚ್ಚು!
- 4 min ago ಹ್ಯುಂಡೈ ಕ್ರೆಟಾಗೆ ಪೈಪೋಟಿ ನೀಡಲು ಬರಲಿವೆ ಟಾಟಾ, ಸಿಟ್ರಸ್ ಕಾರುಗಳು.. ಇವೇ ಜನಸಾಮಾನ್ಯರ ಲ್ಯಾಂಬೋರ್ಗಿನಿಗಳು!
- 2 hrs ago Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- 15 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
Don't Miss!
- News ನೇಹಾ ಕೊಲೆ ಕೇಸ್ ಸಿಐಡಿಗೆ ಹಸ್ತಾಂತರ: ಇಂದು ಫಯಾಜ್ ವಶಕ್ಕೆ ಸಾಧ್ಯತೆ
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- Finance April 24 Gold Rate: ಚಿನ್ನದ ಬೆಲೆ ಇಳಿಕೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Technology Infinix: ನಾಳೆ ಇನ್ಫಿನಿಕ್ಸ್ ನೋಟ್ 40 ಪ್ರೊ+ 5G ಫೋನ್ ಖರೀದಿಗೆ ಲಭ್ಯ..108ಎಂಪಿ ಕ್ಯಾಮೆರಾ!
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೈರನ್ ಹೊಂದಿದ್ದ ಗಣ್ಯ ವ್ಯಕ್ತಿಗಳ ವಾಹನಗಳ ವಿರುದ್ಧ ಕಾರ್ಯಾಚರಣೆ ನಡೆಸಿದ ಪೊಲೀಸರು
ಹಿಂದೆ ಹಿರಿಯ ಸರ್ಕಾರಿ ಅಧಿಕಾರಿಗಳು ತಮ್ಮ ವಾಹನಗಳ ರೂಫ್ ಮೇಲೆ ಸೈರನ್ ಹಾಗೂ ಬೀಕನ್ ಎಂಬ ಪ್ರಕಾಶಮಾನ ದೀಪಗಳನ್ನು ಬಳಸುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಸಂಸ್ಕೃತಿಗೆ 2017 ರಲ್ಲಿ ಕೊನೆ ಹಾಡಿತು.
ತುರ್ತು ಸೇವೆ ನೀಡುವ ವಾಹನಗಳನ್ನು ಹೊರತುಪಡಿಸಿ ಬೇರೆ ಯಾವುದೇ ವಾಹನಗಳಲ್ಲಿ ಸೈರನ್ ಹಾಗೂ ಬೀಕನ್ ದೀಪಗಳನ್ನು ಬಳಸಬಾರದು ಎಂಬ ನಿಯಮವನ್ನು ಜಾರಿಗೊಳಿಸಲಾಗಿದೆ. ಇದರನ್ವಯ ದೇಶದ ಪ್ರಧಾನ ಮಂತ್ರಿಗಳಿಂದ ಆರಂಭಿಸಿ ಹಿರಿಯ ಸರ್ಕಾರಿ ಅಧಿಕಾರಿಗಳವರೆಗೆ ತಮ್ಮ ವಾಹನಗಳ ರೂಫ್ ಮೇಲೆ ಅಳವಡಿಸಲಾಗಿದ್ದ ಸೈರನ್ ಹಾಗೂ ಬೀಕನ್ ದೀಪಗಳನ್ನು ತೆಗೆದುಹಾಕಿದರು.
ಆದರೆ ಕೆಲವರು ಮಾತ್ರ ಇವುಗಳನ್ನು ಈಗಲೂ ಬಳಸುತ್ತಿದ್ದಾರೆ ಎಂಬ ಆರೋಪಗಳಿವೆ. ಸೈರನ್ ಹಾಗೂ ಬೀಕನ್ ದೀಪಗಳನ್ನು ಹೊಂದಿದ್ದ ವಾಹನಗಳ ವಿರುದ್ಧ ಪಶ್ಕಿಮ ಬಂಗಾಳ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಈ ಮೂಲಕ ವಾಹನಗಳಲ್ಲಿ ಸೈರನ್ ಬಳಸಿ ತಾವು ಶ್ರೇಷ್ಠರೆಂದು ಬಿಂಬಿಸಿಕೊಳ್ಳಲು ಹೊರಟಿದ್ದವರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಒಟ್ಟು 191 ಗಣ್ಯ ವ್ಯಕ್ತಿಗಳವಾಹನಗಳಿಂದ ಸೈರನ್ಗಳನ್ನು ತೆಗೆದುಹಾಕಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
191 ವಾಹನಗಳಿಂದ 72 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ಅಕ್ರಮವಾಗಿ ಅಳವಡಿಸಲಾಗಿದ್ದ ಸೈರನ್ಗಳನ್ನು ತೆಗೆದುಹಾಕಲಾಗಿದೆ. ಈ ಘಟನೆಯಿಂದ ಪಶ್ಚಿಮ ಬಂಗಾಳದ ಸರ್ಕಾರಿ ಅಧಿಕಾರಿಗಳು ಹಾಗೂ ಮಂತ್ರಿಗಳು ನಿಯಮಗಳನ್ನು ಉಲ್ಲಂಘಿಸಿರುವುದು ಪತ್ತೆಯಾಗಿದೆ.
