Just In
- 7 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 8 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 10 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 10 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬದಲಾದ ತೆರಿಗೆ ನೀತಿ- ಸದ್ಯದಲ್ಲೇ ಹೊಸ ಬೈಕ್, ಸ್ಕೂಟರ್ಗಳು ಮತ್ತಷ್ಟು ದುಬಾರಿ..!
ದೇಶಾದ್ಯಂತ ಹೊಸ ವಾಹನಗಳ ಖರೀದಿ ಪ್ರಕ್ರಿಯೆ ಜೋರಾಗಿದ್ದು, ಮಾಲಿನ್ಯ ಪ್ರಮಾಣವು ಕೂಡಾ ಅದೇ ರೀತಿಯಾಗಿ ಏರಿಕೆಯಾಗುತ್ತಲೇ ಇದೆ. ಹೀಗಾಗಿ ಗ್ರಾಹಕರನ್ನು ಎಲೆಕ್ಟ್ರಿಕ್ ವಾಹನಗಳತ್ತ ಸೆಳೆಯಲು ಮುಂದಾಗಿರುವ ಕೇಂದ್ರ ಸರ್ಕಾರವು ಪೆಟ್ರೋಲ್ ಎಂಜಿನ್ ಪ್ರೇರಿತ ಹೊಸ ಬೈಕ್ ಮತ್ತು ಸ್ಕೂಟರ್ಗಳ ಮೇಲೆ ಹೆಚ್ಚುವರಿ ತೆರಿಗೆ ಅಸ್ತ್ರ ಪ್ರಯೋಗಿಸಲು ಮುಂದಾಗಿದೆ.
ಸದ್ಯ ಬೆಂಗಳೂರು ಒಂದರಲ್ಲೇ ಪ್ರತಿದಿನ 1800 ರಿಂದ 2000 ಹೊಸ ವಾಹನಗಳು ನೋಂದಣಿಯಾಗುತ್ತಿದ್ದು, ಇದರಲ್ಲಿ ಶೇ.80ರಷ್ಟು ದ್ವಿಚಕ್ರ ವಾಹನಗಳಾಗಿವೆ. ಹೀಗಿರುವಾಗ ದೇಶಾದ್ಯಂತ ದಿನಂಪ್ರತಿ ಮಾರಾಟವಾಗುತ್ತಿರುವ ಪೆಟ್ರೋಲ್ ಎಂಜಿನ್ ಬೈಕ್ ಮತ್ತು ಸ್ಕೂಟರ್ಗಳ ಸಂಖ್ಯೆ ಎಷ್ಟಿರಬಹುದು ನೀವೇ ಊಹಿಸಿಕೊಳ್ಳಿ. ಹೀಗಾಗಿ ಪೆಟ್ರೋಲ್ ಎಂಜಿನ್ ಬದಲಾಗಿ ಎಲೆಕ್ಟ್ರಿಕ್ ಎಂಜಿನ್ ಬೈಕ್ ಮತ್ತು ಸ್ಕೂಟರ್ ಮಾರಾಟಕ್ಕೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಕೇಂದ್ರವು ಹೊಸ ತೆರಿಗೆ ಜಾರಿಗೆ ತರುತ್ತಿದೆ.
ಎಲೆಕ್ಟ್ರಿಕ್ ಎಂಜಿನ್ ಬೈಕ್ ಮತ್ತು ಸ್ಕೂಟರ್ಗಳನ್ನು ಹೊರತುಪಡಿಸಿ ಪೆಟ್ರೋಲ್ ಎಂಜಿನ್ ಬೈಕ್ ಮತ್ತು ಸ್ಕೂಟರ್ಗಳ ಖರೀದಿ ಮೇಲೆ ಹೆಚ್ಚುವರಿಯಾಗಿ ಗ್ರೀನ್ ಸೆಸ್ ವಿಧಿಸಲು ಸಿದ್ದತೆ ನಡೆಸಲಾಗಿದ್ದು, ಹೊಸ ವಾಹನ ಖರೀದಿಯು ಮತ್ತಷ್ಟು ದುಬಾರಿಯಾಗಲಿದೆ.
