Just In
- 1 hr ago ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- 2 hrs ago Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ.. 320 ಕಿ.ಮೀ ವೇಗದಲ್ಲಿ ಓಡುತ್ತೆ ರೈಲು!
- 2 hrs ago ಬ್ರಿಟೀಷ್ ಮಾರುಕಟ್ಟೆಯನ್ನು ಆಳಲು ಹೊರಟ ಭಾರತೀಯ ಬೈಕ್: ಯುಕೆ ನಲ್ಲಿ ಟ್ರಯಂಫ್ಗೆ ನೇರ ಹಣಾಹಣಿ!
- 2 hrs ago Tata Curvv Vs Citroen Basalt: ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?
Don't Miss!
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- News Namma Metro Purple Line: ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ, ಕಾರಣಗಳೇನು?
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Movies ಲಂಡನ್ನಲ್ಲಿ ಬಾಡಿಗೆಗೆ ಪಡೆದಿದ್ದ ಬಂಗಲೆಯನ್ನೇ ಖರೀದಿಸಿದ್ರಾ ಪ್ರಭಾಸ್?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜಾಗೃತಿ ಅಭಿಯಾನಕ್ಕಾಗಿ ಉತ್ತರಖಾಂಡ್ ತನಕ ಬೈಕ್ ರೈಡ್ ಆರಂಭಿಸಿದ ಬೆಂಗಳೂರಿನ ಮಹಿಳೆ
ಪ್ರತಿಯೊಬ್ಬ ಬೈಕ್ ರೈಡರ್ಗಳಿಗೆ ಅವಕಾಶ ಸಿಕ್ಕಾಗ ದೂರದ ಪ್ರವಾಸಗಳನ್ನು ಕೈಗೊಳ್ಳುವುದು ಇತ್ತೀಚೆಗೆ ಸಾಮಾನ್ಯವಾಗಿದೆ. ಆದರೆ ಮೋಟಾರ್ಸೈಕಲ್ ರೈಡ್ ಅನ್ನು ಅನೇಕರು ವಿವಿಧ ಕಾರಣಗಳಿಗಾಗಿ ಕೈಗೊಂಡರೂ ಅದರಲ್ಲಿ ಇನ್ನೊಬ್ಬರಿಗೆ ಸಹಾಯವಾಗಿ ಎನ್ನುವ ಉದ್ದೇಶ ತೀರಾ ಕಡಮೆ ಎಂದರೆ ತಪ್ಪಾಗುವುದಿಲ್ಲ.
ಮೋಟಾರ್ಸೈಕಲ್ ರೈಡ್ ಅನ್ನು ಕೆಲವರು ಮೋಜು ಮಸ್ತಿಗಾಗಿ ಕೈಗೊಂಡರೆ ಇನ್ನು ಕೆಲವರು ನೆಮ್ಮದಿಯ ಬದುಕಿಗಾಗಿ ಹೊಸ ಸ್ಥಳಗಳನ್ನು ಅರಸಿ ಪ್ರಯಾಣ ಬೆಳೆಸುವುದು ಸಾಮಾನ್ಯವಾಗುತ್ತಿದೆ. ಹಾಗೆಯೇ ಇನ್ನು ಕೆಲವರು ತಮ್ಮ ಅಮೂಲ್ಯ ಪ್ರಯಾಣವನ್ನು ಸಮಾಜದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾದವರನ್ನು ಬೆಂಬಲಿಸಲು ಮತ್ತು ಅವರಿಗೆ ಸಹಕಾರಿಯಾಗಲು ರೈಡ್ ಮೂಲಕ ಅಭಿಯಾನ ಕೈಗೊಳ್ಳುವುದು ತೀರಾ ಕಡಿಮೆ. ಆದರೆ ಇತ್ತೀಚೆಗೆ ಸಮಾಜದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾದವರನ್ನು ಬೆಂಬಲಿಸುವ ಉದ್ದೇಶದಿಂದ ಯುವಜನತೆಯು ಮುಂದೆ ಬರುತ್ತಿರುವುದು ಹೊಸ ಬದಲಾವಣೆಗಳಿಗೆ ಕಾರಣವಾಗುತ್ತಿದೆ.
