Just In
- 34 min ago Kia: ಬಹುನಿರೀಕ್ಷಿತ ಕಿಯಾ ಕ್ಲಾವಿಸ್ ಮೈಕ್ರೋ ಎಸ್ಯುವಿ ಶೀಘ್ರದಲ್ಲೇ ಬಿಡಗಡೆ
- 12 hrs ago ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- 14 hrs ago Bajaj: ಮುಂಬರಲಿರುವ ಬಜಾಜ್ ಪಲ್ಸರ್ NS 400 ನಿರೀಕ್ಷಿತ ಬೆಲೆ, ವಿಶೇಷತೆಗಳು!
- 14 hrs ago Tata Punch: ಟಾಟಾ ಪಂಚ್ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
Don't Miss!
- Technology ಅಗ್ಗದ ದರದಲ್ಲಿ 5G ಫೋನ್ ಖರೀದಿಸಬೇಕೆ?..ಈ ಆಫರ್ ಮಿಸ್ ಮಾಡ್ಕೋಬೇಡಿ!
- News ಚಾಮರಾಜನಗರ ಜಿಲ್ಲೆಯ ಹಲವು ಗ್ರಾಮಗಳ ಜನರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ-ಇವರ ಬೇಡಿಕೆ ಏನು ಗೊತ್ತಾ?
- Movies ಅನುಷ್ಕಾ ಶೆಟ್ಟಿ ಬ್ಯಾಕ್ ಟು ಬ್ಯಾಕ್ ಯಾಕೆ ಸಿನಿಮಾ ಮಾಡ್ತಿಲ್ಲಾ? ನಿರ್ದೇಶಕರಿ ಕಂಡೀಷನ್ ಹಾಕ್ತಿದ್ದಾರಾ?
- Finance Bullet train: ಮೇಡ್ ಇನ್ ಇಂಡಿಯಾ ಬುಲೆಟ್ ಟ್ರೈನ್ಗೆ ಶೀಘ್ರ ಚಾಲನೆ, ಗಂಟೆಗೆ 250 ವೇಗ
- Lifestyle ಬೇಸಿಗೆಯಲ್ಲಿ ದಿನಾ ಎಳನೀರು ಕುಡಿದರೆ ಏನಾಗುತ್ತೆ? ಯಾವ ಸಮಯದಲ್ಲಿ ಎಳನೀರು ಕುಡಿಯಬೇಕು?
- Sports India's Squad For T20 World Cup: ಟಿ20 ವಿಶ್ವಕಪ್ಗೆ ಸಂಭಾವ್ಯ 20 ಸದಸ್ಯರ ಭಾರತ ತಂಡ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ ಬೈಕ್ ಖರೀದಿಸುವ ಗ್ರಾಹಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ಧಿ..!
ದೇಶದ ವಿವಿಧ ರಾಜ್ಯಗಳಲ್ಲಿ ದಿನಂಪ್ರತಿ ಸಾವಿರಾರು ಹೊಸ ವಾಹನಗಳು ರಸ್ತೆಗಿಳಿಯುತ್ತಿದ್ದು, ಅಷ್ಟೇ ಪ್ರಮಾಣದಲ್ಲಿ ಸಾರಿಗೆ ನಿಯಮಗಳ ಉಲ್ಲಂಘನೆ ಪ್ರಕರಣಗಳು ಕೂಡಾ ಹೆಚ್ಚುತ್ತಲೇ ಇವೆ. ಅದರಲ್ಲೂ ಹೆಲ್ಮೆಟ್ ಇಲ್ಲದ ಬೈಕ್ ಸವಾರಿಯು ಅತಿ ಹೆಚ್ಚು ರಸ್ತೆ ಅಪಘಾತಗಳಿಗೆ ಕಾರಣವಾಗುತ್ತಿದ್ದು, ಇದನ್ನು ತಪ್ಪಿಸುವ ಉದ್ದೇಶದಿಂದ ಕರ್ನಾಟಕದಲ್ಲಿ ಇದೀಗ ಹೊಸ ನಿಯಮವೊಂದನ್ನು ಜಾರಿಗೆ ತರಲಾಗುತ್ತಿದೆ.
ಅಪಘಾತಗಳ ಸಂದರ್ಭದಲ್ಲಿ ಬೈಕ್ ಸವಾರರಿಗೆ ಸುರಕ್ಷತೆ ಸಿಗಲಿ ಎನ್ನುವ ಉದ್ದೇಶದಿಂದ ಕಡ್ಡಾಯವಾಗಿ ಹೆಲ್ಮೆಟ್ ಬಳಕೆ ಮಾಡುವಂತೆ ದೇಶದ ಪ್ರತಿ ನಗರದಲ್ಲೂ ಸೂಕ್ತ ಕ್ರಮ ಕೈಗೊಳ್ಳುತ್ತಿರುವ ಟ್ರಾಫಿಕ್ ಪೊಲೀಸರು, ಹೆಲ್ಮೆಟ್ ಬಳಕೆ ಮಾಡದ ಸವಾರರನ್ನು ಹಿಡಿದು ದಂಡ ವಸೂಲಿ ಮಾಡುತ್ತಿದ್ದಾರೆ. ಆದರೂ ಕೂಡಾ ಹೆಲ್ಮೆಟ್ ಇಲ್ಲದ ಹಿನ್ನೆಲೆಯಲ್ಲಿ ಅಪಘಾತದಲ್ಲಿ ಜೀವ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ಹೊಸದಾಗಿ ಬೈಕ್ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ ನೀಡಿರುವ ರಾಜ್ಯ ಸಾರಿಗೆ ಇಲಾಖೆಯು ನಿಯಮ ಉಲ್ಲಂಘಿಸುವ ಬೈಕ್ ಸವಾರರ ವಿರುದ್ಧ ಮತ್ತಷ್ಟು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.
