Just In
- 8 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 8 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 9 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 10 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜಾಗೃತಿ ಅಭಿಯಾನಕ್ಕಾಗಿ ಉತ್ತರಖಾಂಡ್ ತನಕ ಬೈಕ್ ರೈಡ್ ಆರಂಭಿಸಿದ ಬೆಂಗಳೂರಿನ ಮಹಿಳೆ
ಪ್ರತಿಯೊಬ್ಬ ಬೈಕ್ ರೈಡರ್ಗಳಿಗೆ ಅವಕಾಶ ಸಿಕ್ಕಾಗ ದೂರದ ಪ್ರವಾಸಗಳನ್ನು ಕೈಗೊಳ್ಳುವುದು ಇತ್ತೀಚೆಗೆ ಸಾಮಾನ್ಯವಾಗಿದೆ. ಆದರೆ ಮೋಟಾರ್ಸೈಕಲ್ ರೈಡ್ ಅನ್ನು ಅನೇಕರು ವಿವಿಧ ಕಾರಣಗಳಿಗಾಗಿ ಕೈಗೊಂಡರೂ ಅದರಲ್ಲಿ ಇನ್ನೊಬ್ಬರಿಗೆ ಸಹಾಯವಾಗಿ ಎನ್ನುವ ಉದ್ದೇಶ ತೀರಾ ಕಡಮೆ ಎಂದರೆ ತಪ್ಪಾಗುವುದಿಲ್ಲ.
ಮೋಟಾರ್ಸೈಕಲ್ ರೈಡ್ ಅನ್ನು ಕೆಲವರು ಮೋಜು ಮಸ್ತಿಗಾಗಿ ಕೈಗೊಂಡರೆ ಇನ್ನು ಕೆಲವರು ನೆಮ್ಮದಿಯ ಬದುಕಿಗಾಗಿ ಹೊಸ ಸ್ಥಳಗಳನ್ನು ಅರಸಿ ಪ್ರಯಾಣ ಬೆಳೆಸುವುದು ಸಾಮಾನ್ಯವಾಗುತ್ತಿದೆ. ಹಾಗೆಯೇ ಇನ್ನು ಕೆಲವರು ತಮ್ಮ ಅಮೂಲ್ಯ ಪ್ರಯಾಣವನ್ನು ಸಮಾಜದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾದವರನ್ನು ಬೆಂಬಲಿಸಲು ಮತ್ತು ಅವರಿಗೆ ಸಹಕಾರಿಯಾಗಲು ರೈಡ್ ಮೂಲಕ ಅಭಿಯಾನ ಕೈಗೊಳ್ಳುವುದು ತೀರಾ ಕಡಿಮೆ. ಆದರೆ ಇತ್ತೀಚೆಗೆ ಸಮಾಜದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾದವರನ್ನು ಬೆಂಬಲಿಸುವ ಉದ್ದೇಶದಿಂದ ಯುವಜನತೆಯು ಮುಂದೆ ಬರುತ್ತಿರುವುದು ಹೊಸ ಬದಲಾವಣೆಗಳಿಗೆ ಕಾರಣವಾಗುತ್ತಿದೆ.
ಹೌದು, ಶಾರೀಕವಾಗಿ ಎಲ್ಲಾ ಸರಿ ಇದ್ದರೆ ಮಾತ್ರ ಶ್ರೇಷ್ಠರು ಎನ್ನುವ ಮನೋಭಾವನೆ ತೊಡೆದುಹಾಕಿ ಸಮಾಜದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾದವರನ್ನು ಬೆಂಬಲಿಸುವ ಉದ್ದೇಶದಿಂದ ಬೈಕ್ ರೈಡ್ ಅಭಿಯಾನ ಆಂಭಿಸಿರುವ ಬೆಂಗಳೂರಿನ ಅರ್ಚನಾ ತಿಮ್ಮರಾಜು ಅವರ ಕಾರ್ಯವನ್ನು ನಾವು ಮೆಚ್ಚಲೇಬೇಕು.
ಅರ್ಚನಾ ತಿಮ್ಮರಾಜು ಅವರು ಬೈಕ್ ರೈಡ್ ಆರಂಭಿಸಿರುವುದು ಕೇವಲ ಪ್ರವಾಸ ಕೈಗೊಳ್ಳುವುದಲ್ಲ. ಬದಲಾಗಿ ಪ್ರವಾಸದ ಉದ್ದಕ್ಕೂ ಸಮಾಜದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಶ್ರವಣದೋಷ ಮಕ್ಕಳ ಬಗ್ಗೆ ವಿಶೇಷ ಕಾಳಜಿ ಮತ್ತು ಅವರಲ್ಲಿರುವ ಕೌಶಲ್ಯತೆ ಗುರುತಿಸುವ ಕುರಿತು ಬೆಂಗಳೂರಿನಿಂದ ಉತ್ತಾರಖಂಡ್ ತನಕ ಬೈಕ್ ರೈಡ್ ಆರಂಭಿಸಿದ್ದಾರೆ.