ಸರ್ಕಾರಿ ಎಂಜಿನಿಯರ್ಗಳು, ಜಿಲ್ಲಾ ನ್ಯಾಯಾಧೀಶರು, ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು, ಅರಣ್ಯ ಅಧಿಕಾರಿಗಳು, ಉಪ ಕಾರ್ಯದರ್ಶಿಗಳು, ಆರೋಗ್ಯ ಮುಖ್ಯ ವೈದ್ಯಕೀಯ ಅಧಿಕಾರಿಗಳು ಹಾಗೂ ಸರ್ಕಾರಿ ಆಸ್ಪತ್ರೆ ಮೇಲ್ವಿಚಾರಕರು ಸೇರಿದಂತೆ ಹಲವು ಗಣ್ಯ ವ್ಯಕ್ತಿಗಳ ವಾಹನಗಳಲ್ಲಿದ್ದ ಸೈರನ್ಗಳನ್ನು ತೆಗೆದುಹಾಕಲಾಗಿದೆ.
ಸರ್ಕಾರಿ ಅಧಿಕಾರಿಗಳು ಮಾತ್ರವಲ್ಲದೆ ರಾಜ್ಯ ಸರ್ಕಾರದ ಮಂತ್ರಿಗಳು ಸಹ ಅಕ್ರಮವಾಗಿ ಸೈರನ್ಗಳನ್ನು ಬಳಸುತ್ತಿರುವುದು ಕಂಡುಬಂದಿದ್ದು, ಅವರ ವಾಹನಗಳಿಂದಲೂ ಸೈರನ್ಗಳನ್ನು ತೆಗೆದುಹಾಕಲಾಗಿದೆ.
ಸೈರನ್ ಬಳಕೆಯನ್ನು 2017 ರಿಂದ ನಿಷೇಧಿಸಲಾಗಿದೆ. ಯಾರೂ ಸಹ ಸೈರನ್ ಬಳಸಬಾರದು ಎಂದು ಸ್ಪಷ್ಟ ಪಡಿಸಲಾಗಿದೆ. ಈ ನಿಯಮವು ರಾಷ್ಟ್ರಪತಿ, ಪ್ರಧಾನಿ ಹಾಗೂ ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೂ ಸಹ ಅನ್ವಯವಾಗುತ್ತದೆ.
ಹಲವರು ಈ ನಿಯಮಕ್ಕೆ ಬದ್ಧರಾಗಿದ್ದರೆ, ಬೆರಳೆಣಿಕೆಯಷ್ಟು ಮಂದಿ ಅಕ್ರಮವಾಗಿ ತಮ್ಮ ವಾಹನಗಳಲ್ಲಿ ಸೈರನ್ಗಳನ್ನು ಬಳಸುತ್ತಿದ್ದಾರೆ. ತುರ್ತು ವಾಹನಗಳಾದ ಆಂಬುಲೆನ್ಸ್, ಫೈರ್ ಇಂಜಿನ್, ಪೊಲೀಸ್ ವಾಹನಗಳು ಹಾಗೂ ಮಿಲಿಟರಿ ವಾಹನಗಳು ಸೈರನ್ ಹಾಗೂ ನೀಲಿ ಮತ್ತು ಕೆಂಪು ಬಣ್ಣದ ಬೀಕನ್ ದೀಪಗಳನ್ನು ಬಳಸಲು ಅವಕಾಶ ನೀಡಲಾಗಿದೆ.