ಹೌದು, ಶಾರೀಕವಾಗಿ ಎಲ್ಲಾ ಸರಿ ಇದ್ದರೆ ಮಾತ್ರ ಶ್ರೇಷ್ಠರು ಎನ್ನುವ ಮನೋಭಾವನೆ ತೊಡೆದುಹಾಕಿ ಸಮಾಜದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾದವರನ್ನು ಬೆಂಬಲಿಸುವ ಉದ್ದೇಶದಿಂದ ಬೈಕ್ ರೈಡ್ ಅಭಿಯಾನ ಆಂಭಿಸಿರುವ ಬೆಂಗಳೂರಿನ ಅರ್ಚನಾ ತಿಮ್ಮರಾಜು ಅವರ ಕಾರ್ಯವನ್ನು ನಾವು ಮೆಚ್ಚಲೇಬೇಕು.
ಅರ್ಚನಾ ತಿಮ್ಮರಾಜು ಅವರು ಬೈಕ್ ರೈಡ್ ಆರಂಭಿಸಿರುವುದು ಕೇವಲ ಪ್ರವಾಸ ಕೈಗೊಳ್ಳುವುದಲ್ಲ. ಬದಲಾಗಿ ಪ್ರವಾಸದ ಉದ್ದಕ್ಕೂ ಸಮಾಜದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾಗಿರುವ ಶ್ರವಣದೋಷ ಮಕ್ಕಳ ಬಗ್ಗೆ ವಿಶೇಷ ಕಾಳಜಿ ಮತ್ತು ಅವರಲ್ಲಿರುವ ಕೌಶಲ್ಯತೆ ಗುರುತಿಸುವ ಕುರಿತು ಬೆಂಗಳೂರಿನಿಂದ ಉತ್ತಾರಖಂಡ್ ತನಕ ಬೈಕ್ ರೈಡ್ ಆರಂಭಿಸಿದ್ದಾರೆ.
ಮತ್ತೊಂದು ಪ್ರಮುಖ ವಿಚಾರ ಅಂದ್ರೆ, ಸ್ವಂತ ಶ್ರವಣದೋಷದಿಂದ ಬಳಲಿದ್ದ ಅರ್ಚನಾ ಅವರು ಇಂದು ಶ್ರವಣದೋಷವುಳ್ಳವರಿಗೆ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸುವ ಉದ್ದೇಶದೊಂದಿಗೆ ಎನ್ಜಿಒ ಕಟ್ಟಿ ಸಾವಿರಾರು ಜನರಿಗೆ ಹೊಸ ಅವಕಾಶಗಳನ್ನು ತೆರೆದುಕೊಟ್ಟಿದ್ದಾರೆ. ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಬೆಂಗಳೂರಿನಿಂದ ಉತ್ತಾರಖಂಡ್ ತನಕ ಬೈಕ್ ಮಾಡಿ ದೇಶದ ವಿವಿಧಡೆ ಜಾಗೃತಿ ಅಭಿಯಾನ ನಡೆಸುವ ಯೋಜನೆ ಕೈಗೊಂಡಿದ್ದು, ಬೈಕ್ ರೈಡ್ ಉದ್ದೇಶಕ್ಕಾಗಿ ರಾಯಲ್ ಎನ್ಫೀಲ್ಡ್ ಕಂಪನಿಯು ಅರ್ಚನಾ ಅವರಿಗೆ ತನ್ನ ಹೊಸ ಮಿಟಿಯೊರ್ 350 ಕ್ರೂಸರ್ ಬೈಕ್ ನೀಡಿ ಸಹಕರಿಸಿದೆ.
