Just In
- 34 min ago ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- 48 min ago Google Maps: ಇವಿ ಮಾಲೀಕರೇ ಆತಂಕ ಬಿಡಿ... ಗೂಗಲ್ ಮ್ಯಾಪ್ಸ್ ಭರ್ಜರಿ ಅಪ್ಡೇಟ್!
- 1 hr ago ಫ್ಯಾಮಿಲಿ ಕಾರಾಗಿ ಜನರ ಮನಗೆದ್ದ ಹ್ಯುಂಡೈ ಅಲ್ಕಾಜರ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- 2 hrs ago Elevate: ಶ್ರೀಸಾಮಾನ್ಯನ ಬಿಎಂಡಬ್ಲ್ಯೂ.. ಹೋಂಡಾ ಎಲಿವೇಟ್ ಖರೀದಿಸಬೇಕೇ? ಆನ್-ರೋಡ್ ಬೆಲೆ ಎಷ್ಟು, EMI ಏನು?
Don't Miss!
- News Neha Hiremath: ಸಿದ್ದರಾಮಯ್ಯ ಹೇಳಿಕೆಗೆ ಕಾಂಗ್ರೆಸ್ ಕಾರ್ಪೊರೇಟರ್ ನೇಹಾ ತಂದೆ ಆಕ್ರೋಶ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Movies 'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಾಡಿ ಮತ್ತು ಬಾಡಿ ಎರಡನ್ನು ಸೇಫ್ ಆಗಿ ತಗೊಂಡು ಹೋಗಿ- ಇದು ಭಟ್ರ ಕಳಕಳಿ..!
ರಸ್ತೆ ಅಪಘಾತಗಳಿಗೆ ಮೂಲ ಕಾರಣವೇ ಸಂಚಾರಿ ನಿಯಮಗಳ ಉಲ್ಲಂಘನೆ ಅಂದ್ರೆ ತಪ್ಪಾಗುವುದಿಲ್ಲ. ಈ ಬಗ್ಗೆ ವಾಹನ ಸವಾರರಿಗೆ ಅರಿವು ಇದ್ದರೂ ಕೂಡಾ ಪದೇ ಪದೇ ನಿಯಮ ಉಲ್ಲಂಘನೆ ಮಾಡುತ್ತಲೇ ಇರುತ್ತಾರೆ. ಈ ಬಗ್ಗೆ ಯೋಗರಾಜ್ ಭಟ್ರು ಮಾರ್ಮಿಕವಾಗಿ ಮಾತನಾಡಿದ್ದಾರೆ.
ಬೆಂಗಳೂರಿನಲ್ಲಿ ಸದ್ಯ ಜನಸಂಖ್ಯೆಗಿಂತ ವಾಹನಗಳ ಸಂಖ್ಯೆಯೇ ಹೆಚ್ಚಾಗುತ್ತಿದೆ. ಹೀಗಿರುವಾಗ ಬಹುತೇಕ ವಾಹನ ಸವಾರರು ಸರಿಯಾಗಿ ಸಂಚಾರಿ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ. ಟ್ರಾಫಿಕ್ ಪೊಲೀಸರು ಕೂಡಾ ಎಷ್ಟೇ ಕಠಿಣ ನಿಯಮಗಳನ್ನು ಜಾರಿ ಮಾಡುತ್ತಿದ್ದರೂ ಸಹ ಸಂಚಾರಿ ನಿಯಮಗಳ ಉಲ್ಲಂಘನೆಗಳ ಸಂಖ್ಯೆ ಮಾತ್ರ ಮಿತಿಮೀರುತ್ತಿದೆ. ಹೀಗಾಗಿ ಜನಪ್ರಿಯ ಚಲನಚಿತ್ರ ನಿರ್ದೇಶಕ ಯೋಗರಾಜ್ ಭಟ್ರು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಂಬಂಧ ಟ್ರಾಫಿಕ್ ನಿಯಮಗಳ ಪಾಲನೆ ಕುರಿತಾಗಿ ಉತ್ತಮ ಸಂದೇಶ ಒಂದನ್ನು ನೀಡಿದ್ದಾರೆ.
