ತೀವ್ರ ನಿಗಾ ಘಟಕದಲ್ಲಿ ಹೆಮ್ಮೆಯ ಕನ್ನಡಿಗ ಸಿ ಎಸ್ ಸಂತೋಷ್

ನಿನ್ನೆ ಡಕಾರ್ ರ‍್ಯಾಲಿಯ ನಾಲ್ಕನೇ ಹಂತದಲ್ಲಿ ಅಪಘಾತಕ್ಕೀಡಾಗಿದ್ದ ಭಾರತೀಯ ರೈಡರ್ ಕನ್ನಡಿಗ ಸಿ.ಎಸ್.ಸಂತೋಷ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಅಪಘಾತಕ್ಕೀಡಾದಾಗ ಹಸ್ಕ್ ವರ್ನಾ ತಂಡದ ರೈಡರ್ ಅವರಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ತೀವ್ರ ನಿಗಾ ಘಟಕದಲ್ಲಿ ಹೆಮ್ಮೆಯ ಕನ್ನಡಿಗ ಸಿ ಎಸ್ ಸಂತೋಷ್

2021ರ ಡಕಾರ್ ರ‍್ಯಾಲಿ ಕಳೆದ ಭಾನುವಾರದಿಂದ ಆರಂಭವಾಗಿದೆ. ಈ ವರ್ಷದ ರ‍್ಯಾಲಿಯಲ್ಲಿ ಭಾರತದ ಸವಾರರು ಅದ್ಭುತ ಪ್ರದರ್ಶನ ನೀಡಿದ್ದಾರೆ. ನಿನ್ನೆ ಈ ರ‍್ಯಾಲಿಯ ನಾಲ್ಕನೇ ಹಂತದ ಸ್ಪರ್ಧೆಗಳು ನಡೆಯುತ್ತಿದ್ದವು. ಈ ಸ್ಪರ್ಧೆಯಲ್ಲಿ ಹೀರೋ ಮೋಟೋಸ್ಪೋರ್ಟ್ ತಂಡವನ್ನು ಸಿಎಸ್ ಸಂತೋಷ್ ಪ್ರತಿನಿಧಿಸುತ್ತಿದ್ದರು.

ತೀವ್ರ ನಿಗಾ ಘಟಕದಲ್ಲಿ ಹೆಮ್ಮೆಯ ಕನ್ನಡಿಗ ಸಿ ಎಸ್ ಸಂತೋಷ್

ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವೇಳೆ ಅನಿರೀಕ್ಷಿತವಾಗಿ ಅಪಘಾತಕ್ಕೀಡಾದರು. ಈ ಅಪಘಾತದಲ್ಲಿ ಅವರ ತಲೆಗೆ ಗಾಯ ಪೆಟ್ಟಾಗಿದೆ. ಅವರನ್ನು ಚಿಕಿತ್ಸೆಗೆ ರಿಯಾದ್‌ನ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿಡಲಾಗಿದೆ.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ತೀವ್ರ ನಿಗಾ ಘಟಕದಲ್ಲಿ ಹೆಮ್ಮೆಯ ಕನ್ನಡಿಗ ಸಿ ಎಸ್ ಸಂತೋಷ್

ಅಪಘಾತಕ್ಕೀಡಾದಾಗ ಸಂತೋಷ್ ರವರಿಗೆ ಪ್ರಥಮ ಚಿಕಿತ್ಸೆ ನೀಡಿದ ಹಸ್ಕ್ ವರ್ನಾ ತಂಡದ ಪಾಲ್ ಸ್ಪ್ರಿಂಗ್ಸ್, ಅಪಘಾತ ನಡೆದ ಬಗ್ಗೆ ರ‍್ಯಾಲಿಮ್ಯಾನಿಯಾಕ್ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.

ತೀವ್ರ ನಿಗಾ ಘಟಕದಲ್ಲಿ ಹೆಮ್ಮೆಯ ಕನ್ನಡಿಗ ಸಿ ಎಸ್ ಸಂತೋಷ್

ಸಂತೋಷ್ ಹಾಗೂ ಹಸ್ಕ್ ವರ್ನಾ ತಂಡದ ಮತ್ತೊಬ್ಬ ಸದಸ್ಯ ಮಾರುಷಿಯೊ ಗೆರಿನಿ ನಡುವೆ ರ‍್ಯಾಲಿ ಆರಂಭವಾದ 135 ಕಿ.ಮೀ ದೂರದಲ್ಲಿ ಸ್ಥಳೀಯ ಸಮಯ ಬೆಳಿಗ್ಗೆ 11.45ರ ವೇಳೆಗೆ ಅಪಘಾತ ಸಂಭವಿಸಿದೆ ಎಂದು ಈ ಮಾಹಿತಿಯಲ್ಲಿ ಹೇಳಲಾಗಿದೆ.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ತೀವ್ರ ನಿಗಾ ಘಟಕದಲ್ಲಿ ಹೆಮ್ಮೆಯ ಕನ್ನಡಿಗ ಸಿ ಎಸ್ ಸಂತೋಷ್