ಮುಂಬರುವ ತಿಂಗಳು ನಡೆಯಲಿರುವ ಕೇಂದ್ರದ ಬಜೆಟ್ ಮಂಡನೆ ವೇಳೆ ಹೊಸ ತೆರಿಗೆ ನೀತಿ ಅಧಿಕೃತವಾಗಿ ಜಾರಿಗೊಳ್ಳಲಿದ್ದು, ಎಲೆಕ್ಟ್ರಿಕ್ ಎಂಜಿನ್ ವಾಹನಗಳನ್ನು ಹೊರತುಪಡಿಸಿ ಪರಿಸರಕ್ಕೆ ಮಾರಾಕವಾಗಿರುವ ಪೆಟ್ರೋಲ್ ಬೈಕ್ ಮತ್ತು ಸ್ಕೂಟರ್ಗಳ ಮೇಲೆ ಗ್ರೀನ್ ಸೆಸ್ ವಿಧಿಸಲು ನಿರ್ಧರಿಸಲಾಗಿದೆ.
ಮಾಹಿತಿಗಳ ಪ್ರಕಾರ ಗ್ರೀನ್ ಸೆಸ್ನಿಂದಾಗಿ ಬೈಕ್ ಮತ್ತು ಸ್ಕೂಟರ್ ಬೆಲೆಗಳಲ್ಲಿ ಕನಿಷ್ಠ ರೂ.800ರಿಂದ ರೂ.1200 ಹೆಚ್ಚಳವಾಗುವ ಸಾಧ್ಯತೆಗಳಿದ್ದು, ಇನ್ನುಳಿದಂತೆ ಇತರೆ ಆಯಾ ರಾಜ್ಯಗಳ ತೆರಿಗೆಗಳು ಸಹ ಈಗಿನಂತೆಯೇ ಮುಂದುವರಿಯಲಿವೆ.
ಇದರಲ್ಲಿ ಗ್ರೀನ್ ಸೆಸ್ನಿಂದ ಸದ್ಯ ಮುಕ್ತವಾಗಿರುವ ಎಲೆಕ್ಟ್ರಿಕ್ ಸ್ಕೂಟರ್ ಮತ್ತು ಬೈಕ್ಗಳಿಗೆ ಮುಂದಿನ 3 ವರ್ಷಗಳ ತನಕ ತೆರಿಗೆ ವಿನಾಯ್ತಿ ಸಿಗಲಿದ್ದು, ಪೆಟ್ರೋಲ್ ಎಂಜಿನ್ ಸ್ಕೂಟರ್ ಮತ್ತು ಬೈಕ್ ಬದಲಾಗಿ ಎಲೆಕ್ಟ್ರಿಕ್ ಎಂಜಿನ್ ವಾಹನ ಮಾರಾಟ ಹೆಚ್ಚಳಕ್ಕೆ ಈ ಕ್ರಮ ಕೈಗೊಳ್ಳಲಾಗುತ್ತಿದೆ.
ಇದರಿಂದ ಕೇಂದ್ರಕ್ಕೆ ಭಾರೀ ಪ್ರಮಾಣದ ಆದಾಯ ಹರಿದು ಬರಲಿದ್ದು, ಅದರಿಂದಲೇ ಎಲೆಕ್ಟ್ರಿಕ್ ವಾಹನಗಳ ಬೇಕಿರುವ ಅಗತ್ಯ ಚಾರ್ಜಿಂಗ್ ಸ್ಟೆಷನ್ ನಿರ್ಮಾಣ ಮತ್ತು ನಿರ್ದಿಷ್ಟ ಅವಧಿಗೆ ಎಲೆಕ್ಟ್ರಿಕ್ ಕಾರುಗಳಿಗೆ ಟೋಲ್ ವಿನಾಯ್ತಿ, ಪಾರ್ಕಿಂಗ್ ಶುಲ್ಕ ವಿನಾಯ್ತಿಗಳನ್ನು ನೀಡಲು ಯೋಜಿಸಲಾಗಿದೆ.
125 ಸಿಸಿ ಬೈಕ್ಗಳಿಗೆ ಎಬಿಎಸ್ ಕಡ್ಡಾಯ..!
ವಾಹನ ಜಗತ್ತಿನ ಕ್ರಾಂತಿಕಾರಿ ಬೆಳವಣಿಗೆಯೊಂದರಲ್ಲಿ ದೇಶದಲ್ಲೂ 125 ಸಿಸಿ ಹಾಗೂ ಮೇಲ್ಪಟ್ಟ ಬೈಕ್ಗಳಿಗೆ ಆ್ಯಂಟಿ ಲಾಕ್ ಬ್ರೇಕಿಂಗ್ ಸಿಸ್ಟಂ (ಎಬಿಎಸ್) ಬಳಕೆ ಕೂಡಾ ಕಡ್ಡಾಯವಾಗಲಿದೆ. ದೇಶದಲ್ಲಿ ರಸ್ತೆ ಅಪಘಾತದಿಂದಾಗಿ ಸಂಭವಿಸುತ್ತಿರುವ ಸಾವಿನ ಸಂಖ್ಯೆ ಹೆಚ್ಚುತ್ತಿರುವ ಇಂತಹದೊಂದು ಗಮನಾರ್ಹ ಬೆಳವಣೆಗೆ ಕಂಡುಬಂದಿದೆ.
