Just In
- 12 hrs ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 13 hrs ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 14 hrs ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 14 hrs ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
Don't Miss!
- News Gold Price: ಇಂದು ಮತ್ತಷ್ಟು ಹೆಚ್ಚಾದ ಬಂಗಾರದ ಬೆಲೆ: ಬೆಳ್ಳಿಯೂ ಬಲು ದುಬಾರಿ
- Technology AI Camera: ಎಐ ಕ್ಯಾಮೆರಾ ಆಯ್ಕೆ ಇರುವ ಅತ್ಯುತ್ತಮ ಸ್ಮಾರ್ಟ್ಫೋನ್ಗಳಿವು! ಬೆಲೆ ಎಷ್ಟು ?
- Sports IPL 2024: RCB vs KKR ಹೆಡ್-ಟು-ಹೆಡ್ ದಾಖಲೆ, ಪಿಚ್ ವರದಿ; ಚಿನ್ನಸ್ವಾಮಿಯಲ್ಲಿ ಗೆಲುವು ಯಾರಿಗೆ?
- Finance ವಿವಿಧ ರಾಜ್ಯಗಳ ನರೇಗಾ ಕಾರ್ಮಿಕರ ವೇತನ ದರ ಪರಿಷ್ಕರಣೆ, ವಿವರ
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Movies "ನಾವು ದಕ್ಷಿಣ ಭಾರತದವರಾಗಿದ್ರೂ ಭಾಷೆ ಬರುತ್ತೆ, ಸುಂದರವಾಗಿಯೂ ಇದ್ದೇವೆ"; ನಟಿ ಪ್ರಿಯಾಮಣಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೀವ್ರ ನಿಗಾ ಘಟಕದಲ್ಲಿ ಹೆಮ್ಮೆಯ ಕನ್ನಡಿಗ ಸಿ ಎಸ್ ಸಂತೋಷ್
ನಿನ್ನೆ ಡಕಾರ್ ರ್ಯಾಲಿಯ ನಾಲ್ಕನೇ ಹಂತದಲ್ಲಿ ಅಪಘಾತಕ್ಕೀಡಾಗಿದ್ದ ಭಾರತೀಯ ರೈಡರ್ ಕನ್ನಡಿಗ ಸಿ.ಎಸ್.ಸಂತೋಷ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಅಪಘಾತಕ್ಕೀಡಾದಾಗ ಹಸ್ಕ್ ವರ್ನಾ ತಂಡದ ರೈಡರ್ ಅವರಿಗೆ ಪ್ರಥಮ ಚಿಕಿತ್ಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
2021ರ ಡಕಾರ್ ರ್ಯಾಲಿ ಕಳೆದ ಭಾನುವಾರದಿಂದ ಆರಂಭವಾಗಿದೆ. ಈ ವರ್ಷದ ರ್ಯಾಲಿಯಲ್ಲಿ ಭಾರತದ ಸವಾರರು ಅದ್ಭುತ ಪ್ರದರ್ಶನ ನೀಡಿದ್ದಾರೆ. ನಿನ್ನೆ ಈ ರ್ಯಾಲಿಯ ನಾಲ್ಕನೇ ಹಂತದ ಸ್ಪರ್ಧೆಗಳು ನಡೆಯುತ್ತಿದ್ದವು. ಈ ಸ್ಪರ್ಧೆಯಲ್ಲಿ ಹೀರೋ ಮೋಟೋಸ್ಪೋರ್ಟ್ ತಂಡವನ್ನು ಸಿಎಸ್ ಸಂತೋಷ್ ಪ್ರತಿನಿಧಿಸುತ್ತಿದ್ದರು.
ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವೇಳೆ ಅನಿರೀಕ್ಷಿತವಾಗಿ ಅಪಘಾತಕ್ಕೀಡಾದರು. ಈ ಅಪಘಾತದಲ್ಲಿ ಅವರ ತಲೆಗೆ ಗಾಯ ಪೆಟ್ಟಾಗಿದೆ. ಅವರನ್ನು ಚಿಕಿತ್ಸೆಗೆ ರಿಯಾದ್ನ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿಡಲಾಗಿದೆ.
MOSTREAD: ಟ್ರ್ಯಾಕ್ಟರ್ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್ಗಳಿರಲು ಕಾರಣಗಳಿವು
ಅಪಘಾತಕ್ಕೀಡಾದಾಗ ಸಂತೋಷ್ ರವರಿಗೆ ಪ್ರಥಮ ಚಿಕಿತ್ಸೆ ನೀಡಿದ ಹಸ್ಕ್ ವರ್ನಾ ತಂಡದ ಪಾಲ್ ಸ್ಪ್ರಿಂಗ್ಸ್, ಅಪಘಾತ ನಡೆದ ಬಗ್ಗೆ ರ್ಯಾಲಿಮ್ಯಾನಿಯಾಕ್ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.
ಸಂತೋಷ್ ಹಾಗೂ ಹಸ್ಕ್ ವರ್ನಾ ತಂಡದ ಮತ್ತೊಬ್ಬ ಸದಸ್ಯ ಮಾರುಷಿಯೊ ಗೆರಿನಿ ನಡುವೆ ರ್ಯಾಲಿ ಆರಂಭವಾದ 135 ಕಿ.ಮೀ ದೂರದಲ್ಲಿ ಸ್ಥಳೀಯ ಸಮಯ ಬೆಳಿಗ್ಗೆ 11.45ರ ವೇಳೆಗೆ ಅಪಘಾತ ಸಂಭವಿಸಿದೆ ಎಂದು ಈ ಮಾಹಿತಿಯಲ್ಲಿ ಹೇಳಲಾಗಿದೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್
ಅಪಘಾತದ ನಂತರ ಮಾರುಷಿಯೊ ಗೆರಿನಿ ತಕ್ಷಣವೇ ಮೇಲೆ ಎದ್ದಿದ್ದಾರೆ. ಆದರೆ ಸಂತೋಷ್ ಮೇಲೆಳಲಿಲ್ಲ. ತಕ್ಷಣವೇ ರಕ್ಷಣಾ ದಳಕ್ಕೆ ಮಾಹಿತಿ ನೀಡಲಾಗಿದೆ. ನಂತರ ಸಂತೋಷ್ ಅವರ ಹೃದಯ ಬಡಿತವನ್ನು ಚೇತರಿಸಿಕೊಳ್ಳಲು ಪ್ರಥಮ ಚಿಕಿತ್ಸೆ ನೀಡಲಾಗಿದೆ.
ಮುಂದಿನ 15 ನಿಮಿಷಗಳಲ್ಲಿ 3 ಹೆಲಿಕಾಪ್ಟರ್ಗಳಲ್ಲಿ ರಕ್ಷಣಾ ತಂಡವು ಅಲ್ಲಿಗೆ ಆಗಮಿಸಿದೆ. ಅವರು ಸಂತೋಷ್ ರವರನ್ನು ಪರೀಕ್ಷಿಸಿದಾಗ ಸಂತೋಷ್ ರವರ ಹೃದಯ ಬಡಿತವಿತ್ತು ಎಂದು ಪಾಲ್ ಸ್ಪ್ರಿಂಗ್ಸ್ ಮಾಹಿತಿ ನೀಡಿದ್ದಾರೆ.
MOSTREAD: ಲಾಕ್ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ
ನಂತರ ಸಂತೋಷ್ ರವರನ್ನು ಅಲ್-ದುವಾತಿಮಿಯ ವೈದ್ಯಕೀಯ ಶಿಬಿರಕ್ಕೆ ಕರೆದೊಯ್ಯಲಾಯಿತು. ತಲೆಗೆ ಪೆಟ್ಟು ಬಿದ್ದಿದ್ದ ಕಾರಣ ಅವರನ್ನು ರಿಯಾದ್ನ ಸೌದಿ ಜರ್ಮನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂತೋಷ್ ರವರಿಗೆ ಅರಿವಳಿಕೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯಕ್ಕೆ ಅವರನ್ನು ಕೃತಕ ಕೋಮಾದಲ್ಲಿ ಇರಿಸಲಾಗಿದೆ. ಇಂದು ಸ್ಕ್ಯಾನಿಂಗ್'ಗಳನ್ನು ನಡೆಸಲಾಗುವುದು ಎಂದು ತಿಳಿದು ಬಂದಿದೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು
ಗಾಯದ ಸ್ವರೂಪ ತಿಳಿದ ನಂತರ ಚಿಕಿತ್ಸೆ ನೀಡಲಾಗುವುದು ಎಂದು ವರದಿಗಳು ತಿಳಿಸಿವೆ. ಮೋಟಾರ್ ರೇಸಿಂಗ್ ಅಭಿಮಾನಿಗಳು ಹಾಗೂ ಕ್ರೀಡಾಭಿಮಾನಿಗಳು ಸಿ ಎಸ್ ಸಂತೋಷ್ ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.