Just In
- 1 hr ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 3 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 4 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 4 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Movies Swathi Royal; ಒಂಬತ್ತನೇ ಕ್ಲಾಸ್ ನಲ್ಲೇ ಲವ್ವಲ್ಲಿ ಬಿದ್ದ ಅಮೃತಧಾರೆ ಅಪರ್ಣಾ..!
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರೋನಾ ಎಫೆಕ್ಟ್- ಡೀಲರ್ಸ್ಗೆ ನೀಡಲಾದ ಪರಿಹಾರ ಕ್ರಮಗಳನ್ನು ಮುಂದುವರಿಸಲಿದೆ ಹೋಂಡಾ
ಮಹಾಮಾರಿ ಕರೋನಾ ವೈರಸ್ ತಡೆಗಾಗಿ ಕೇಂದ್ರ ಸರ್ಕಾರವು ದೇಶಾದ್ಯಂತ 21 ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಿರುವುದರಿಂದ ವಾಣಿಜ್ಯ ಚಟುವಟಿಕೆಗಳು ಸಂಪೂರ್ಣವಾಗಿ ಬಂದ್ ಆಗಿದ್ದು, ಆಟೋ ಉತ್ಪಾದನಾ ವಲಯವು ಲಾಕ್ ಡೌನ್ನಿಂದಾಗಿ ಭಾರೀ ಪ್ರಮಾಣದ ನಷ್ಟ ಅನುಭವಿಸುತ್ತಿದೆ.
ಹೊಸ ವಾಹನಗಳ ಉತ್ಪಾದನೆ ಮತ್ತು ಮಾರಾಟವನ್ನು ಸಂಪೂರ್ಣ ಬಂದ್ ಮಾಡಿರುವುದರಿಂದ ಉತ್ಪಾದನಾ ಕಂಪನಿಗಳಿಂತ ಮಾರಾಟಗಾರರು ಭಾರೀ ಪ್ರಮಾಣದ ನಷ್ಟ ಅನುಭವಿಸುತ್ತಿದ್ದು, ಸಂಕಷ್ಟದ ಸಮಯದಲ್ಲೂ ವಾಹನ ಕಂಪನಿಗಳು ಮಾರಾಟಗಾರರ ಕೈ ಹಿಡಿದಿವೆ. ಹೌದು, ವಾಹನ ಮಾರಾಟ ಪ್ರಕ್ರಿಯೆ ಬಂದ್ ಆಗಿದ್ದರಿಂದ ಆರ್ಥಿಕ ಸಂಕಷ್ಟದಲ್ಲಿರುವ ಮಾರಾಟಗಾರರಿಗೆ ಹಣಕಾಸು ನೆರವು ಮಾಡಿರುವ ವಿವಿಧ ಆಟೋ ಕಂಪನಿಗಳು ರೂ.1800 ಕೋಟಿ ಪರಿಹಾರ ಘೋಷಣೆ ಮಾಡಿವೆ.
ಪರಿಹಾರದ ಹಣದಲ್ಲಿ ಮಾರಾಟ ಮಳಿಗೆಗಳ ನಿರ್ವಹಣಾ ವೆಚ್ಚ ಮತ್ತು ಸಿಬ್ಬಂದಿ ವೇತನದ ಖರ್ಚು ಬಗೆಹರಿಯಲಿದ್ದು, ಮಾರಾಟವಾಗದೆ ಉಳಿದಿರುವ ಬಿಎಸ್-4 ಸ್ಟಾಕ್ ಸಾಗಾಣಿಕೆಯ ವೆಚ್ಚವನ್ನು ಸಹ ಆಟೋ ಕಂಪನಿಗಳೇ ಭರಿಸಲಿವೆ.
MOST READ: ವಿವಾಹ ವಾರ್ಷಿಕೋತ್ಸವದ ಸಂಭ್ರಮಕ್ಕಾಗಿ ದುಬಾರಿ ಬೆಲೆಯ ಸರ್ಪ್ರೈಸ್ ಗಿಫ್ಟ್
ಇನ್ನು ಒಂದು ಹೆಜ್ಜೆ ಮುಂದೆ ಹೋಗಿರುವ ಹೋಂಡಾ ಮೋಟಾರ್ಸೈಕಲ್ ಕಂಪನಿಯು ಡೀಲರ್ಸ್ಗೆ ನೀಡಲಾಗಿರುವ ಪರಿಹಾರದ ಕ್ರಮುಗಳನ್ನು ಪರಿಸ್ಥಿತಿ ತಿಳಿಯಾಗುವ ತನಕವು ಮುಂದುವರಿಸುವುದಾಗಿ ಘೋಷಣೆ ಮಾಡಿದ್ದು, ಡೀಲರ್ಸ್ಗಳ ಆರ್ಥಿಕ ನಷ್ಟವನ್ನು ಸರಿದೂಗಿಸಲು ಪರಿಹಾರ ಕ್ರಮಗಳು ಅಗತ್ಯವಾಗಿವೆ.
ಇನ್ನು ಬಿಎಸ್-4 ವಾಹನಗಳು ಆಟೋ ಕಂಪನಿಗಳು ಭಾರೀ ಪ್ರಮಾಣದ ನಷ್ಟ ಉಂಟು ಮಾಡಲಿದ್ದು, ಏಪ್ರಿಲ್ 1ರಿಂದ ಬಿಎಸ್-6 ವಾಹನಗಳ ಮಾರಾಟವು ಕಡ್ಡಾಯವಾಗಿ ಜಾರಿ ಮಾಡಿರುವುದು ವಾಹನ ಉತ್ಪಾದನಾ ಕಂಪನಿಗಳಿಗೆ ಹಳೆಯ ಸ್ಟಾಕ್ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಬಿಎಸ್-4 ವಾಹನಗಳನ್ನು ಬ್ಯಾನ್ ಮಾಡಲಾಗಿದ್ದರೂ ಕೂಡಾ ಪರಿಸ್ಥಿತಿಗೆ ಅನುಗುಣವಾಗಿ ಸದ್ಯಕ್ಕೆ ಕೆಲವು ವಿನಾಯ್ತಿಗಳನ್ನು ನೀಡಿರುವ ಸುಪ್ರೀಂಕೋರ್ಟ್ ಹಲವು ಷರತ್ತುಗಳನ್ನು ವಿಧಿಸಿದೆ.