ಹೊಸ ವರ್ಷಾಚಾರಣೆಯ ಸಂದರ್ಭದಲ್ಲಿ ಆಗುವ ರಸ್ತೆ ಅಪಘಾತಗಳ ಬಗ್ಗೆ ವಿಷಾದ ವ್ಯಕ್ತಪಡಿಸಿರುವ ಯೋಗರಾಜ್ ಭಟ್ರು ಟ್ರಾಫಿಕ್ ನಿಯಮಗಳ ಉಲ್ಲಂಘನೆಯಿಂದಾಗುವ ಪರಿಣಾಮಗಳ ಜೊತೆಗೆ ಪ್ರತಿಯೊಬ್ಬರು ಕೂಡಾ ನಿಯಮ ಪಾಲನೆ ಮೂಲಕ ಟ್ರಾಫಿಕ್ ಪೊಲೀಸರಿಗೆ ನೆರವಾಗುವಂತೆ ಮನವಿ ಮಾಡಿದ್ದಾರೆ.
ಗಾಡಿ ಮತ್ತು ಬಾಡಿ ಎರಡನ್ನು ಸೇಫ್ ಆಗಿರಲಿ..!
ಹೊಸ ವರ್ಷಾಚಾರಣೆ ವೇಳೆ ಉಳಿದ ದಿನಗಳಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಡ್ರಂಕ್ ಅಂಡ್ ಡ್ರೈವ್ ಪ್ರಕರಣ ದಾಖಲಾಗುವುದು ಹೊಸತಲ್ಲ. ಆದ್ರೆ ಇದೇ ಕಾರಣಕ್ಕೆ ಅದೆಷ್ಟೋ ಅಮಾನಕ ಜೀವಗಳು ಕೂಡಾ ಬಲಿಯಾಗುತ್ತವೆ.
ಇದರಿಂದ ಹೊಸ ವರ್ಷದ ಸಂಭ್ರಮದಲ್ಲಿ ಕುಡಿದು ಜೀವ ಕಳೆದುಕೊಳ್ಳುವುದಕ್ಕಿಂತ ಗಾಡಿನೂ ಮತ್ತೂ ಬಾಡಿನೂ ಸೇಫ್ ಆಗಿ ಮನೆಗೆ ತಗೊಂಡು ಹೋಗಿ ಅಂತಾ ಹೇಳಿರುವ ಮಾರ್ಮಿಕ ಸಂದೇಶವು ಇಂದಿನ ಯುವಜನತೆಯು ತಪ್ಪದೇ ಪಾಲನೆ ಮಾಡಬೇಕಾದ ಅವಶ್ಯಕತೆಯಿದೆ ಅಂದ್ರೆ ತಪ್ಪಾಗುದಿಲ್ಲ.
ಪೊಲೀಸರಿಗೆ ಟೆಕ್ಷನ್ ಕೊಡಬೇಡಿ..!
ಹೊಸ ವರ್ಷ ಬಂದ್ರೆ ಸಾಕು ಬೆಂಗಳೂರಿನ ಪೊಲೀಸರಿಗೆ ಒಂದು ರೀತಿಯಲ್ಲಿ ದೊಡ್ಡ ತಲೆನೋವು ಎನ್ನಬಹುದು. ಯಾಕೆಂದ್ರೆ ಖುಷಿಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕಾದ ಪೊಲೀಸರಿಗೆ ಸಾರ್ವಜನಿಕರ ಸಹಕಾರ ತುಂಬಾ ಮುಖ್ಯ ಎನ್ನುವ ಭಟ್ರ ಮಾತು ನೂರಕ್ಕೆ ನೂರಷ್ಟು ಸತ್ಯ.
ನಕಲಿ ISI ಹೆಲ್ಮೆಟ್ ಖರೀದಿಗೂ ಮುನ್ನ..!
