Just In
- 3 min ago ದೊಡ್ಡ ಸಿಗ್ನಲ್ ಕೊಟ್ಟ ಫೋರ್ಡ್: ಭಾರತಕ್ಕೆ ಬರುತ್ತಿದೆ ಹೊಸ ಎಸ್ಯುವಿ... ಟಾಟಾಗೆ ಆತಂಕ ಶುರು
- 53 min ago ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- 1 hr ago ನಿಮ್ಮ ಬಳಿ 7 ಲಕ್ಷ ರೂಪಾಯಿ ಇದ್ದರೆ ಸಾಕು.. ಕನಸಿನ ಕಾರನ್ನು ಮನೆ ತರಬಹುದು!
- 16 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
Don't Miss!
- Movies ಹರ್ಷಿಕಾ ಪೂಣಚ್ಚ- ಭುವನ್ ಪೊನ್ನಣ್ಣ ಹಲ್ಲೆ; "ನಮ್ಮ ಬೆಂಗಳೂರಿನಲ್ಲಿ ನಾವು ಎಷ್ಟು ಸುರಕ್ಷಿತ?" ಎಂದ ನಟಿ
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Finance ಸುಗಮ, ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರಿ ಪೊಲೀಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜನರ ನಿಯಂತ್ರಣಕ್ಕೆ ಬಂತು ಮಹಿಳಾ ಪೊಲೀಸ್ ಪಡೆ
ಪ್ರಪಂಚದಾದ್ಯಂತ ತನ್ನ ರುದ್ರ ನರ್ತನ ತೋರುತ್ತಿರುವ ಮಾರಣಾಂತಿಕ ಕರೋನಾ ವೈರಸ್ ಕೂಡ ಭಾರತವನ್ನು ವ್ಯಾಪಿಸಿದೆ. ಈಗಾಗಲೇ ಈ ಮಹಾಮಾರಿ ವೈರಸ್ನ ಸೋಂಕು ಭಾರತದಲ್ಲಿ 13,000ಕ್ಕೂ ಹೆಚ್ಚು ಜನರಿಗೆ ತಗುಲಿದೆ.
ಕರೋನಾ ವೈರಸ್ ಭಾರತದಲ್ಲಿ ಮೊದಲ ಬಾರಿಗೆ ಕೇರಳದಲ್ಲಿ ಕಾಣಿಸಿಕೊಂಡಿತ್ತು. ಕೇರಳವು ಆರಂಭದಲ್ಲಿ ತತ್ತರಿಸಿತ್ತು. ಬೇರೆ ರಾಜ್ಯಗಳು ದೇವರು, ದೇವರ ಸ್ವಂತ ನಾಡಿಗೆ ಶಾಪ ನೀಡಿದ್ದಾನೆ ಎಂದು ಗೇಲಿ ಮಾಡಿದ್ದವು. ಆದರೆ, ಇಂದು ಕೇರಳದಲ್ಲಿ ಪರಿಸ್ಥಿತಿ ವಿಭಿನ್ನವಾಗಿದೆ.
ಕರೋನಾ ವಿರುದ್ಧದ ಹೋರಾಟದಲ್ಲಿ ಕೇರಳ ಸರ್ಕಾರವು ಜನರ ಮೇಲೆ ವಿವಿಧ ನಿರ್ಬಂಧಗಳನ್ನು ವಿಧಿಸಿತು. ಇದರ ಜೊತೆಗೆ ಹಲವು ಕಟ್ಟು ನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿತ್ತು. ಇದರ ಪರಿಣಾಮವಾಗಿ, ಆರಂಭದಲ್ಲಿ ವೈರಸ್ ಸೋಂಕಿನಿಂದ ತತ್ತರಿಸಿದ್ದ ಕೇರಳದ ಸ್ಥಿತಿ ಈಗ ಸುಧಾರಿಸಿದೆ.
MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್
ಇದರಿಂದಾಗಿ ಕೇರಳವು ಭಾರತದಲ್ಲಿಯೇ ಹೆಚ್ಚಿನ ಪ್ರಮಾಣದಲ್ಲಿ ಕರೋನಾ ವೈರಸ್ ಸೋಂಕನ್ನು ತಡೆಗಟ್ಟಲು ಯಶಸ್ವಿಯಾಗಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸರ್ಕಾರವು ತೆಗೆದುಕೊಂಡ ಕ್ರಮಗಳಿಂದ ಇದು ಸಾಧ್ಯವಾಗಿದೆ. ಇದೇ ವೇಳೆ ಅಲ್ಲಿನ ಜನರೂ ಸಹ ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ.
ಕೇರಳದಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದರೂ ದೇಶದ ಬೇರೆ ಕಡೆಗಳಲ್ಲಿ ವೈರಸ್ನ ತೀವ್ರತೆಯು ಹೆಚ್ಚಾಗಿದೆ. ಕಡಿಮೆ ಸಂಖ್ಯೆಯಲ್ಲಿರುವ ವೈರಸ್ ಸೋಂಕನ್ನು ನಿರ್ಮೂಲನೆ ಮಾಡಲು ಕೇರಳದಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಸದ್ಯದ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಕೇರಳದ ಪ್ರಮುಖ ನಗರಗಳಲ್ಲಿ ವಿಶೇಷ ಪೊಲೀಸ್ ಪಡೆಗಳನ್ನು ಸ್ಥಾಪಿಸಲಾಗಿದೆ.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ಕೇರಳದ ಪ್ರಮುಖ ನಗರಗಳಲ್ಲಿ ಒಂದಾದ ತ್ರಿಶೂರ್ನಲ್ಲಿ ವಿಶೇಷ ಮಹಿಳಾ ಪಡೆಯನ್ನು ಸ್ಥಾಪಿಸಲಾಗಿದೆ. ಈ ಪಡೆಯು ನಗರದ ಎಲ್ಲಾ ಮೂಲೆಗಳಲ್ಲೂ ಸಂಚರಿಸಿ, ಜನರು ವಿನಾ ಕಾರಣ ಹೊರಡದಂತೆ ತಡೆಯುವ ಕೆಲಸವನ್ನು ಮಾಡುತ್ತಿದೆ.
ಇದರ ಜೊತೆಗೆ ವೃದ್ಧರು, ಮಹಿಳೆಯರು ಹಾಗೂ ಮಕ್ಕಳಿಗೆ ಸಹಾಯ ಮಾಡುತ್ತಿದೆ. ಈ ವಿಶೇಷ ಮಹಿಳಾ ಪಡೆಗಾಗಿ ರಾಯಲ್ ಎನ್ಫೀಲ್ಡ್ನ ಬುಲೆಟ್ ಬೈಕ್ಗಳನ್ನು ನೀಡಲಾಗಿದೆ. ಈ ಮಹಿಳಾ ಪಡೆ ಸಿಂಗಂ ಚಿತ್ರದಲ್ಲಿ ನಟ ಸೂರ್ಯರವರು ಮಾಡಿದಂತಹ ವಿಶಿಷ್ಟ ಕೆಲಸಕ್ಕೆ ಮುಂದಾಗಿದೆ.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!
ಪ್ರತಿ ಬೈಕ್ನಲ್ಲಿ ಇಬ್ಬರು ಮಹಿಳಾ ಗಾರ್ಡ್ಗಳಿರುತ್ತಾರೆ. ಅವರಿಗೆ ಒಂದೇ ರೀತಿಯ ಹೆಲ್ಮೆಟ್ಗಳನ್ನು ನೀಡಲಾಗುತ್ತದೆ. ಇದರ ಜೊತೆಗೆ ವೈರಸ್ ಸೋಂಕಿನಿಂದ ರಕ್ಷಿಸಲು ಮಾಸ್ಕ್ ಹಾಗೂ ಆಂಟಿಸೆಪ್ಟಿಕ್ಗಳನ್ನು ಸಹ ನೀಡಲಾಗಿದೆ.
ಈ ಹಿಂದೆ ಜಾರಿಗೊಳಿಸಲಾಗಿದ್ದ ಲಾಕ್ಡೌನ್ ಅವಧಿಯನ್ನು ಮೇ 3ರವರೆಗೆ ವಿಸ್ತರಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಜನರು ಹೊರಗೆ ಹೋಗದಂತೆ ತಡೆಯುವುದು ಪ್ರತಿಯೊಂದು ರಾಜ್ಯ ಸರ್ಕಾರದ ಕರ್ತವ್ಯವಾಗಿದೆ. ಅದರಂತೆ ಕೇರಳ ಸರ್ಕಾರವು ವಿಶೇಷ ಮಹಿಳಾ ಕಾವಲು ಪಡೆಯನ್ನು ರಚಿಸಿದೆ.