ಬಹುತೇಕ ಬೈಕ್ ಸವಾರರು ಸಾವಿರಾರು ರೂಪಾಯಿ ಕೊಟ್ಟು ಬೈಕ್ ಖರೀದಿ ಮಾಡಿದರೂ ಸಹ ಒಂದು ಉತ್ತಮವಾದ ಹೆಲ್ಮೆಟ್ ಖರೀದಿಸಲು ಹಿಂದೇಟು ಹಾಕುತ್ತಾರೆ. ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ರಸ್ತೆ ಬದಿಯಲ್ಲಿ ಮಾರಾಟ ಮಾಡಲಾಗುವ ಅಗ್ಗದ ಬೆಲೆಯ ಕಳಪೆ ಗುಣಮಟ್ಟದ ಹೆಲ್ಮೆಟ್ಗಳನ್ನ ಖರೀದಿಸುತ್ತಾರೆ.
ಆದ್ರೆ ಕಳೆಪೆ ಹೆಲ್ಮೆಟ್ಗಳು ಅಪಘಾತಗಳ ಸಂದರ್ಭದಲ್ಲಿ ಪ್ರಾಣ ಉಳಿಯುವ ಬದಲು ಪ್ರಾಣಕ್ಕೆ ಮತ್ತಷ್ಟು ಸಂಚಕಾರ ತರಲಿವೆ ಎಂಬುವುದು ಗೊತ್ತಿದ್ದರೂ ಸಹ ಅಗ್ಗದ ಬೆಲೆಯ ಹೆಲ್ಮೆಟ್ಗಳೇ ಹೆಚ್ಚು ಮಾರಾಟವಾಗುತ್ತಿದ್ದು, ಇಂತಹ ಪ್ರವೃತ್ತಿಯನ್ನು ತಪ್ಪಿಸಲು ಕರ್ನಾಟಕ ರಾಜ್ಯ ಸಾರಿಗೆ ಮತ್ತು ರಸ್ತೆ ಸುರಕ್ಷಾ ಆಯುಕ್ತರು ಹೊಸ ರೂಲ್ಸ್ ಒಂದನ್ನು ಕಡ್ಡಾಯವಾಗಿ ಜಾರಿಗೆ ತರುತ್ತಿದ್ದಾರೆ.
ಹೊಸದಾಗಿ ಬೈಕ್ ಖರೀದಿಸುವ ಗ್ರಾಹಕರಿಗೆ ಡೀಲರ್ಸ್ಗಳೇ ಉಚಿತವಾಗಿ 2 ಉತ್ತಮ ಗುಣಮಟ್ಟದ ಹೆಲ್ಮೆಟ್ಗಳನ್ನು ಕಡ್ಡಾಯವಾಗಿ ವಿತರಣೆ ಮಾಡುವಂತೆ ಸೂಚನೆ ನೀಡಲಾಗಿದ್ದು, ನಿಯಮ ಪಾಲಿಸದ ಡೀಲರ್ಸ್ ವಿರುದ್ಧ ಸೂಕ್ತ ಕೈಗೊಳ್ಳುವುದಾಗಿ ಸೂಚನೆ ನೀಡಲಾಗಿದೆ.
ಹಾಗೆಯೇ ಹೆಲ್ಮೆಟ್ ಬಳಕೆ ಮಾಡದ ದ್ವಿಚಕ್ರ ವಾಹನ ಸವಾರರ ವಿರುದ್ದವು ಸೂಕ್ತ ಕ್ರಮ ಕೈಗೊಳ್ಳಲು ಪ್ರತ್ಯೇಕ ತಂಡ ರಚಿಸಿ ವಿಶೇಷ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದ್ದು, ಸಾರಿಗೆ ನಿಯಮಗಳನ್ನು ಉಲ್ಲಂಘನೆ ಪ್ರಕರಣಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗುತ್ತಿದೆ.
