Just In
- 7 min ago ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
- 16 min ago ರೈತರ ವಿಶ್ವಾಸದೊಂದಿಗೆ 40 ಲಕ್ಷ ಟ್ರ್ಯಾಕ್ಟರ್ ಮಾರಾಟ ಮೈಲಿಗಲ್ಲು ಸಾಧಿಸಿದ ಮಹೀಂದ್ರಾ
- 55 min ago Bangaluru: ನಮ್ಮ ಯಾತ್ರಿ ಕ್ಯಾಬ್ ಸೇವೆ ಆರಂಭ.. ಎಷ್ಟಿದೆ ದರ?
- 2 hrs ago ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
Don't Miss!
- News Bengaluru Rain: ಸುದೀರ್ಘ ಕಾಯುವಿಕೆ ಅಂತ್ಯ: ಬೆಂಗಳೂರಿಗೆ ಎಂಟ್ರಿ ಕೊಟ್ಟ ಮಳೆ; ವಿಡಿಯೋ ನೋಡಿ
- Movies ತಾರಕ್ ಪೊನ್ನಪ್ಪ 'ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ' ಧಾರಾವಾಹಿಯಿಂದ ಹೊರಬಂದಿದ್ದೇಕೆ?
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ಡೌನ್ ವಿನಾಯಿತಿ: ಕಾರ್ಯಾಚರಣೆ ಪುನರಾರಂಭಕ್ಕೆ ಮುಂದಾದ ಹೋಂಡಾ ಮೋಟಾರ್ಸೈಕಲ್
ಕೋವಿಡ್ -19 ಕಾರಣಕ್ಕೆ ಜಾರಿಗೊಳಿಸಿದ ಲಾಕ್ಡೌನ್ನಲ್ಲಿ ಸ್ವಲ್ಪ ವಿನಾಯಿತಿ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಪುನರಾರಂಭಿಸುವುದಾಗಿ ಹೋಂಡಾ ಮೋಟಾರ್ಸೈಕಲ್ ಅಂಡ್ ಸ್ಕೂಟರ್ ಇಂಡಿಯಾ ಪ್ರಕಟಿಸಿದೆ.
ಹಂತ ಹಂತವಾಗಿ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗುವುದು ಎಂದು ಹೋಂಡಾ ಕಂಪನಿಯು ತಿಳಿಸಿದೆ. ಕಾರ್ಯಾಚರಣೆ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರ ಜೊತೆಗೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ಅನುಸರಿಸಲಾಗುವುದೆಂದು ಕಂಪನಿಯು ತಿಳಿಸಿದೆ.
ಹೋಂಡಾ ಕಂಪನಿಯ ಮಾರಾಟಗಾರರು ರೆಡ್ ಝೋನ್, ಆರೆಂಜ್ ಝೋನ್ ಹಾಗೂ ಗ್ರೀನ್ ಝೋನ್ಗಳಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸುತ್ತಾರೆ ಎಂದು ಹೋಂಡಾ ಹೇಳಿದೆ. 2020ರ ಮೇ 1ರಂದು ಹೋಂಡಾ ಮೋಟಾರ್ಸೈಕಲ್ ಮತ್ತು ಸ್ಕೂಟರ್ ಇಂಡಿಯಾದ ಹೊಸ ಅಧ್ಯಕ್ಷ, ಸಿಇಒ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿ ಅಟ್ಸುಶಿ ಒಗಾಟಾ ಅಧಿಕಾರ ವಹಿಸಿಕೊಂಡಿದ್ದಾರೆ.
MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ
ಕರೋನಾ ವೈರಸ್ನಿಂದ ಉಂಟಾಗಿರುವ ನಷ್ಟವನ್ನು ಸರಿಪಡಿಸುವುದು ಹೊಸ ಅಧ್ಯಕ್ಷರ ಮೊದಲ ಆದ್ಯತೆಯಾಗಿದೆ. ಈ ಸಂಕಷ್ಟದ ಸಮಯದಲ್ಲಿ ಹೋಂಡಾ ಕಂಪನಿಯು ತನ್ನ ಡೀಲರ್ಗಳ, ಪಾಲುದಾರರ ಹಾಗೂ ಗ್ರಾಹಕರ ಸುರಕ್ಷತೆಗೆ ಆದ್ಯತೆ ನೀಡುತ್ತಿದೆ.