ಮಿಟಿಯೊರ್ 350 ಕ್ರೂಸರ್ ಬೈಕ್ ಬೆಂಗಳೂರಿನಿಂದ ಆರಂಭವಾಗಿರುವ ಅರ್ಚನಾ ತಿಮ್ಮರಾಜು ಅವರ ಪ್ರಯಾಣವು ಜಾಗೃತಿ ಅಭಿಯಾನದೊಂದಿಗೆ ಉತ್ತಾರಾಖಂಡ್ ತಲುಪಲಿದ್ದು, ಉತ್ತರಾಖಂಡ್ ತಲುಪಿ ಮತ್ತೆ ಬೆಂಗಳೂರಿಗೆ ತಲುಪಲಿರುವ ಅರ್ಚನಾ ತಿಮ್ಮರಾಜು ಅವರು ವಿವಿಧ ರಾಜ್ಯಗಳಿಗೆ ಭೇಟಿ ನೀಡಿ ಅಭಿಯಾನ ನಡೆಸಲಿದ್ದಾರೆ.
MOST READ: ಪ್ರತಿ ಚಾರ್ಜ್ಗೆ ಬರೋಬ್ಬರಿ 240ಕಿ.ಮೀ ಮೈಲೇಜ್ ನೀಡುವ ಇವಿ ಸ್ಕೂಟರ್ ಬಿಡುಗಡೆ ಮಾಡಲಿದೆ ಓಲಾ
ದೂರದ ಪ್ರಯಾಣಕ್ಕಾಗಿ ಅನುಕೂಲಕರವಾಗುವಂತೆ ರಾಯಲ್ ಎನ್ಫೀಲ್ಡ್ ಕಂಪನಿಯು ಅರ್ಚನಾ ತಿಮ್ಮರಾಜು ಅವರಿಗೆ ಮಿಟಿಯೋರ್ 350 ಕ್ರೂಸರ್ ಬೈಕ್ ಹಸ್ತಾರಿಸಿದ್ದು, ದೂರ ಪ್ರಯಾಣವನ್ನು ಸುಲಭಗೊಳಿಸಲು ಹೊಸ ಬೈಕ್ ಉತ್ತಮವಾಗಿದೆ.
ಮಿಟಿಯೊರ್ 350 ಬೈಕ್ ಮಾದರಿಯು 349-ಸಿಸಿ ಫ್ಯೂಲ್ ಇಂಜೆಕ್ಷೆಡ್ ಸಿಂಗಲ್ ಸಿಲಿಂಡರ್ ಹೊಂದಿದ್ದು, 5-ಸ್ಪೀಡ್ ಗೇರ್ಬಾಕ್ಸ್ನೊಂದಿಗೆ 20.2-ಬಿಎಚ್ಪಿ ಮತ್ತು 27-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.
MOST READ: ಅತಿ ಕಡಿಮೆ ಬೆಲೆಯಲ್ಲಿ ಹೆಚ್ಚು ಮೈಲೇಜ್ ನೀಡುವ ರೆಟ್ರೊ ಎಲೆಕ್ಟ್ರಿಕ್ ಬೈಕ್ ಬಿಡುಗಡೆ
ಹೈ ಎಂಡ್ ಮಾದರಿಯಾದ ಮಿಟಿಯೋರ್ 350 ಸೂಪರ್ನೊವಾದಲ್ಲಿ ಡ್ಯುಯಲ್-ಟೋನ್ ಬಣ್ಣದ ಆಯ್ಕೆಯನ್ನು ಹೊಂದಿದ್ದು, ಇದು ಪ್ರೀಮಿಯಂ ಸೀಟ್ ಫಿನಿಶಿಂಗ್, ವಿಂಡ್ಸ್ಕ್ರೀನ್ ಮತ್ತು ಕ್ರೋಮ್ ಇಂಡಿಕೇಟರ್ ಸಹ ಹೊಂದಿದೆ. ಜೊತೆಗೆ ಹೊಸ ಬೈಕಿನಲ್ಲಿ ಟಿಪ್ಲರ್ ಸ್ಕ್ರೀನ್ ಒಳಗೊಂಡಿರುವ ಟರ್ನ್-ಬೈ-ಟರ್ನ್ ಗೂಗಲ್ ನ್ಯಾವಿಗೇಷನ್, ಬ್ಲೂಟೂತ್ ಮೂಲಕ ಕನೆಕ್ಟ್ ಮಾಡಬಹುದಾದ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಪಡೆದುಕೊಂಡಿದೆ.