Just In
- 1 hr ago ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- 2 hrs ago Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ.. 320 ಕಿ.ಮೀ ವೇಗದಲ್ಲಿ ಓಡುತ್ತೆ ರೈಲು!
- 2 hrs ago ಬ್ರಿಟೀಷ್ ಮಾರುಕಟ್ಟೆಯನ್ನು ಆಳಲು ಹೊರಟ ಭಾರತೀಯ ಬೈಕ್: ಯುಕೆ ನಲ್ಲಿ ಟ್ರಯಂಫ್ಗೆ ನೇರ ಹಣಾಹಣಿ!
- 2 hrs ago Tata Curvv Vs Citroen Basalt: ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?
Don't Miss!
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- News Namma Metro Purple Line: ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ, ಕಾರಣಗಳೇನು?
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Movies ಲಂಡನ್ನಲ್ಲಿ ಬಾಡಿಗೆಗೆ ಪಡೆದಿದ್ದ ಬಂಗಲೆಯನ್ನೇ ಖರೀದಿಸಿದ್ರಾ ಪ್ರಭಾಸ್?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟ್ರಾಫಿಕ್ ಪೊಲೀಸ್ ಮಾಡಿದ ಯಡವಟ್ಟಿಗೆ ಮಹಿಳೆ ಬಲಿ : ವಿಡಿಯೋ ನೋಡಿ
ಪೊಲೀಸ್ ಬೈಕ್ ಕೀಲಿ ಕೈ ಕಸಿದ ಕಾರಣ ಮಹಿಳೆ ಸಾವು. ಅಂದ್ರ ಪ್ರದೇಶದಲ್ಲಿ ನೆಡೆದ ಈ ದುರ್ಘಟನೆಯ ಬಗ್ಗೆ ಮಾಹಿತಿ ಇಲ್ಲಿದೆ.
ಇತ್ತೀಚಿನ ದಿನಗಳಲ್ಲಿ ಅನಧಿಕೃತ ವಾಹನಗಳು ರಸ್ತೆಗಳ ಮೇಲೆ ಅಡ್ಡ ದಿಡ್ಡಿ ಸಂಚರಿಸಿ ಬಹಳಷ್ಟು ಅಪಘಾತಗಳಿಗೆ ಮೂಲ ಕಾರಣವಾಗುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಂಚಾರಿ ಇಲಾಖೆ ಬಹಳಷ್ಟು ದಿನಗಳಿಂದಲೂ ಹಲವು ರೀತಿಯ ಕ್ರಮಗಳನ್ನು ಕೈಗೊಂಡಿದೆ ಎಂಬುದು ನಮ್ಮ ನಿಮ್ಮೆಲರಿಗೂ ತಿಳಿದಿರುವ ಸಂಗತಿ.
ಸವಾರರೂ ಸಹ ಯಾವುದೇ ರೀತಿಯ ನಿಯಮಗಳನ್ನು, ಧಾಖಲಾತಿಗಳನ್ನು ಹೊಂದಿರದೆ ವಾಹನ ಚಾಲನೆ ಮಾಡುತ್ತಿರುವುದು ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಈ ಕಾರಣಕ್ಕೆ ಹೆಚ್ಚು ಸಿಬ್ಬಂದಿ ನೇಮಿಸಿ ಇದರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ.
ಆದರೆ, ಈ ರೀತಿ ಸಂಚಾರಿ ದಾಖಲೆಗಳನ್ನು ಪರಿಶೀಲನೆ ಮಾಡುವುದೇ ದೊಡ್ಡ ಅನಾಹುತಕ್ಕೆ ಕಾರಣವಾಗಿದ್ದು, ಒಂದು ಜೀವವನ್ನೇ ಬಲಿ ತೆಗೆದುಕೊಂಡಿದೆ.
ಹೌದು, ಪೊಲೀಸರು ರಸ್ತೆಯ ಮೇಲೆ ಚಲಿಸುತ್ತಿದ್ದ ಬೈಕಿನ ಕೀಲಿ ಕೈ ಕಸಿದುಕೊಳ್ಳಲು ಹೋಗಿ ಆಯಾ ತಪ್ಪಿ ಬೈಕ್ ಸವಾರ ರಸ್ತೆ ಮೇಲೆ ಬಿದ್ದಿದ್ದು, ಹಿಂದಗಡೆ ಕುಳಿತಿದ್ದ ಮಹಿಳೆ ಸಾವನ್ನಪ್ಪಿದ್ದಾರೆ.
