Just In
- 1 hr ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 2 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- 2 hrs ago ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
- 2 hrs ago ರೈತರ ವಿಶ್ವಾಸದೊಂದಿಗೆ 40 ಲಕ್ಷ ಟ್ರ್ಯಾಕ್ಟರ್ ಮಾರಾಟ ಮೈಲಿಗಲ್ಲು ಸಾಧಿಸಿದ ಮಹೀಂದ್ರಾ
Don't Miss!
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Movies 3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಗನಿಗಾಗಿ 1400 ಕಿ.ಮೀ ಪ್ರಯಾಣಿಸಿದ ತಾಯಿ
ದೇಶಾದ್ಯಂತ ಲಾಕ್ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ತಮ್ಮ ಊರುಗಳನ್ನು ಬಿಟ್ಟು ಬೇರೆ ಊರುಗಳಲ್ಲಿರುವವರು ತಮ್ಮ ಕುಟುಂಬಗಳಿಂದ ದೂರವಿರ ಬೇಕಾದ ಅನಿವಾರ್ಯತೆಯಲ್ಲಿದ್ದಾರೆ. ದೂರದ ಊರಿನಲ್ಲಿ ಸಿಲುಕಿದ್ದ ತನ್ನ ಮಗನನ್ನು ವಾಪಸ್ ಕರೆತರಲು ತಾಯಿಯೊಬ್ಬರು ಸ್ಕೂಟರ್ನಲ್ಲಿ ತೆರಳಿದ ಘಟನೆ ನಡೆದಿದೆ.
ವಯಸ್ಸಾದ ತಾಯಿಗೆ ಮಗ ನೆರವಾಗಬೇಕು. ಆದರೆ ವಯಸ್ಸಾದ ತಾಯಿಯೇ ತನ್ನ ಮಗನಿಗಾಗಿ ಬಹುದೂರ ಪ್ರಯಾಣಿಸಿದ್ದಾರೆ. ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ 50 ವರ್ಷ ವಯಸ್ಸಿನ ರಜಿಯಾ ಬೇಗಂ ಎಂಬ ಮಹಿಳೆಯೇ ತಮ್ಮ ಮಗನನ್ನು ಕರೆತರಲು ಬಹುದೂರ ಪ್ರಯಾಣಿಸಿದ ಮಹಿಳೆ. ಲಾಕ್ಡೌನ್ನಿಂದಾಗಿ ಆಂಧ್ರಪ್ರದೇಶದಲ್ಲಿ ನೆಲ್ಲೂರಿನಲ್ಲಿ ಸಿಲುಕಿದ್ದ ತಮ್ಮ ಮಗನನ್ನು ಕರೆತರಲು ಅವರು ತಮ್ಮ ಸ್ಕೂಟರ್ನಲ್ಲಿ 1400 ಕಿ.ಮೀ ಪ್ರಯಾಣಿಸಿದ್ದಾರೆ.
ಈ ಪ್ರಯಾಣವನ್ನು ಪೂರ್ಣಗೊಳಿಸಲು ಅವರು 3 ದಿನಗಳನ್ನು ತೆಗೆದುಕೊಂಡಿದ್ದಾರೆ. ಸೋಮವಾರ ತಮ್ಮ ಪ್ರಯಾಣವನ್ನು ಆರಂಭಿಸಿದ ಅವರು ಮಂಗಳವಾರ ಮಧ್ಯಾಹ್ನ 700 ಕಿ.ಮೀ ಪ್ರಯಾಣಿಸುವ ಮೂಲಕ ಆಂಧ್ರಪ್ರದೇಶದ ನೆಲ್ಲೂರು ತಲುಪಿದ್ದಾರೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಬುಧವಾರ ಸಂಜೆ ತಮ್ಮ ಮಗನ ಜೊತೆ ತಮ್ಮ ಮನೆಗೆ ವಾಪಸ್ ಆಗಿದ್ದಾರೆ. ಹೀಗೆ ಮೂರು ದಿನದಲ್ಲಿ ಒಟ್ಟಾರೆಯಾಗಿ 1400 ಕಿ.ಮೀ ಪ್ರಯಾಣಿಸಿದ್ದಾರೆ. ಅಮ್ಮ ಮಗ ಇಬ್ಬರಿಗೂ ಪ್ರಯಾಣಿಸಲು ಪೊಲೀಸರು ಸಹಾಯ ಮಾಡಿದ್ದಾರೆ.
ಅವರನ್ನು ಅನೇಕ ಸ್ಥಳಗಳಲ್ಲಿ ತಡೆದು ನಿಲ್ಲಿಸಲಾಗಿತ್ತು. ತಮ್ಮ ಮಗನನ್ನು ವಾಪಸ್ ಕರೆ ತರಲು ರಜಿಯಾ ಬೇಗಂರವರಿಗೆ ಬೋಧನ್ನ ಸಹಾಯಕ ಆಯುಕ್ತರಾದ ವಿ ಜೈಪಾಲ್ ರೆಡ್ಡಿರವರು ನೆರವು ನೀಡಿದ್ದಾರೆ ಎಂದು ವರದಿಯಾಗಿದೆ.
MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್
ಲಾಕ್ಡೌನ್ ಕಾರಣಕ್ಕೆ ರಸ್ತೆಗಳು ನಿರ್ಜನವಾಗಿದ್ದು, ಹಳ್ಳಿಗಳು ಖಾಲಿಯಾಗಿದ್ದವು ಎಂದು ರಜಿಯಾ ಬೇಗಂ ಹೇಳಿದ್ದಾರೆ. ತಮ್ಮನ್ನು ಅಂತರರಾಜ್ಯ ಗಡಿಯಲ್ಲಿ ತಡೆಯಲಿಲ್ಲವೆಂದು ಹಾಗೂ ಪೊಲೀಸರು ತಮಗೆ ಸಂಪೂರ್ಣ ಸಹಾಯ ಮಾಡಿದ್ದಾರೆಂದು ಅವರು ಹೇಳಿದ್ದಾರೆ.
ಲಾಕ್ಡೌನ್ನಿಂದಾಗಿ ಅನೇಕ ಜನರು ತಮ್ಮ ಮನೆಗಳಿಂದ ದೂರದಲ್ಲಿರುವ ಬೇರೆ ಸ್ಥಳಗಳಲ್ಲಿ ಸಿಕ್ಕಿಬಿದ್ದಿದ್ದಾರೆ. ಅವರು ತಮ್ಮ ಊರುಗಳನ್ನು ತಲುಪಲು ಅವರಿಗೆ ಸಂಬಂಧಪಟ್ಟ ರಾಜ್ಯಗಳ ಪೊಲೀಸರು ಸಹಾಯ ಮಾಡುತ್ತಿದ್ದಾರೆ. ಕರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅವರನ್ನೆಲ್ಲಾ ಅವರು ಇರುವ ಜಾಗದಲ್ಲಿಯೇ ತಡೆದು ನಿಲ್ಲಿಸಲಾಗಿದೆ.