ಅಪಘಾತದ ನಂತರ ಮಾರುಷಿಯೊ ಗೆರಿನಿ ತಕ್ಷಣವೇ ಮೇಲೆ ಎದ್ದಿದ್ದಾರೆ. ಆದರೆ ಸಂತೋಷ್ ಮೇಲೆಳಲಿಲ್ಲ. ತಕ್ಷಣವೇ ರಕ್ಷಣಾ ದಳಕ್ಕೆ ಮಾಹಿತಿ ನೀಡಲಾಗಿದೆ. ನಂತರ ಸಂತೋಷ್ ಅವರ ಹೃದಯ ಬಡಿತವನ್ನು ಚೇತರಿಸಿಕೊಳ್ಳಲು ಪ್ರಥಮ ಚಿಕಿತ್ಸೆ ನೀಡಲಾಗಿದೆ.

ತೀವ್ರ ನಿಗಾ ಘಟಕದಲ್ಲಿ ಹೆಮ್ಮೆಯ ಕನ್ನಡಿಗ ಸಿ ಎಸ್ ಸಂತೋಷ್

ಮುಂದಿನ 15 ನಿಮಿಷಗಳಲ್ಲಿ 3 ಹೆಲಿಕಾಪ್ಟರ್‌ಗಳಲ್ಲಿ ರಕ್ಷಣಾ ತಂಡವು ಅಲ್ಲಿಗೆ ಆಗಮಿಸಿದೆ. ಅವರು ಸಂತೋಷ್ ರವರನ್ನು ಪರೀಕ್ಷಿಸಿದಾಗ ಸಂತೋಷ್ ರವರ ಹೃದಯ ಬಡಿತವಿತ್ತು ಎಂದು ಪಾಲ್ ಸ್ಪ್ರಿಂಗ್ಸ್ ಮಾಹಿತಿ ನೀಡಿದ್ದಾರೆ.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ತೀವ್ರ ನಿಗಾ ಘಟಕದಲ್ಲಿ ಹೆಮ್ಮೆಯ ಕನ್ನಡಿಗ ಸಿ ಎಸ್ ಸಂತೋಷ್

ನಂತರ ಸಂತೋಷ್ ರವರನ್ನು ಅಲ್-ದುವಾತಿಮಿಯ ವೈದ್ಯಕೀಯ ಶಿಬಿರಕ್ಕೆ ಕರೆದೊಯ್ಯಲಾಯಿತು. ತಲೆಗೆ ಪೆಟ್ಟು ಬಿದ್ದಿದ್ದ ಕಾರಣ ಅವರನ್ನು ರಿಯಾದ್‌ನ ಸೌದಿ ಜರ್ಮನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ತೀವ್ರ ನಿಗಾ ಘಟಕದಲ್ಲಿ ಹೆಮ್ಮೆಯ ಕನ್ನಡಿಗ ಸಿ ಎಸ್ ಸಂತೋಷ್

ಸಂತೋಷ್ ರವರಿಗೆ ಅರಿವಳಿಕೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯಕ್ಕೆ ಅವರನ್ನು ಕೃತಕ ಕೋಮಾದಲ್ಲಿ ಇರಿಸಲಾಗಿದೆ. ಇಂದು ಸ್ಕ್ಯಾನಿಂಗ್'ಗಳನ್ನು ನಡೆಸಲಾಗುವುದು ಎಂದು ತಿಳಿದು ಬಂದಿದೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ತೀವ್ರ ನಿಗಾ ಘಟಕದಲ್ಲಿ ಹೆಮ್ಮೆಯ ಕನ್ನಡಿಗ ಸಿ ಎಸ್ ಸಂತೋಷ್

ಗಾಯದ ಸ್ವರೂಪ ತಿಳಿದ ನಂತರ ಚಿಕಿತ್ಸೆ ನೀಡಲಾಗುವುದು ಎಂದು ವರದಿಗಳು ತಿಳಿಸಿವೆ. ಮೋಟಾರ್ ರೇಸಿಂಗ್ ಅಭಿಮಾನಿಗಳು ಹಾಗೂ ಕ್ರೀಡಾಭಿಮಾನಿಗಳು ಸಿ ಎಸ್ ಸಂತೋಷ್ ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

Most Read Articles

Kannada
English summary
Hero Motosport rider C S Santosh undergoing treatment in Riyadh hospital. Read in Kannada.
Story first published: Thursday, January 7, 2021, 13:07 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X