ಈ ಬಗ್ಗೆ ಮಾತನಾಡಿರುವ ಹೋಂಡಾ ಕಂಪನಿಯ ಸೇಲ್ಸ್ ಹಾಗೂ ಮಾರ್ಕೆಟಿಂಗ್ ನಿರ್ದೇಶಕರಾದ ಯದ್ವಿಂದರ್ಸಿಂಗ್ ಗುಲೇರಿಯಾರವರು, ಈ ಸಂಕಷ್ಟದ ಸಂದರ್ಭದಲ್ಲಿ ಹೋಂಡಾ ದ್ವಿಚಕ್ರ ವಾಹನ ಕಂಪನಿಯು ಭಾರತದಲ್ಲಿರುವ ತನ್ನ ಡೀಲರ್ಗಳಿಗೆ ಹಣಕಾಸಿನ ಪ್ಯಾಕೇಜ್ ನೀಡಲಿದೆ ಎಂದು ತಿಳಿಸಿದರು.
MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್
ಹೆಚ್ಚುವರಿ 19 ದಿನಗಳ ಬಡ್ಡಿಯನ್ನು ಪಾವತಿಸಿ ಬಿಎಸ್ 6 ದ್ವಿಚಕ್ರ ವಾಹನ ಷೇರುಗಳ ಮೇಲಿನ ಒಟ್ಟು 40 ದಿನಗಳ ಬಡ್ಡಿ ವೆಚ್ಚವನ್ನು ಭರಿಸಲು ನಾವು ನಿರ್ಧರಿಸಿದ್ದೇವೆ. ಈ ಪ್ಯಾಕೇಜ್ ನಮ್ಮ ಡೀಲರ್ಗಳ ವ್ಯವಹಾರ ಮುಂದುವರಿಕೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವ ವಿಶ್ವಾಸವಿದೆ ಎಂದು ಅವರು ಹೇಳಿದರು.
ಆರ್ಥಿಕ ವ್ಯವಸ್ಥೆಯನ್ನು ಸರಿಪಡಿಸಲು ಸರ್ಕಾರವು ನೀಡಿರುವ ವಿನಾಯಿತಿಯಲ್ಲಿ ಎಚ್ಚರಿಕೆಯಿಂದ ಹೆಜ್ಜೆಯಿಡುವುದಾಗಿ ಕಂಪನಿ ತಿಳಿಸಿದೆ. ಗ್ರೀನ್ ಝೋನ್ ಹಾಗೂ ಆರೆಂಜ್ ಝೋನ್ಗಳಲ್ಲಿ ಕಂಪನಿಯು ಎಚ್ಚರಿಕೆಯಿಂದ ತನ್ನ ವ್ಯವಹಾರವನ್ನು ಆರಂಭಿಸುತ್ತಿದೆ.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ಹೋಂಡಾ ಕಂಪನಿಯು ದೇಶಾದ್ಯಂತವಿರುವ ತನ್ನ ಔಟ್ಲೆಟ್ಗಳಲ್ಲಿ ಗ್ರಾಹಕರಿಗೆ ಸುರಕ್ಷತೆ ನೀಡಲು ಮುಂದಾಗಿದೆ. ಈ ಕಾರಣಕ್ಕೆ ಹೋಂಡಾ ಕಂಪನಿಯ ಸಿಎಸ್ಆರ್ ವಿಂಗ್ ಆದ ಹೋಂಡಾ ಇಂಡಿಯಾ ಫೌಂಡೇಶನ್, ಹೋಂಡಾ ಎಂಜಿನ್ ಹೊಂದಿರುವ 800 ಹೈ ಪ್ರೆಶರ್ ಬ್ಯಾಕ್ಪ್ಯಾಕ್ ಸ್ಪ್ರೇಯರ್ ಕಿಟ್ಗಳನ್ನು ಕರ್ನಾಟಕ, ಹರಿಯಾಣ, ರಾಜಸ್ಥಾನ ಹಾಗೂ ಗುಜರಾತ್ಗಳಲ್ಲಿ ವಿತರಿಸಿದೆ.
ಬ್ಯಾಕ್ಪ್ಯಾಕ್ ಸ್ಪ್ರೇಯರ್ಗಳ ಹೊರತಾಗಿ ಹೋಂಡಾ ಇಂಡಿಯಾ ಫೌಂಡೇಶನ್ ಗುಜರಾತ್ ಹಾಗೂ ಹರಿಯಾಣದಲ್ಲಿರುವ ಕಾರ್ಮಿಕರು ಹಾಗೂ ಹಿಂದುಳಿದ ಕುಟುಂಬಗಳಿಗೆ ಪ್ರತಿದಿನ 1,000 ಆಹಾರ ಪ್ಯಾಕೆಟ್ಗಳನ್ನು ವಿತರಿಸುತ್ತಿದೆ.