Just In
- 4 min ago ಎಲೆಕ್ಟ್ರಿಕ್ ಅವತಾರದಲ್ಲಿ ಬರಲಿದೆ ಹೋಂಡಾ ಆಕ್ಟಿವಾ: ಎಲೆಕ್ಟ್ರಿಕ್ ಸ್ಕೂಟರ್ಗಳ ರಾಜ ಆಗುತ್ತಾ?
- 5 min ago ಪ್ರೇರಣಾತ್ಮಕ ಕಥೆ: ಮನೆ ಕೆಲಸದಾಕೆಗೆ 'ಸೈಕಲ್' ಖರೀದಿಸಲು ಸಹಾಯ ಮಾಡಿದ ಮಾಲೀಕ.. ವಿಡಿಯೋ ವೈರಲ್
- 1 hr ago ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- 2 hrs ago ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
Don't Miss!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- News Lok Sabha Election 2024: ಮತದಾರರನ್ನು ಆಕರ್ಷಿಸಲು ಚುನಾವಣಾ ಆಯೋಗದ ವಿಭಿನ್ನ ಪ್ರಯತ್ನ
- Movies ನಿತೇಶ್ ತಿವಾರಿ 'ರಾಮಾಯಣ' ಚಿತ್ರದಲ್ಲಿ ರಣ್ಬೀರ್ ಅಲ್ಲ, ಯಶ್ ಹೀರೋ? ಏನಿದು ಟ್ವಿಸ್ಟ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೋವಿಡ್ 19: ವೈರಸ್ ವಿರುದ್ಧದ ಹೋರಾಟಕ್ಕಾಗಿ ರೂ. 61 ಲಕ್ಷ ದೇಣಿಗೆ ನೀಡಿದ ಯಮಹಾ
ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಈಗಾಗಲೇ ಹಲವು ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಹಣಕಾಸಿನ ನೆರವು ಘೋಷಣೆ ಮಾಡಿರುವುದಲ್ಲದೇ ಅಗತ್ಯ ವೈದ್ಯಕೀಯ ಉಪಕರಣಗಳನ್ನು ಅಭಿವೃದ್ದಿಪಡಿಸುತ್ತಿದ್ದು, ಯಮಹಾ ಇಂಡಿಯಾ ಕಂಪನಿಯು ಕೂಡಾ ರೂ.61.50 ಲಕ್ಷ ದೇಣಿಯನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಸಹಾಯಹಸ್ತ ಚಾಚಿದೆ.
ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಈಗಾಗಲೇ ಹಲವು ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಹಣಕಾಸಿನ ನೆರವು ಘೋಷಣೆ ಮಾಡಿರುವುದಲ್ಲದೇ ಅಗತ್ಯ ವೈದ್ಯಕೀಯ ಉಪಕರಣಗಳನ್ನು ಅಭಿವೃದ್ದಿಪಡಿಸುತ್ತಿದ್ದು, ಯಮಹಾ ಇಂಡಿಯಾ ಕಂಪನಿಯು ಕೂಡಾ ರೂ.61.50 ಲಕ್ಷ ದೇಣಿಯನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಸಹಾಯಹಸ್ತ ಚಾಚಿದೆ.
ಯಹಾಮ ಕಂಪನಿಯು ತನ್ನ ಉದ್ಯೋಗಿಗಳ ಒಂದು ದಿನದ ವೇತನವನ್ನು ಸೇರಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ದೇಣಿಗೆ ನೀಡಿದ್ದು, ರೂ.61.50 ಲಕ್ಷ ದೇಣಿಗೆಯಲ್ಲಿ ಉತ್ತರಪ್ರದೇಶ ಸರ್ಕಾರಕ್ಕೆ ರೂ.25 ಲಕ್ಷ, ತಮಿಳುನಾಡು ಸರ್ಕಾರಕ್ಕೆ ರೂ.25 ಲಕ್ಷ ಮತ್ತು ರೂ.11.50 ಲಕ್ಷ ಹಣವನ್ನು ಪ್ರಧಾನಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗಿದೆ.
