Just In
- 30 min ago ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು: ಕಚೇರಿಗೆ ಹೋಗಲು ಎಲೆಕ್ಟ್ರಿಕ್ ಆಟೋ ಖರೀದಿ!
- 3 hrs ago ಹ್ಯುಂಡೈ ವೆರ್ನಾ ಕಾರಿಗೆ ಭಾರೀ ಡಿಸ್ಕೌಂಟ್: ರಾಶಿ ಫೀಚರ್ನ ಕಾರಿಗೆ ಇಷ್ಟು ಆಫರ್ ಯಾಕೆಂದ ನೆಟ್ಟಿಗರು!
- 16 hrs ago ಮಾರುಕಟ್ಟೆಯಲ್ಲಿ ಸುನಾಮಿ ಎಬ್ಬಿಸಲು ಹೊಸ ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ಅನಾವರಣ
- 18 hrs ago Air Taxi: ಬೆಂಗಳೂರು ಸೇರಿ ಈ ನಗರಗಳಲ್ಲಿ ಏರ್ ಟ್ಯಾಕ್ಸಿ.. ಆಕಾಶದಲ್ಲೇ ಆಫೀಸ್ಗೆ ಹೋಗಬಹುದು, ಕಡಿಮೆ ಖರ್ಚು!
Don't Miss!
- Finance April 23 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Movies "ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
- News Helicopters Crash: ಸೇನೆಯ ಎರಡು ಹೆಲುಕಾಪ್ಟರ್ ಡಿಕ್ಕಿ: 10 ಜನರ ಸಾವು
- Technology Google Chrome: ಗೂಗಲ್ ಕ್ರೋಮ್ ಬಳಕೆದಾರರು ಹ್ಯಾಕಿಂಗ್ ಅಪಾಯದಲ್ಲಿ! ಸುರಕ್ಷಿತವಾಗಿರೋದು ಹೇಗೆ?
- Sports IPL 2024: ವಿರಾಟ್ ಕೊಹ್ಲಿ ವಿವಾದಾತ್ಮಕ ಔಟ್; ಅಂಪೈರಿಂಗ್ ವಿರುದ್ಧ ಕೆಂಡಕಾರಿದ ಮೊಹಮ್ಮದ್ ಕೈಫ್!
- Lifestyle ಮನೆಯಲ್ಲಿ ಘಮ ಘಮಿಸುವ ಮಲ್ಲಿಗೆ ಗಿಡ ಬೆಳೆಸೋದು ಹೇಗೆ..? ಇಲ್ಲಿದೆ ಮಾಹಿತಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಡ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಇಂಡಿಯನ್ ಮೋಟಾರ್ ಸೈಕಲ್ನಿಂದ ಕೆ2ಕೆ ಅಭಿಯಾನ
ಬಡಹೆಣ್ಣು ಮಕ್ಕಳ ಶಿಕ್ಷಣದಿಂದ ವಂಚಿತರಾಗುತ್ತಿರುವ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು, ಈ ಹಿನ್ನೆಲೆ ಇಂಡಿಯನ್ ಮೋಟಾರ್ ಸೈಕಲ್ ಸಂಸ್ಥೆಯು ಕೆ2ಕೆ ಅಭಿಯಾನ ಕೈಗೊಂಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
ಬಡಹೆಣ್ಣು ಮಕ್ಕಳ ಶಿಕ್ಷಣದಿಂದ ವಂಚಿತರಾಗುತ್ತಿರುವ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು, ಈ ಹಿನ್ನೆಲೆ ಇಂಡಿಯನ್ ಮೋಟಾರ್ ಸೈಕಲ್ ಸಂಸ್ಥೆಯು ಕೆ2ಕೆ ಅಭಿಯಾನ ಕೈಗೊಂಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
ಭಾರತ ಬೆಳೆಯುತ್ತಿದ್ದಂತೆ ಹತ್ತಾರು ಸಮಸ್ಯೆಗಳು ಉಲ್ಬಣಗೊಳ್ಳುತ್ತಿವೆ. ಇದರಲ್ಲಿ ಬಡತನವು ಒಂದಾಗಿದ್ದು, ಅನೇಕರು ಇದೇ ಕಾರಣಕ್ಕೆ ಶಿಕ್ಷಣದಿಂದ ವಂಚಿತರಾಗುತ್ತಿರುವುದು ಮತ್ತೊಂದು ಸಮಸ್ಯೆಗೆ ಕಾರಣವಾಗುತ್ತಿದೆ. ಈ ನಿಟ್ಟಿನಲ್ಲಿ ಹೊಸ ಅಭಿಯಾನಯೊಂದನ್ನು ಕೈಗೊಂಡಿರುವ ಇಂಡಿಯನ್ ಮೋಟಾರ್ ಸೈಕಲ್ ಸಂಸ್ಥೆಯು ಬಡ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹಣ ಸಂಗ್ರಹಿಸಲು ಮುಂದಾಗಿದೆ.