ಸದ್ಯ ದೇಶಾದ್ಯಂತ ನಕಲಿ ಐಎಸ್ಐ ಹೆಲ್ಮೆಟ್ ಹಾವಳಿ ಹೆಚ್ಚಿದ್ದು, ರಸ್ತೆ ಬದಿಯಲ್ಲಿ ಅಗ್ಗದ ಬೆಲೆಗೆ ಲಭ್ಯವಿರುವ ಹೆಲ್ಮೆಟ್ಗಳು ಬೈಕ್ ಸವಾರರನ್ನು ರಕ್ಷಣೆ ಮಾಡವುದಕ್ಕಿಂತ ಅವುಗಳ ಬಳಕೆಯಿಂದ ಅಪಾಯವೇ ಹೆಚ್ಚಾಗುತ್ತಿದೆ.
ಹೀಗಾಗಿಯೇ ನಕಲಿ ಹೆಲ್ಮೆಟ್ ಬಳಸಬೇಡಿ ಎಂದು ಎಷ್ಟೇ ಮನವಿ ಮಾಡಿದ್ರು ಬಹುತೇಕ ಬೈಕ್ ಸವಾರರು ಮಾತ್ರ ಟ್ರಾಫಿಕ್ ಪೊಲೀಸರಿಂದ ದಂಡ ತಪ್ಪಿಸಿಕೊಳ್ಳಲು ಅಗ್ಗದ ಬೆಲೆಗೆ ಲಭ್ಯವಿರುವ ಹೆಲ್ಮೆಟ್ಗಳನ್ನೇ ಬಳಕೆ ಮಾಡುತ್ತಿರುವುದರಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದೆ.
ಇದರಿಂದ ಮಹತ್ವದ ನಿರ್ಧಾರಕ್ಕೆ ಬಂದಿರುವ ಕೇಂದ್ರ ಸಾರಿಗೆ ಇಲಾಖೆಯು ನಕಲಿ ಹೆಲ್ಮೆಟ್ಗಳನ್ನು ಉತ್ಪಾದನೆ ಮತ್ತು ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ನಕಲಿ ಹೆಲ್ಮೆಟ್ ಹಾವಳಿಗೆ ಬ್ರೇಕ್ ಹಾಕಲಿದ್ದು, ತದನಂತರವಷ್ಟೇ ನಕಲಿ ಹೆಲ್ಮೆಟ್ ಬಳಕೆ ಮಾಡುವ ವಾಹನ ಸವಾರರಿಗೆ ಭಾರೀ ದಂಡ ಬೀಳಲಿದೆ.
MOST READ: ಒನ್ ವೇನಲ್ಲಿ ಬಂದ ಬಿಎಂಟಿಸಿ ಬಸ್ ಚಾಲಕನಿಗೆ ಸರಿಯಾಗಿಯೇ ಪಾಠ ಕಲಿಸಿದ ಬೈಕ್ ಸವಾರ..!
2 ವರ್ಷ ಜೈಲು ಗ್ಯಾರಂಟಿ
2019ರ ಜನವರಿ 15ರಿಂದ ಐಎಸ್ಐ ಮಾನ್ಯತೆ ಇಲ್ಲದೆ ಹೆಲ್ಮೆಟ್ ಮಾರಾಟ ಮಾಡಿದಲ್ಲಿ 2 ವರ್ಷ ಜೈಲು ಅಥವಾ 2 ಲಕ್ಷ ರೂಪಾಯಿ ದಂಡಕ್ಕೆ ಗುರಿಯಾಗಬೇಕಾಗುತ್ತೆ. ಅಲ್ಲದೇ ಅಕ್ರಮ ಹೆಲ್ಮೆಟ್ ತಯಾರಿಕೆ ಮತ್ತು ಮಾರಾಟ ನಡೆಸುತ್ತಿರುವ ಬಗ್ಗೆ ಅನುಮಾನ ಬಂದಲ್ಲಿ ವಾರಂಟ್ ರಹಿತವಾಗಿ ಬಂಧನ ಮಾಡಬಹುದಾಗಿದೆ.
