Just In
- 15 min ago ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- 19 min ago 'ಬಾಹುಬಲಿ' ಎಸ್ಯುವಿ ಪರಾಕ್ರಮ: ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ವಿಶೇಷತೆಗಳೇನು?
- 21 min ago Honda: ಭಾರತ ನಿರ್ಮಿಸಿದ ಹೋಂಡಾ ಕಾರಿಗೆ ಮುಗಿಬಿದ್ದ ಜಪಾನ್ ಜನ!
- 31 min ago ಮತ್ತೆ ಅಖಾಡಕ್ಕೆ ಅಮೇರಿಕನ್ ಆಫ್ರೋಡ್ ಕಿಂಗ್: 2024 ಜೀಪ್ ರಾಂಗ್ಲರ್ ಫೇಸ್ಲಿಫ್ಟ್ ರಿವ್ಯೂ!
Don't Miss!
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Technology ಇಂದು 3D ಕರ್ವ್ಡ್ ಡಿಸ್ಪ್ಲೇ ಇರುವ ಈ ಫೋನಿನ ಸೇಲ್!..ಆಫರ್ ಬೆಲೆ ಎಷ್ಟು?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Movies 'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಚಿತ್ರ ರೀತಿಯಲ್ಲಿ ಕರೋನಾ ವೈರಸ್ ಪರೀಕ್ಷೆಗೊಳಪಟ್ಟ ಯುವಕ
ಭಾರತದಲ್ಲಿ ಕರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ತಮಿಳುನಾಡು ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಕರೋನಾ ವೈರಸ್ನ ಆರ್ಭಟ ತೀವ್ರವಾಗಿದೆ. ಸೋಂಕಿತರು ಹೆಚ್ಚಾದಂತೆಲ್ಲಾ ಸಾವಿನ ಪ್ರಮಾಣವು ಸಹ ಹೆಚ್ಚಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಕೆಲವು ರಾಜ್ಯಗಳಲ್ಲಿ ಲಾಕ್ಡೌನ್ ಅನ್ನು ಮತ್ತೆ ಜಾರಿಗೊಳಿಸಲಾಗುತ್ತಿದೆ. ತಮಿಳಿನಲ್ಲಿಯೂ ಸಹ ಮತ್ತೆ ಲಾಕ್ಡೌನ್ ಜಾರಿಗೊಳಿಸಲಾಗಿದೆ. ಆದರೆ ಈ ಬಾರಿ ಚೆನ್ನೈ, ಚೆಂಗಲ್ಪಟ್ಟು, ಕಾಂಚೀಪುರಂ ಹಾಗೂ ತಿರುವಳ್ಳೂರು ಜಿಲ್ಲೆಗಳಲ್ಲಿ ಮಾತ್ರ ಲಾಕ್ಡೌನ್ ಜಾರಿಗೊಳಿಸಲಾಗಿದೆ.
ಇತರ ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದ ವಿನಾಯಿತಿ ನೀಡಲಾಗಿದೆ. ಕರೋನಾ ವೈರಸ್ ಟೆಸ್ಟ್ಗಳನ್ನು ಸರಿಯಾಗಿ ನಡೆಸುತ್ತಿಲ್ಲವೆಂಬುದು ಸಾರ್ವಜನಿಕರ ಹಾಗೂ ಪ್ರತಿಪಕ್ಷಗಳ ಆರೋಪ. ಟೆಸ್ಟ್ಗಳನ್ನು ಕಡಿಮೆ ಸಂಖ್ಯೆಯಲ್ಲಿ ನಡೆಸಲಾಗುತ್ತಿದೆ ಎಂದು ಸಹ ಆರೋಪಿಸಲಾಗುತ್ತಿದೆ.
MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ
ವೈದ್ಯಕೀಯ ಉಪಕರಣಗಳ ಕೊರತೆಯಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆಗಳನ್ನು ನಡೆಸುತ್ತಿಲ್ಲ. ಜನರು ತಾವಾಗಿಯೇ ಮುಂದೆ ಬಂದರೂ ಪರೀಕ್ಷೆಗೊಳಪಡಿಸುತ್ತಿಲ್ಲ. ಆದರೆ ಉತ್ತರ ಪ್ರದೇಶದ ಮೀರತ್ನಲ್ಲಿ ಯುವಕನೊಬ್ಬ ತಾನಾಗಿಯೇ ಮುಂದೆ ಬಂದು ಕರೋನಾ ವೈರಸ್ ಪರೀಕ್ಷೆ ನಡೆಸುವಂತೆ ಕೇಳಿಕೊಂಡಿದ್ದಾನೆ.
ಮೀರತ್ನ ಸರ್ಕಾರಿ ಆಸ್ಪತ್ರೆಗೆ ಬಂದ ಆತ ಅಲ್ಲಿದ್ದವರ ಬಳಿ ತನಗೆ ಕರೋನಾ ವೈರಸ್ ಇದ್ದು, ಪರೀಕ್ಷೆಗೊಳಪಡಿಸುವಂತೆ ಮನವಿ ಮಾಡಿದ್ದಾನೆ. ಆತನನ್ನು ಪರೀಕ್ಷೆಗೊಳಪಡಿಸುವ ಬದಲು ಅಲ್ಲಿಂದಓಡಿಸಿದ್ದಾರೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಯುವಕನು ಸರ್ಕಾರಿ ಅಧಿಕಾರಿಯ ಕಾರಿಗೆ ಅಡ್ಡ ನಿಂತು ತನಗೆ ಕರೋನಾ ವೈರಸ್ ಇದೆ ಎಂದು ಹೇಳಿದ್ದಾನೆ. ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಅಲ್ಲಿಂದ ತೆರಳುವಂತೆ ಆತನ ಮನವೊಲಿಸಲು ಯತ್ನಿಸಿದ್ದಾರೆ. ತನ್ನ ಪಟ್ಟು ಸಡಿಲಿಸದ ಯುವಕ ತನ್ನನ್ನು ಪರೀಕ್ಷಿಸಲೇ ಬೇಕೆಂದು ಹಠ ಹಿಡಿದಿದ್ದಾನೆ.
ಅಲ್ಲಿದ್ದವರು ಸ್ಥಳಕ್ಕೆ ಆಂಬ್ಯುಲೆನ್ಸ್ ಕರೆಸಿ ಯುವಕನನ್ನು ಪರೀಕ್ಷೆಗೊಳಪಡಿಸಿದ್ದು, ಆತನಿಗೆ ನಿಜವಾಗಿಯೂ ಕರೋನಾ ವೈರಸ್ ಸೋಂಕು, ತಗುಲಿದೆಯೇ ಇಲ್ಲವೇ ಎಂಬುದರ ಫಲಿತಾಂಶಕ್ಕಾಗಿಕಾಯಲಾಗುತ್ತಿದೆ.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ಯುವಕನ ಮೊಂಡುತನದ ವಿರುದ್ಧ ಪೊಲೀಸರು ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ಕರೋನಾ ವೈರಸ್ ಪರೀಕ್ಷೆಯ ಫಲಿತಾಂಶ ಬಂದ ನಂತರ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ. ಕರೋನಾ ಸೋಂಕು ಇದ್ದರೂ ಸಹ ಯಾರೂ ಇಂತಹ ಪ್ರಯತ್ನಕ್ಕೆ ಮುಂದಾಗುವುದು ಸರಿಯಲ್ಲ.
ಸದ್ಯಕ್ಕೆ ತೀವ್ರ ರೋಗಲಕ್ಷಣಗಳನ್ನು ಹೊಂದಿರುವವರು ಹಾಗೂ ಸೋಂಕಿತರ ಸಂಪರ್ಕದಲ್ಲಿರುವವರನ್ನು ಮಾತ್ರ ಪರೀಕ್ಷಿಸಲಾಗುತ್ತಿದೆ. ಇದರ ಜೊತೆಗೆ ಕಡಿಮೆ ರೋಗಲಕ್ಷಣ ಹೊಂದಿರುವವರಿಗೆ 14 ದಿನಗಳ ಕ್ವಾರಂಟೈನ್ ವಿಧಿಸಲಾಗುತ್ತಿದೆ.