ನೆರೆ ರಾಜ್ಯ ತಮಿಳುನಾಡಿನಲ್ಲೂ ಸಹ ಈಗಾಗಲೇ ಬೈಕ್ ಖರೀದಿಸುವ ಗ್ರಾಹಕರಿಗೆ ಉಚಿತವಾಗಿ ಹೆಲ್ಮೆಟ್ ವಿತರಣೆ ಮಾಡುವಂತೆ ಅಲ್ಲಿನ ಸಾರಿಗೆ ಮತ್ತು ಟ್ರಾಫಿಕ್ ಪೊಲೀಸ್ ಆಯುಕ್ತರು ಡೀಲರ್ಸ್ಗಳಿಗೆ ಸೂಚನೆ ನೀಡಿದ್ದು, ಹೆಲ್ಮೆಟ್ ಬಳಕೆ ಮಹತ್ವವನ್ನು ಅರಿಯಲು ಸಾರ್ವಜನಿಕ ಸ್ಥಳಗಳಲ್ಲಿ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ.
ಇನ್ನು ನಕಲಿ ಹೆಲ್ಮೆಟ್ ಬಳಸಬೇಡಿ ಎಂದು ಎಷ್ಟೇ ಮನವಿ ಮಾಡಿದ್ರು ಬಹುತೇಕ ಬೈಕ್ ಸವಾರರು ಮಾತ್ರ ಟ್ರಾಫಿಕ್ ಪೊಲೀಸರಿಂದ ದಂಡ ತಪ್ಪಿಸಿಕೊಳ್ಳಲು ಅಗ್ಗದ ಬೆಲೆಗೆ ಲಭ್ಯವಿರುವ ಹೆಲ್ಮೆಟ್ಗಳನ್ನೇ ಬಳಕೆ ಮಾಡುತ್ತಿರುವುದರಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದೆ.
MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?
ಇದರಿಂದ ವಿಭಿನ್ನ ರೀತಿಯಲ್ಲಿ ಕಾರ್ಯಾಚರಣೆ ಕೈಗೊಂಡಿರುವ ದೆಹಲಿ ಪೊಲೀಸರು ನಕಲಿ ಹೆಲ್ಮೆಟ್ ಧರಿಸುವ ಬೈಕ್ ಸವಾರರಿಗೆ ಸ್ಥಳದಲ್ಲೇ ದಂಡ ವಿಧಿಸಿ ಐಎಸ್ಐನಿಂದ ಅನುಮೋದನೆಗೊಂಡಿರುವ ಹೆಲ್ಮೆಟ್ಗಳನ್ನು ವಿತರಣೆ ಮಾಡುತ್ತಿದ್ದು, ನಕಲಿ ಹೆಲ್ಮೆಟ್ಗಳನ್ನು ಸ್ಥಳದಲ್ಲೇ ಒಡೆದು ಹಾಕಿ ಕಳಪೆ ಹೆಲ್ಮೆಟ್ ಅಸಲಿಯತ್ತನ್ನು ಬಹಿರಂಗಗೊಳಿ ವಾಹನ ಸವಾರರಿಗೆ ಜಾಗೃತಿ ಮೂಡಿಸುತ್ತಿದ್ದಾರೆ.
ಇದಲ್ಲದೇ ಮುಂದಿನ ಜೂನ್ 1ರಿಂದ ನೋಯ್ಡಾದಲ್ಲಿ 'ನೋ ಹೆಲ್ಮೆಟ್ ನೋ ಪೆಟ್ರೋಲ್' ಅಭಿಯಾನದಡಿ ಹೆಲ್ಮೆಟ್ ಹಾಕದ ಬೈಕ್ ಸವಾರರಿಗೆ ಪೆಟ್ರೋಲ್ ಹಾಕದಿರಲು ಪೆಟ್ರೋಲ್ ಬಂಕ್ ಮಾಲೀಕರು ನಿರ್ಧರಿಸಿದ್ದು, ಹೆಚ್ಚುತ್ತಿರುವ ರಸ್ತೆಗಳನ್ನು ತಡೆಯಲು ಅತ್ಯುತ್ತಮ ನಿರ್ಧಾರ ತೆಗೆದುಕೊಂಡಿದ್ದಾರೆ.
MOST READ: 78 ಬಾರಿ ಸಂಚಾರಿ ನಿಯಮ ಉಲ್ಲಂಘಿಸಿ ಸಿಕ್ಕಿಬಿದ್ದ ಕಾರು ಮಾಲೀಕನ ಕಥೆ ಹರೋಹರ
ಒಟ್ಟಿನಲ್ಲಿ ಹೆಲ್ಮೆಟ್ ಬಳಕೆ ಬಗೆಗೆ ಸಾಕಷ್ಟುಅಭಿಯಾನಗಳನ್ನು ಕೈಗೊಳ್ಳುತ್ತಿರುವ ಟ್ರಾಫಿಕ್ ಪೊಲೀಸರು ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳು ಇದೀಗ ಉಚಿತವಾಗಿಯೇ ಹೆಲ್ಮೆಟ್ ನೀಡುತ್ತಿದ್ದು, ಇನ್ನಾದ್ರೂ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಪ್ರಾಣದ ಜೊತೆಗೆ ದಂಡವನ್ನು ಸಹ ಉಳಿಸಿಕೊಳ್ಳಬೇಕಿದೆ.
Source: ET Auto