MOST READ: ನಟ ವಿಕ್ರಮ್ ಗಾಗಿ ತಯಾರಾಯ್ತು ವಿಶೇಷ ಕಾರವಾನ್
2018ರಲ್ಲೇ 2020ರ ಏಪ್ರಿಲ್ 1ರಿಂದ ಬಿಎಸ್-4 ವಾಹನಗಳ ಮಾರಾಟ ಮತ್ತು ನೋಂದಣಿ ಪ್ರಕ್ರಿಯೆಯನ್ನು ಬ್ಯಾನ್ ಮಾಡಿದ್ದ ಸುಪ್ರೀಂಕೋರ್ಟ್ ಕೊನೆಯ ಕ್ಷಣದಲ್ಲಿ ಬ್ಯಾನ್ ಅಸ್ತ್ರವನ್ನು ಸಡಿಲಿಸಿದ್ದು, ಕರೋನಾ ವೈರಸ್ ತಡೆ ಉದ್ದೇಶದಿಂದ ದೇಶಾದ್ಯಂತ ಜಾರಿಗೊಳಿಸಿರುವ ಲಾಕ್ಡೌನ್ ಹಿನ್ನಲೆಯಲ್ಲಿ ಆಟೋ ಕಂಪನಿಗಳಿಗೆ ಕೆಲವು ವಿನಾಯ್ತಿಗಳನ್ನು ನೀಡಿದೆ.
ಬಿಎಸ್-6 ಜಾರಿಗೆ ಮುನ್ನ ಕರೋನಾ ವೈರಸ್ ಭೀತಿ ಹೆಚ್ಚಿದ್ದರಿಂದ ಎಲ್ಲಾ ಮಾದರಿಯ ವಾಣಿಜ್ಯ ಚಟುವಟಿಕೆಗಳನ್ನು ಬಂದ್ ಮಾಡಿ ಲಾಕ್ ಡೌನ್ ಹೇರಲಾಗಿತ್ತು. ಕೊನೆಯ ಗಳಿಗೆಯಲ್ಲಿ ಮಾರಾಟವಾಗಬೇಕಿದ್ದ ಲಕ್ಷಾಂತರ ಬಿಎಸ್-4 ವಾಹನಗಳು ಮಾರಾಟವಾಗದೆ ಹಾಗೆಯೇ ಉಳಿದಿವೆ.
MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕಾಗಿ ರೂ.100 ಕೋಟಿ ದೇಣಿಗೆ ನೀಡಿದ ಬಜಾಜ್ ಗ್ರೂಪ್
ಇದರಿಂದ ಆಟೋ ಕಂಪನಿಗಳಿಗೆ ವಿನಾಯ್ತಿಯೊಂದಿಗೆ ಕೆಲವು ಷರತ್ತುಗಳನ್ನು ವಿಧಿಸಿ ಮಾರಾಟಕ್ಕೆ ಅವಕಾಶ ನೀಡಿರುವ ಸುಪ್ರೀಂಕೋರ್ಟ್, ಬ್ಯಾನ್ನಿಂದಾಗುವ ನಷ್ಟ ತಡೆಗೆ ಸಹಕರಿಸಿದೆ.
ಕರೋನಾ ವೈರಸ್ ಹಿನ್ನಲೆಯಲ್ಲಿ ಲಾಕ್ ಡೌನ್ ಮಾಡಿರುವ ವಿಚಾರವನ್ನು ಮುಂದಿಟ್ಟುಕೊಂಡು ವಿನಾಯ್ತಿ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿರುವ ಇಂಡಿಯನ್ ಆಟೋ ಡೀಲರ್ಸ್ ಅಸೋಶಿಯೇಷನ್ ಸಂಸ್ಥೆಗೆ ಸುಪ್ರೀಂಕೋರ್ಟ್ ಹಲವು ಷರತ್ತುಗಳನ್ನು ವಿಧಿಸಿ ಮಾರಾಟ ಅವಧಿಯನ್ನು ವಿಸ್ತರಣೆ ಮಾಡಿದೆ.
MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಭಾರೀ ಪ್ರಮಾಣದ ದೇಣಿಗೆ ನೀಡಿದ ಟಿವಿಎಸ್ ಮೋಟಾರ್
ಏಪ್ರಿಲ್ 1ರಿಂದಲೇ ನಿಷೇಧಗೊಳ್ಳಬೇಕಿದ್ದ ಬಿಎಸ್-4 ವಾಹನಗಳ ಮಾರಾಟ ಪ್ರಕ್ರಿಯೆಯನ್ನು ಏಪ್ರಿಲ್ 24ರ ತನಕ ವಿಸ್ತರಣೆ ಮಾಡಲಾಗಿದ್ದು, ಪ್ರತಿ ಆಟೋ ಕಂಪನಿಗಳು ಸ್ಟಾಕ್ ಇರುವ ಶೇ.10 ರಷ್ಟು ಪ್ರಮಾಣದ ಬಿಎಸ್-4 ವಾಹನಗಳನ್ನು ಮಾತ್ರವೇ ಮಾರಾಟ ಮಾಡಬೇಕು ಎಂದಿದೆ.