ಇದರೊಂದಿಗೆ ವಾಹನ ಸವಾರರು ಕೂಡಾ ಕಡ್ಡಾಯವಾಗಿ ಐಎಸ್ಐ ಹೆಲ್ಮೆಟ್ಗಳನ್ನೇ ಬಳಕೆ ಮಾಡಬೇಕಿದ್ದು, ಕಾಟಾಚಾರಕ್ಕೆ ಕಳಪೆ ಗುಣಮಟ್ಟದ ಹೆಲ್ಮೆಟ್ ಹಾಕಿಕೊಂಡು ದಂಡದಿಂದ ತಪ್ಪಿಸಿಕೊಳ್ಳುತ್ತಿದ್ದ ವಾಹನ ಸವಾರರ ಆಟವು ಇನ್ನು ನಡೆಯುವುದಿಲ್ಲ.
ಬದಲಾಗಲಿದೆ ಐಎಸ್ಐ ಹೆಲ್ಮೆಟ್ ವಿನ್ಯಾಸ.!
ಕೆಲವರಿಗೆ ಹೆಲ್ಮೆಟ್ ಹಾಕಿ ಬೈಕ್ ಓಡಿಸುವುದು ಅಂದ್ರೆ ತುಂಬಾನೇ ಅಲರ್ಜಿ ಅಂತಾ ಕಾಣುತ್ತೆ. ಇದಕ್ಕೆ ಹಲವಾರು ಕಾರಣಗಳನ್ನು ಕೊಡುವ ಕೆಲವು ಬೈಕ್ ಸವಾರರು ಕೆಜಿಗಟ್ಟಲೇ ತೂಕವಿರುವ ಹೆಲ್ಮೆಟ್ಗಳಿಂದ ಕೂದಲು ಉದುರುವಿಕೆ ಸೇರಿದಂತೆ ಹಲವು ಕಾರಣಗಳನ್ನು ನೀಡ್ತಾರೆ. ಆದ್ರೆ ಇದಕ್ಕೆಲ್ಲಾ ಇನ್ಮುಂದೆ ಚಿಂತಿಸಬೇಕಿಲ್ಲಾ.
ಹೌದು, ಕಳೆದ ಕೆಲ ತಿಂಗಳಿನಿಂದ ಐಎಸ್ಐ ಮಾನ್ಯತೆಯಿಲ್ಲದ ಹೆಲ್ಮೆಟ್ ಮಾರಾಟಕ್ಕೆ ಸಾಕಷ್ಟು ನಿರ್ಬಂಧಗಳನ್ನು ಹೇರುತ್ತಿದ್ದು, ಇದರ ಬೆನ್ನಲ್ಲೇ ಬೈಕ್ ಸವಾರರಿಗೆ ಅನೂಕಲಕರವಾಗುವ ಹೊಸ ನಮೂನೆಯ ಫುಲ್ ಫೇಸ್ ಹೆಲ್ಮೆಟ್ಗಳನ್ನು ಪರಿಚಯಿಸಲು ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್(ಬಿಎಸ್ಐ) ಸಂಸ್ಥೆಯು ಒಪ್ಪಿಗೆ ಸೂಚಿಸಿದೆ.
MOST READ: ಒನ್ ವೇ ನಲ್ಲಿ ನುಗ್ಗುವ ಮುನ್ನ ಇನ್ಮುಂದೆ ಹತ್ತು ಬಾರಿ ಯೋಚಿಸಿ..