ಇದಕ್ಕಾಗಿಯೇ ಇಂಡಿಯನ್ ರೋಡ್ ಸ್ಟಾರ್ ಬೈಕಿನ ಮೂವರು ಮಾಲೀಕರು ದೇಶಾದ್ಯಂತ 12 ನಗರಗಳನ್ನು ಪ್ರಯಾಣ ಮಾಡಲಿದ್ದು, ಅಭಿಯಾನದ ಜೊತೆ ಆಯ್ದ ಶಾಲಾ ಕಾಲೇಜುಗಳಿಗೆ ಭೇಟಿ ಮಾಡಲಿದ್ದಾರೆ.
Recommended Video
ಈ ಹಿನ್ನೆಲೆ ಕನ್ಯಾಕುಮಾರಿಯಿಂದ ಕಾಶ್ಮೀರದ ತನಕ ಬೈಕ್ ಅಭಿಯಾನ ನಡೆಯಲಿದ್ದು, 'ಗರ್ಲ್ ಚೈಲ್ಡ್ ಎಜುಕೇಷನ್' ಪರಿಕಲ್ಪನೆ ಅಡಿ ಬಡಹೆಣ್ಣುಮಕ್ಕಳಿಗಾಗಿ ಶೈಕ್ಷಣಿಕ ಕಿಟ್ಗಳನ್ನು ಒದಗಿಸಲು ದೇಣಿಗೆ ಸಂಗ್ರಹಿಸಿಲಿದ್ದಾರೆ.
ಇದಕ್ಕೂ ಮೊದಲ ಬೆಂಗಳೂರಿನಿಂದ ಕೆ2ಕೆ ಅಭಿಯಾನಕ್ಕೆ ಹಸಿರು ನಿಶಾನೆ ತೊರಲಾಗಿದ್ದು, ಅನುರಾಗ್ ಶ್ರೀವಾಸ್ತವ, ನೀಲಾದ್ರಿ ಸಹಾ ಮತ್ತು ಬರ್ನಾರ್ಡ್ ಲಜರ್ ಬೆಂಗಳೂರಿನಿಂದ ಕೆ2ಕೆ ರೈಡ್ ಪ್ರಾರಂಭಿಸಿದ್ದಾರೆ.
ಇಂಡಿಯನ್ ಮೋಟಾರ್ ಸೈಕಲ್ ಮಾಲೀಕರ ವಿನೂತನ ಪ್ರಯತ್ನಕ್ಕೆ ಹಲವು ಸಂಘಟನೆಗಳು ಕೈಜೋಡಿಸಿದ್ದು, ಬಡ ಹೆಣ್ಣುಮಕ್ಕಳ ಶಿಕ್ಷಣ ಅಭಿವೃದ್ಧಿಗೆ ಕೈಗೊಂಡಿರುವ ಅಭಿಯಾನ ಪ್ರಸಂಶೆಗೆ ಕಾರಣವಾಗಿದೆ.
ಡ್ರೈವ್ ಸ್ಪಾರ್ಕ್ ಅಭಿಪ್ರಾಯ
ದೇಶದಲ್ಲಿಂದು ಲಕ್ಷಾಂತರ ಮಕ್ಕಳು ಬಡತನ ಹಿನ್ನೆಲೆ ಶಿಕ್ಷಣದಿಂದ ವಂಚಿತರಾಗುತ್ತಿದ್ದು, ಇದನ್ನು ತಡೆಗಟ್ಟಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ರೂಪಿಸಿವೆ. ಆದರೂ ಬಡಹೆಣ್ಣು ಮಕ್ಕಳು ಸಂಕಷ್ಟದಲ್ಲಿದ್ದು, ಇಂಡಿಯನ್ ಮೋಟಾರ್ ಸೈಕಲ್ ಮಾಲೀಕರು ಕೈಗೊಂಡಿರುವ ಅಭಿಯಾನ ಸಾರ್ಥಕತೆಯಿಂದ ಕೂಡಿದೆ ಎನ್ನಬಹುದು.