ಕೇಂದ್ರ ಸಾರಿಗೆ ಇಲಾಖೆಯು ಇದೇ ವರ್ಷ 2019ರ ಎಪ್ರಿಲ್ 1ರಿಂದಲೇ 125ಸಿಸಿ ಮೇಲ್ಪಟ್ಟ ಬೈಕ್ಗಳಿಗೆ ಎಬಿಎಸ್ ಕಡ್ಡಾಯ ಬಳಕೆಯನ್ನು ಜಾರಿಗೆ ತರುತ್ತಿದ್ದು, ನಿಮಗೆಲ್ಲರಿಗೂ ತಿಳಿದಿರುವಂತೆಯೇ ಭಾರತೀಯ ಮಧ್ಯಮ ವರ್ಗದ ಜನರು ಮೋಟಾರುಸೈಕಲ್ಗಳನ್ನೇ ಅತಿ ಹೆಚ್ಚು ನೆಚ್ಚಿಕೊಂಡಿದ್ದಾರೆ. ಇದರಿಂದಲೇ ಮೋಟಾರುಸೈಕಲ್ ಮಾರುಕಟ್ಟೆಯು ಆಗಾಧವಾಗಿ ಬೆಳೆದು ನಿಂತಿದೆ.
MOST READ: ಬ್ರೇಕ್ ಫೇಲ್ ಆದಾಗ ಜೀವ ಉಳಿಸಿಕೊಳ್ಳಲು ಈ ಟಿಪ್ಸ್ ಖಂಡಿತ ನಿಮ್ಮ ಸಹಾಯಕ್ಕೆ ಬರುತ್ತೆ..!
ಇನ್ನೊಂದೆಡೆ ಸುರಕ್ಷತೆಯತ್ತ ಗಮನ ಹಾಯಿಸಿದಾಗ ಅತ್ಯಂತ ಕೆಳ ಮಟ್ಟದಲ್ಲಿದ್ದು, ಸಾರಿಗೆ ಸಚಿವಾಲಯದ 2017ರ ಮಾಹಿತಿ ಪ್ರಕಾರ, ದೇಶಾದ್ಯಂತ ರಸ್ತೆ ಅಪಘಾತಗಳಲ್ಲಿ 60 ಸಾವಿರಕ್ಕೂ ಹೆಚ್ಚು ದ್ವಿಚಕ್ರ ವಾಹನ ಸವಾರರು ಸಾವೀಗೀಡಾಗಿದ್ದರು.
ಅಂದರೆ ದೇಶದ ರಸ್ತೆಯಲ್ಲಿ ನಡೆಯುವ ಒಟ್ಟು ಅಪಘಾತದ ಶೇಕಡಾ 60ರಷ್ಟು ದ್ವಿಚಕ್ರ ಸವಾರರೇ ಹೆಚ್ಚು ಪ್ರಾಣಕಳೆದುಕೊಳ್ಳುತ್ತಿದ್ದು, ಇಂತಹ ಬಹುತೇಕ ಪ್ರಕರಣಗಳಲ್ಲಿ ಸವಾರರು ಕನಿಷ್ಠ ಹೆಲ್ಮೆಟ್ ಕೂಡಾ ಧರಿಸುವುದಿಲ್ಲವೆಂಬುದು ಕಂಡುಬಂದಿದೆ.
MOST READ: ಹಾಸನದ ಬಳಿ ಬರೋಬ್ಬರಿ 300ಕಿ.ಮೀ ಸ್ಪೀಡ್ನಲ್ಲಿ ಬೈಕ್ ರೈಡ್ ಮಾಡಿದ ಯುವಕ
ಇದರಿಂದ ಪ್ರಯಾಣಿಕ ಅಪಾಯದಿಂದ ಪಾರಾಗುವ ಎಲ್ಲ ಸಾಧ್ಯತೆಗಳು ಕ್ಷೀಣಿಸುತ್ತದೆ. ಈಗ ಯುರೋಪ್ ರಸ್ತೆ ಕಾನೂನಿಂದ ಪ್ರೇರಣೆ ಪಡೆದಿರುವ ಭಾರತದ ಸಾರಿಗೆ ಅಧಿಕಾರಿಗಳು ದೇಶದಲ್ಲೂ 125 ಸಿಸಿ ಹಾಗೂ ಮೇಲ್ಪಟ್ಟ ದ್ವಿಚಕ್ರ ವಾಹನಗಳಿಗೆ ಎಬಿಎಸ್ ಬಳಕೆ ಕಡ್ಡಾಯಗೊಳಿಸಲು ನಿರ್ಧರಿಸಿದೆ.