ಈ ಘಟನೆ ಆಂಧ್ರಪ್ರದೇಶದ ವೈಜಾಕ್ ನಗರದಲ್ಲಿ ನೆಡೆದಿದ್ದು, ಕೀಲಿ ಕೈ ಎಳೆದ ರಭಸಕ್ಕೆ ಬೈಕ್ ಹೆಚ್ಚಿನ ವೇಗವಾಗಿ ನೆಲಕ್ಕೆ ಅಪ್ಪಳಿಸಿದ್ದು, ಇದರ ಪರಿಣಾಮವಾಗಿ ಹಿಂದಗಡೆ ಕುಳಿತಿದ್ದ ಮಹಿಳೆಯ ಜೀವವನ್ನೇ ಕಳೆದುಕೊಳ್ಳಬೇಕಾಗಿದೆ.
ಹಿಂದಗಡೆ ಇಂದ ರಭಸವಾಗಿ ಬರುತ್ತಿದ್ದ ಲಾರಿ ಚಕ್ರಕ್ಕೆ ಮಹಿಳೆ ಸಿಲುಕಿದ್ದು, ತಲೆಗೆ ಪೆಟ್ಟು ಬಿದ್ದು ಹೆಚ್ಚಿನ ರಕ್ತಸ್ರಾವವಾಗಿ ಸ್ಥಳದಲ್ಲಿಯೇ ಮಹಿಳೆ ಪ್ರಾಣ ಬಿಟ್ಟಿದ್ದಾರೆ.
ಕಾರ್ಯನಿರತ ಸಂಚಾರಿ ಪೋಲೀಸ್ ಬೈಕ್ ಕೀಲಿ ಕೈ ಎಳೆದ ಪರಿಣಾಮ ಚಾಲಕ ನಿಯಂತ್ರಣವನ್ನು ಕಳೆದುಕೊಂಡ ಕರಣ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಆಟೊ ನಗರದಲ್ಲಿರುವ ವಿಶಾಖಪಟ್ಟಣಂ ಪೊಲೀಸ್ ಚೆಕ್ ಪೋಸ್ಟ್ ಬಲಿ ಈ ಘಟನೆ ನೆಡೆದಿದ್ದು, ಚಾಲಕ ಹೆಲ್ಮೆಟ್ ಧರಿಸಿದ್ದರು ಎನ್ನಲಾಗಿದೆ. ಆತನಿಗೂ ಕೂಡ ಕೊಂಚ ಮಟ್ಟಿನ ಗಾಯಗಳಾಗಿವೆ.
ಸುಪ್ರೀಂ ಕೋರ್ಟ್ ಆದೇಶದಂತೆ ದಾಖಲೆಗಳನ್ನು ಪರಿಶೀಲಿಸಲು ಪೊಲೀಸರು ಕೀಲಿ ಕೈ ಕಿತ್ತುಕೊಳ್ಳುವ ಅಗತ್ಯ ಇಲ್ಲ ಎನ್ನುವ ವಿಚಾರ ಪೊಲೀಸರಿಗೆ ತಿಳಿದಿದ್ದರೂ ಸಹ ಈ ರೀತಿಯ ಕೃತ್ಯ ಎಸಗಿರುವುದು ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ.
ಘಟನೆಗೆ ಸಂಬಂಧಿಸಿದಂತೆ ಬೈಕ್ ಕೀಲಿ ಕೈ ಎಳೆದ ಪೊಲೀಸ್ ಸದ್ಯ ಬಂಧಿಸಲಾಗಿದ್ದು, ಇನ್ನೂ ಹೆಚ್ಚಿನ ಮಾಹಿತಿಯನ್ನು ಸದ್ಯದರಲ್ಲೇ ಡ್ರೈವ್ ಸ್ಪಾರ್ಕ್ ತಿಳಿಸಲಿದೆ.