ಸದ್ಯ ಮೋಟಾರ್ ಕಾಯ್ದೆ ಸುರಕ್ಷಾ ನೀತಿ ಅನ್ವಯ ಐಎಸ್ಐ ಮುದ್ರಿತ ಹೆಲ್ಮೆಟ್ಗಳು 1.5 ಕೆ.ಜಿ ಸ್ಟ್ಯಾಂಡರ್ಡ್ ತೂಕವನ್ನು ಪಡೆದುಕೊಂಡಿದ್ದು, ಇದರಿಂದ ಕೆಲವು ಬೈಕ್ ಸವಾರರು ನಿಗದಿತ ಮಟ್ಟದಲ್ಲಿ ಹೆಲ್ಮೆಟ್ ಬಳಕೆ ಮಾಡುತ್ತಿಲ್ಲ ಎನ್ನುವ ಆರೋಪಗಳಿವೆ.
ಇದರಿಂದ ಬೈಕ್ ಸವಾರರು ಹೆಲ್ಮೆಟ್ ಧರಿಸಲು ಅನುಕೂಲಕರವಾಗುವಂತೆ ಹೆಲ್ಮೆಟ್ ತೂಕವನ್ನು 1.2 ಕೆ.ಜಿಗೆ ಇಳಿಕೆ ಮಾಡಿದ್ದು, ಇದರಿಂದ ಬೈಕ್ ಸವಾರರು ಹೆಲ್ಮೆಟ್ ಧರಿಸಲು ಅನುಕೂಲಕರವಾಗುವುದಲ್ಲದೇ ಹೆಲ್ಮೆಟ್ ಗುಣಮಟ್ಟವನ್ನು ಕಾಯ್ದುಕೊಳ್ಳಲು ಸಹಕಾರಿಯಾಗಲಿದೆ ಎನ್ನಲಾಗಿದೆ.
ಹೊಸ ಯೋಜನೆಯು ಇದೇ ತಿಂಗಳು ಜನವರಿ 15ರಿಂದ ಕಡ್ಡಾಯವಾಗಿ ಜಾರಿ ಬರಲಿದ್ದು, ಪ್ರತಿಯೊಬ್ಬರು ಐಎಸ್ಐ ಮುದ್ರಿತ ಅಥವಾ ಅದಕ್ಕೂ ಹೆಚ್ಚಿನ ಗುಣಮಟ್ಟದ ವಿದೇಶಿ ಸಂಸ್ಥೆಗಳಿಂದ ಮಾನ್ಯತೆ ಹೊಂದಿರುವ ಡಾಟ್, ಇಸಿಇ ಮತ್ತು ಎಸ್ಎನ್ಇಎಲ್ಎಲ್ ಹೆಲ್ಮೆಟ್ಗಳನ್ನು ಸಹ ಬಳಕೆ ಮಾಡಬಹುದಾಗಿದೆ.
MOST READ: ವಾಹನ ಸವಾರರೇ ಎಚ್ಚರ- ಪೆಟ್ರೋಲ್ ಬಂಕ್ಗಳಲ್ಲಿ ಹೇಗೆ ನಡೆಯುತ್ತೆ ನೋಡಿ ಹಗಲು ದರೋಡೆ..!
ಇದರಿಂದ ಕಳಪೆ ಗುಣಮಟ್ಟದ ಹೆಲ್ಮೆಟ್ ಮತ್ತು ನಕಲಿ ಐಎಸ್ಐ ಹೆಲ್ಮೆಟ್ ಉತ್ಪಾದನೆ ಮತ್ತು ಮಾರಾಟದ ಮೇಲೆ ಮತ್ತಷ್ಟು ಕಠಿಣ ಕ್ರಮಗಳನ್ನ ಜಾರಿಗೊಳಿಸಲಿದ್ದು, ಬೈಕ್ ಸವಾರರ ಸುರಕ್ಷತೆಗಾಗಿ ಇಂತದೊಂದು ಮಹತ್ವದ ನಿರ್ಧಾರ ಪ್ರಕಟಿಸುತ್ತಿರುವುದು ಸ್ವಾಗತಾರ್ಹ ನಿರ್ಧಾರ ಅಂದ್ರೆ ತಪ್ಪಾಗುದಿಲ್ಲ.