ಅಷ್ಟಕ್ಕೂ ಎಬಿಎಸ್ ಎಂದರೇನು? ಹೇಗೆ ಕೆಲಸ ಮಾಡುತ್ತದೆ?
ಎಬಿಎಸ್ ಪೂರ್ಣ ರೂಪವೇ ಆ್ಯಂಟಿ ಲಾಕ್ ಬ್ರೇಕಿಂಗ್ ಸಿಸ್ಟಂ (ಎಬಿಎಸ್). ಸಾಮಾನ್ಯವಾಗಿ ಹಠಾತ್ ಆಗಿ ಬ್ರೇಕ್ ಒತ್ತಿದಾಗ ಚಕ್ರದ ಚಾಲನೆ ಒಮ್ಮೆಲೇ ನಿಲುಗಡೆಯಾಗುತ್ತದೆ. ಇದರ ಪರಿಣಾಮ ಸ್ಟೀರಿಂಗ್ ಹಾಗೂ ಹ್ಯಾಂಡಲ್ ಲಾಕ್ ಆಗಿ ಗಾಡಿ ಸ್ಕಿಡ್ ಆಗುವ ಸಾಧ್ಯತೆ ಇದ್ದು, ಈ ವೇಳೆ ಚಾಲಕರಿಗೆ ಅಪಘಾತದಿಂದ ತಪ್ಪಿಸಿಕೊಳ್ಳಲು ಅವಕಾಶವಿರುವುದಿಲ್ಲ.
ಇಂತಹ ಅವಘಡ ಸಾಧ್ಯತೆಗಳನ್ನು ತಪ್ಪಿಸುವ ಹಾಗೂ ಬ್ರೇಕಿಂಗ್ ಅಂತರವನ್ನು ಸಾಕಷ್ಟು ಕಡಿಮೆ ಮಾಡುವ ನಿಟ್ಟಿನಲ್ಲಿ ಆಟೋ ಎಂಜಿನಿಯರ್ಗಳು ಆ್ಯಂಟಿ ಲಾಕ್ ಬ್ರೇಕಿಂಗ್ ಸಿಸ್ಟಂ (ಎಬಿಎಸ್) ಎಂಬ ಬ್ರೇಕಿಂಗ್ ತಂತ್ರಜ್ಞಾನವನ್ನು ಪರಿಚಯಿಸಿರುವುದು.
ಬ್ರೇಕ್ ಒತ್ತಿದ ಸಂದರ್ಭದಲ್ಲಿ ಚಕ್ರ ಹಠಾತ್ ಆಗಿ ಬಂದ್ ಆಗುವುದಿಲ್ಲ. ಬದಲಾಗಿ ವೇಗವನ್ನು ಕಡಿತಗೊಳಿಸಿ, ತಿರುಗಿಸುತ್ತಲೇ ಇರುತ್ತದೆ. ಇದರಿಂದ ಅಪಘಾತ ಸಂದರ್ಭದಲ್ಲಿ ಸವಾರರು ತಮ್ಮ ವಾಹನದ ದಿಕ್ಕನ್ನು ಬದಲಾಯಿಸುವ ಅವಕಾಶವಿರುತ್ತದೆ. ಈ ಮೂಲಕ ಆಗಬಹುದಾದ ದುರಂತಗಳನ್ನು ತಪ್ಪಿಸಬಹುದಾಗಿದೆ.
ಹೀಗಾಗಿ ಏಪ್ರಿಲ್ 1ರಿಂದಲೇ ಹೊಸ ನಿಯಮದ ಪ್ರಕಾರ 125 ಸಿಸಿ ಮೇಲ್ಪಟ್ಟ ಬೈಕ್ಗಳು ಮತ್ತು ಸ್ಕೂಟರ್ಗಳು ಎಬಿಎಸ್ ಹೊಂದಿದ್ದರೇ ಮಾತ್ರವೇ ನೋಂದಣಿಯಾಗಲಿದ್ದು, ಇದರಿಂದಲೂ ಸಹ ಬೈಕ್ಗಳ ಬೆಲೆಯಲ್ಲಿ ಕನಿಷ್ಠ ಅಂದ್ರು ರೂ.5 ಸಾವಿರದಿಂದ ರೂ. 8 ಸಾವಿರ ಬೆಲೆ ಹೆಚ್ಚಳವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.