ತಮಿಳುನಾಡು ಮತ್ತು ಉತ್ತರಪ್ರದೇಶದಲ್ಲಿ ಬೈಕ್ ಉತ್ಪಾದನಾ ಘಟಕಗಳನ್ನು ಹೊಂದಿರುವುದರಿಂದ ಆ ರಾಜ್ಯಗಳಿಗೆ ತಲಾ ರೂ. 25 ಲಕ್ಷ ದೇಣಿಗೆ ನೀಡಿರುವ ಯಮಹಾ ಕಂಪನಿಯು ಕೇಂದ್ರ ಸರ್ಕಾರಕ್ಕೆ ರೂ. 11.50 ಲಕ್ಷ ದೇಣಿಗೆ ನೀಡಿ ವೈರಸ್ ವಿರುದ್ಧ ಹೋರಾಟಕ್ಕೆ ಶಕ್ತಿ ತುಂಬಿದೆ.
ಇನ್ನು ಮಹಾಮಾರಿ ಕರೋನಾ ವೈರಸ್ನಿಂದಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಆರ್ಥಿಕ ಪರಿಸ್ಥಿತಿಯು ಶೋಚನೀಯ ಸ್ಥಿತಿ ತಲುಪಿದ್ದು, ಆಟೋ ಉತ್ಪಾದನಾ ಕಂಪನಿಗಳು ತಮ್ಮ ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆಗೆ ಕೈಜೋಡಿಸುವ ಮೂಲಕ ದೇಣಿಗೆಯ ಜೊತೆಗೆ ವೈದ್ಯಕೀಯ ಉಪಕರಣಗಳನ್ನು ಸಹ ಒದಗಿಸುತ್ತಿವೆ.
MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..
ಕರೋನಾ ವೈರಸ್ ವಿರುದ್ಧ ಹೋರಾಟಕ್ಕಾಗಿ ಆರಂಭಿಸಲಾಗಿರುವ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಈಗಾಗಲೇ ಭಾರೀ ಪ್ರಮಾಣದ ನೆರವು ಹರಿದು ಬಂದಿದ್ದು, ಉದ್ಯಮಿಗಳು, ಚಿತ್ರ ನಟರು, ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರು ಸಹ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಕರೋನಾ ವಿರುದ್ಧ ಸರ್ಕಾರದ ಹೋರಾಟಕ್ಕೆ ಶಕ್ತಿ ತುಂಬಿದ್ದಾರೆ.
ಅದರಲ್ಲೂ ಆಟೋ ಉತ್ಪಾದನಾ ಕಂಪನಿಗಳು ಕರೋನಾ ವಿರುದ್ದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆ ನಿಂತಿರುವುದಲ್ಲದೆ ವೈದ್ಯಕೀಯ ಉಪಕರಣಗಳ ತಯಾರಿಕೆಗೆ ಚಾಲನೆ ನೀಡುವ ಮೂಲಕ ಸರ್ಕಾರಗಳಿಗೆ ಶಕ್ತಿ ತುಂಬಿವೆ.
MOST READ: ಲಾಕ್ಡೌನ್ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ
ಆರೋಗ್ಯ ಕೇಂದ್ರಗಳಿಗೆ ಅಗತ್ಯವಿರುವ ಟೆಸ್ಟಿಂಗ್ ಕಿಟ್, ವೆಂಟಿಲೇಟರ್, ಪಿಪಿಇ ಕಿಟ್, ಹ್ಯಾಂಡ್ ಸ್ಯಾನಿಟೈಜರ್, ಮಾಸ್ಕ್, ಫೇಸ್ಶಿಲ್ಡ್ ಸೌಲಭ್ಯಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ವೈರಸ್ ವಿರುದ್ದದ ಹೋರಾಟದಲ್ಲಿ ಪಾತ್ರವಹಿಸುತ್ತಿವೆ.