ಮತ್ತೊಂದು ಪ್ರಮುಖ ವಿಚಾರ ಅಂದ್ರೆ, ಸ್ವಂತ ಶ್ರವಣದೋಷದಿಂದ ಬಳಲಿದ್ದ ಅರ್ಚನಾ ಅವರು ಇಂದು ಶ್ರವಣದೋಷವುಳ್ಳವರಿಗೆ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸುವ ಉದ್ದೇಶದೊಂದಿಗೆ ಎನ್ಜಿಒ ಕಟ್ಟಿ ಸಾವಿರಾರು ಜನರಿಗೆ ಹೊಸ ಅವಕಾಶಗಳನ್ನು ತೆರೆದುಕೊಟ್ಟಿದ್ದಾರೆ. ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಬೆಂಗಳೂರಿನಿಂದ ಉತ್ತಾರಖಂಡ್ ತನಕ ಬೈಕ್ ಮಾಡಿ ದೇಶದ ವಿವಿಧಡೆ ಜಾಗೃತಿ ಅಭಿಯಾನ ನಡೆಸುವ ಯೋಜನೆ ಕೈಗೊಂಡಿದ್ದು, ಬೈಕ್ ರೈಡ್ ಉದ್ದೇಶಕ್ಕಾಗಿ ರಾಯಲ್ ಎನ್ಫೀಲ್ಡ್ ಕಂಪನಿಯು ಅರ್ಚನಾ ಅವರಿಗೆ ತನ್ನ ಹೊಸ ಮಿಟಿಯೊರ್ 350 ಕ್ರೂಸರ್ ಬೈಕ್ ನೀಡಿ ಸಹಕರಿಸಿದೆ.
ಮಿಟಿಯೊರ್ 350 ಕ್ರೂಸರ್ ಬೈಕ್ ಬೆಂಗಳೂರಿನಿಂದ ಆರಂಭವಾಗಿರುವ ಅರ್ಚನಾ ತಿಮ್ಮರಾಜು ಅವರ ಪ್ರಯಾಣವು ಜಾಗೃತಿ ಅಭಿಯಾನದೊಂದಿಗೆ ಉತ್ತಾರಾಖಂಡ್ ತಲುಪಲಿದ್ದು, ಉತ್ತರಾಖಂಡ್ ತಲುಪಿ ಮತ್ತೆ ಬೆಂಗಳೂರಿಗೆ ತಲುಪಲಿರುವ ಅರ್ಚನಾ ತಿಮ್ಮರಾಜು ಅವರು ವಿವಿಧ ರಾಜ್ಯಗಳಿಗೆ ಭೇಟಿ ನೀಡಿ ಅಭಿಯಾನ ನಡೆಸಲಿದ್ದಾರೆ.
MOST READ: ಪ್ರತಿ ಚಾರ್ಜ್ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ
ದೂರದ ಪ್ರಯಾಣಕ್ಕಾಗಿ ಅನುಕೂಲಕರವಾಗುವಂತೆ ರಾಯಲ್ ಎನ್ಫೀಲ್ಡ್ ಕಂಪನಿಯು ಅರ್ಚನಾ ತಿಮ್ಮರಾಜು ಅವರಿಗೆ ಮಿಟಿಯೋರ್ 350 ಕ್ರೂಸರ್ ಬೈಕ್ ಹಸ್ತಾರಿಸಿದ್ದು, ದೂರ ಪ್ರಯಾಣವನ್ನು ಸುಲಭಗೊಳಿಸಲು ಹೊಸ ಬೈಕ್ ಉತ್ತಮವಾಗಿದೆ.
ಮಿಟಿಯೊರ್ 350 ಬೈಕ್ ಮಾದರಿಯು 349-ಸಿಸಿ ಫ್ಯೂಲ್ ಇಂಜೆಕ್ಷೆಡ್ ಸಿಂಗಲ್ ಸಿಲಿಂಡರ್ ಹೊಂದಿದ್ದು, 5-ಸ್ಪೀಡ್ ಗೇರ್ಬಾಕ್ಸ್ನೊಂದಿಗೆ 20.2-ಬಿಎಚ್ಪಿ ಮತ್ತು 27-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.
MOST READ: ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ
ಹೈ ಎಂಡ್ ಮಾದರಿಯಾದ ಮಿಟಿಯೋರ್ 350 ಸೂಪರ್ನೊವಾದಲ್ಲಿ ಡ್ಯುಯಲ್-ಟೋನ್ ಬಣ್ಣದ ಆಯ್ಕೆಯನ್ನು ಹೊಂದಿದ್ದು, ಇದು ಪ್ರೀಮಿಯಂ ಸೀಟ್ ಫಿನಿಶಿಂಗ್, ವಿಂಡ್ಸ್ಕ್ರೀನ್ ಮತ್ತು ಕ್ರೋಮ್ ಇಂಡಿಕೇಟರ್ ಸಹ ಹೊಂದಿದೆ. ಜೊತೆಗೆ ಹೊಸ ಬೈಕಿನಲ್ಲಿ ಟಿಪ್ಲರ್ ಸ್ಕ್ರೀನ್ ಒಳಗೊಂಡಿರುವ ಟರ್ನ್-ಬೈ-ಟರ್ನ್ ಗೂಗಲ್ ನ್ಯಾವಿಗೇಷನ್, ಬ್ಲೂಟೂತ್ ಮೂಲಕ ಕನೆಕ್ಟ್ ಮಾಡಬಹುದಾದ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಪಡೆದುಕೊಂಡಿದೆ.