Just In
- 8 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 9 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 10 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 10 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದೇಶದ ಪ್ರಥಮ ಬೈಕ್ ಆಂಬುಲೆನ್ಸ್ ಸೇವೆ ಬೆಂಗ್ಳೂರಲ್ಲಿ ಆರಂಭ
ಏಷ್ಯಾದ ಮೊದಲ ಸರ್ಕಾರಿ ಹಾಗೂ ದೇಶದ ಪ್ರಪ್ರಥಮ ಬೈಕ್ ಆಂಬುಲೆನ್ಸ್ ಸೇವೆಗೆ ಕರ್ನಾಟಕ ರಾಜ್ಯ ಸರಕಾರ ಚಾಲನೆ ನೀಡಿದೆ. ದಿನದಿಂದ ದಿನಕ್ಕೆ ವಾಹನ ದಟ್ಟಣೆ ಹೆಚ್ಚಾಗುತ್ತಿದೆ. ಹಾಗಾಗಿ ಅಪಘಾತ ಸ್ಥಳಕ್ಕೆ ತಲುಪಲು ಸಾಧ್ಯವಾಗುತ್ತಿಲ್ಲ ಅಥವಾ ತುಂಬಾನೇ ವಿಳಂಬವಾಗುತ್ತಿದೆ. ಇದನ್ನು ಮನಗಂಡಿರುವ ರಾಜ್ಯ ಸರಕಾರ ಜನರ ಸೇವೆಗಾಗಿ ವಿನೂತನ ಯೋಜನೆ ಆರಂಭಿಸಿದೆ.
ಬೈಕ್ ಆಂಬುಲೆನ್ಸ್ ಮುಖಾಂತರ ತುರ್ತಾಗಿ ಪ್ರಥಮ ಚಿಕಿತ್ಸೆ ಒದಗಿಸಲು ಸಾಧ್ಯವಾಗಲಿದೆ. ಇದಕ್ಕಾಗಿ ಚಾಲಕರಿಗೆ ತರಬೇತಿ ಕೂಡಾ ನೀಡಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಅಲ್ಲದೆ ಎಪ್ರಿಲ್ 15 ಬುಧವಾರದಿಂದಲೇ 21 ಬೈಕ್ ಗಳು ನಗರದೆಲ್ಲೆಡೆ ಬೈಕ್ ಆಂಬುಲೆನ್ಸ್ ಸೇವೆಯನ್ನು ಆರಂಭಿಸಲಿದ್ದು, ಮುಂದಿನ ದಿನಗಳಲ್ಲಿ ಇತರೆಡೆಗಳಿಗೂ ವ್ಯಾಪಿಸಲಿದೆ.
ಈಗ ಲಭ್ಯವಿರುವ ಮಾಹಿತಿಯ ಪ್ರಕಾರ ಅಪಘಾತ ನಡೆದಾಗ '108' ಎಂಬ ಸೇವಾ ನಂಬರ್ ಗೆ ಕರೆ ಮಾಡಿದಾಗ ಆ ನಿರ್ದಿಷ್ಟ ಪ್ರದೇಶದ ವಾಹನ ದಟ್ಟಣೆಯನ್ನು ಜಿಪಿಎಸ್ ನಲ್ಲಿ ಗಮನಿಸಿಕೊಂಡು ಬೈಕ್ ಆಂಬುಲೆನ್ಸ್ ಸೇವೆ ಒದಗಿಸಲಾಗುವುದು.
ಇದಕ್ಕಾಗಿ ಬಜಾಜ್ ಅವೆಂಜರ್ ಬೈಕ್ ಉಪಯೋಗಿಸಲಾಗಿದ್ದು, ಎರಡು ಲಕ್ಷ ರು.ಗಳಷ್ಟು ದುಬಾರಿಯಾಗಿದೆ ಎಂಬುದು ತಿಳಿದು ಬಂದಿದೆ. ಅಲ್ಲದೆ ಇದರಲ್ಲಿ ಪ್ರಥಮ ಚಿಕಿತ್ಸಾ ಪೆಟ್ಟಿಗೆಯ ಜೊತೆಗೆ ಆಮ್ಲಜನಕ, ಸೈರನ್ ದೀಪ ಹಾಗೂ ಮೈಕ್ ವ್ಯವಸ್ಥೆ ಇರಲಿದೆ. ಇಲ್ಲಿ ಗಮನಾರ್ಹವೆಂದರೆ ಪ್ರಥಮ ಚಿಕಿತ್ಸೆಯನ್ನು ಚಾಲಕರೇ ಒದಗಿಸಲಿದ್ದಾರೆ.
ಇಲ್ಲಿ ಸಾಮಾನ್ಯ ಜನರಲ್ಲಿ ಮೂಡಿಬರುತ್ತಿರುವ ಪ್ರಶ್ನೆಯೆಂದರೆ ಚಾಲಕರು ಸಂಚಾರ ಪೊಲಸ್ ವಿಭಾಗಕ್ಕೆ ಸೇರಿದವರಾಗಿದ್ದುದ್ದರಿಂದ ದಾದಿಯರ ಅಭಾವದಲ್ಲಿ ಹೇಗೆ ಒಬ್ಬರು ಮಾತ್ರ ಪ್ರಥಮ ಚಿಕಿತ್ಸೆ ಒದಗಿಸಲು ಸಾಧ್ಯ? ಇದಕ್ಕಾಗಿ ವಿಶೇಷ ತರಬೇತಿ ನೀಡಲಾಗಿದೆಯೇ? ಹಾಗೊಂದು ವೇಳೆ ಅಪಘಾತಕ್ಕೀಡಾದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಬೇಕಾದ ತುರ್ತು ಪರಿಸ್ಥಿತಿ ಎದುರಾದರೆ ಇತರರ ನೆರವು ಇಲ್ಲದೆಯೇ ಒಬ್ಬರಿಗೆ ಮಾತ್ರ (ಚಾಲಕ) ಈ ಕರ್ತವ್ಯ ನಿಭಾಯಿಸಲು ಸಾಧ್ಯವೇ? ಅಪಘಾತದಲ್ಲಿ ಗಾಯವಾದವರನ್ನು ಬೈಕ್ ನಲ್ಲಿ ಕುರಿಸುವುದಾದರೂ ಹೇಗೆ? ಅಲ್ಲ ವೈದ್ಯರು ಅಥವಾ ದಾದಿಯರೇ ವಾಹನ ಚಾಲನೆಯನ್ನು ಕಳಿಯಬೇಕೇ? ನೀವೇ ಉತ್ತರಿಸಿ...